ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ ಹಿನ್ನೆಲೆ,, ಕರುನಾಡು ಗಡಿಯಲ್ಲಿ ಕಟ್ಟೆಚ್ಚರ…

ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ ಹಿನ್ನಲೆ ಕೇರಳದಿಂದ ರಾಜ್ಯಕ್ಕೆ ಪ್ರಾಣಿಗಳ ಸಾಗಾಣಿಕೆಯನ್ನು ನಿಷೇಧಿಸಲಾಗಿದು. ಹಾಗೂ ಹೆಚ್.ಡಿ.ಕೋಟೆ ತಾಲೂಕಿನ ಬಾವಲಿ ಚೆಕ್ ಪೋಸ್ಟ್​ನಲ್ಲಿ ವಿಶೇಷ ತಂಡ ರಚನೆ ಮಾಡಿ ತಪಾಸಣೆ ನಡೆಸಲಾಗುತ್ತಿದೆ…

ಆಫ್ರಿಕನ್ ಹಂದಿ ಜ್ವರ ಪತ್ತೆಯಾದ ಹಿನ್ನಲೆ ಇದೀಗ ಕರ್ನಾಟಕ ಕೇರಳ ಗಡಿಯಲ್ಲಿ ಕಟ್ಟೆಚ್ಚರ ವಹಿಸಿದ್ದಾರೆ. ಇದು ಹಂದಿಗಳಲ್ಲಿ ಕಾಣಿಸಿಕೊಳ್ಳುವ ರೋಗವಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಕೇರಳದಿಂದ ರಾಜ್ಯಕ್ಕೆ ಪ್ರಾಣಿಗಳ ಸಾಗಾಣಿಕೆಯನ್ನು ನಿಷೇಧಿಸಲಾಗಿದೆ. ಜೊತೆಗೆ ಹೆಚ್.ಡಿ.ಕೋಟೆ ತಾಲೂಕಿನ ಬಾವಲಿ ಚೆಕ್ ಪೋಸ್ಟ್​ನಲ್ಲಿ ವಿಶೇಷ ತಂಡ ರಚನೆ ಮಾಡಿ, ತಪಾಸಣೆ ಮಾಡಲಾಗುತ್ತಿದೆ. ಇದೀಗ ಸ್ಥಳಕ್ಕೆ ಹೆಚ್.ಡಿ ಕೋಟೆ ತಹಶೀಲ್ದಾರ್ ಸಣ್ಣ ರಾಮಪ್ಪ, ತಾಲೂಕು ಆರೋಗ್ಯಧಿಕಾರಿ ರವಿಕುಮಾರ್ ಹಾಗೂ ಪಶು ಇಲಾಖೆ ನಿರ್ದೇಶಕ ಪ್ರಸನ್ನ ಅವರು ಭೇಟಿ‌ ನೀಡಿ ಪರಿಶೀಲನೆ ನಡೆಸಿದ್ದಾರೆ ಜೊತೆಗೆ ಹಂದಿಗಳನ್ನು ಎರಡು ಫಾರ್ಮ್‌ಗಳಲ್ಲಿ ಕೊಲ್ಲಲು ಆದೇಶವನ್ನು ಜಿಲ್ಲಾಧಿಕಾರಿಗಳು ನೀಡಿದ್ದಾರೆ.

ಆ.19 ರಂದು ಕೇರಳದ ಕನಿಚಾರ್ ಗ್ರಾಮದಲ್ಲಿ ಆಫ್ರಿಕನ್ ಹಂದಿಜ್ವರ ಏಕಾಏಕಿ ವರದಿಯಾಗಿದ್ದು, ಈ ಬಗ್ಗೆ ಜಿಲ್ಲಾ ಪಶುಸಂಗೋಪನೆ ಅಧಿಕಾರಿಗಳು ದೃಢಪಟ್ಟಿಸಿದ್ದರು. ನಂತರ, ಜಿಲ್ಲಾಧಿಕಾರಿಗಳು ಮಲೆಯಂಪಾಡಿಯಲ್ಲಿರುವ ಮತ್ತು 10 ಕಿಮೀ ವ್ಯಾಪ್ತಿಯಲ್ಲಿರುವ ಹಂದಿಗಳನ್ನು ಕೊಲ್ಲಲು ಆದೇಶ ನೀಡಿದ್ದು, ಅದನ್ನು ಶಿಷ್ಟಾಚಾರದ ಪ್ರಕಾರ ಶವಗಳನ್ನು ಹೂಳಲು ಹೇಳಿದ್ದರೆ.ಜೊತೆಗೆ ಹಂದಿ ಮಾಂಸದ ವಿತರಣೆ, ಮಾರಾಟ ಮತ್ತು ಸಾಗಣೆಯನ್ನು ಮೂರು ತಿಂಗಳವರೆಗೆ ನಿಷೇಧ ಮಾಡಲಾಗಿದೆ ಎಂದು ಹೇಳಲಾಗುತ್ತದೆ

ಇನ್ನೂ ಹಂದಿ ಸಾಕಾಣಿಕೆ ಕೇಂದ್ರದ ಸುತ್ತಲಿನ ಒಂದು ಕಿ.ಮೀ ಪ್ರದೇಶವನ್ನು ಸೋಂಕಿತ ಪ್ರದೇಶವೆಂದು ಘೋಷಿಸಲಾಗಿದ್ದು, ಮತ್ತು 10 ಕಿಮೀ ವ್ಯಾಪ್ತಿಯನ್ನು ರೋಗ ಕಣ್ಗಾವಲು ವಲಯ ಎಂದು ಅಧಿಕೃತ ಮೂಲಗಳು ತಿಳಿಸಿತ್ತು. ಈ ಪ್ರದೇಶದಲ್ಲಿ ಹಂದಿ ಮಾಂಸದ ವಿತರಣೆ ಮತ್ತು ಮಾರಾಟ, ಸಾಗಣೆಯನ್ನು ಮೂರು ತಿಂಗಳವರೆಗೆ ನಿಷೇಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

  • Related Posts

    ನಂಜನಗೂಡು ತಾಲ್ಲೂಕಿನ ಗ್ರಾಮಗಲ್ಲಿ ಸಿ. ಸಿ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಗುದ್ದಲಿ ಪೂಜೆ ನೆರೆವೇರಿಸಿದ್ದ ದರ್ಶನ್ ದ್ರುವನಾರಾಯಣ್

    29, ಜೂಲೈ 2025, ನಂಜನಗೂಡು ತಾಲ್ಲೂಕಿನ ಬೆಂಡಗಳ್ಳಿ ಗ್ರಾಮದಲ್ಲಿ ಸಾಮಾನ್ಯ ವರ್ಗದ ಬೀದಿಯಲ್ಲಿ ಸಿ. ಸಿ ರಸ್ತೆ ಮತ್ತು ಚರಂಡಿ ಕಾಮಗಾರಿಗೆ 20 ಲಕ್ಷ ರೂ ವೆಚ್ಚದಲ್ಲಿ ಗುದ್ದಲಿ ಪೂಜೆ ಮತ್ತು ಬದನವಾಳು ಗ್ರಾಮ ಪಂಚಾಯಿತಿಯ ಮಹದೇವನಗರ ಗ್ರಾಮದ ಮುಸ್ಲಿಂ ಸಮಾಜದ…

    ಶ್ರೀ ಕ್ಷೇತ್ರ ಸುತ್ತೂರು ಜಾತ್ರಾ ಮಹೋತ್ಸವದ ಅಂಗವಾಗಿ ಭಜನಾ ಮೇಳದ ಸಮಾರೋಪ ಕಾರ್ಯಕ್ರಮ

    ಪೂಜ್ಯ ಶ್ರೀ ಶಿವರಾತ್ರಿ ದೇಶಿಕೇಂದ್ರ ಶ್ರೀಗಳ ದಿವ್ಯ ನೇತೃತ್ವದಲ್ಲಿ ನಡೆಯುತ್ತಿರುವ ಮೈಸೂರಿನ ಶ್ರೀ ಕ್ಷೇತ್ರ ಸುತ್ತೂರು ಜಾತ್ರಾ ಮಹೋತ್ಸವದ ಅಂಗವಾಗಿ ಭಜನಾ ಮೇಳದ ಸಮಾರೋಪ ಕಾರ್ಯಕ್ರಮ ಜರುಗಿತುಮ್. ಕಪಿಲೆಯ ತೀರದಲ್ಲಿ ಪುಣ್ಯಕ್ಷೇತ್ರವನ್ನು ಸ್ಥಾಪಿಸಿದ ಪೂಜ್ಯ ಆದಿ ಜಗದ್ಗುರು ಶಿವರಾತ್ರೀಶ್ವರ ಶಿವಯೋಗಿಗಳ ತಮ್ಮ…

    Leave a Reply

    Your email address will not be published. Required fields are marked *

    error

    Enjoy this blog? Please spread the word :)

    error: Content is protected !!