ಚನ್ನಮ್ಮಾ ರಾಯಣ್ಣ ಸ್ವಾತಂತ್ರ್ಯ ಹೋರಾಟಗಾರರು ಅಲ್ಲ ಎಂಬ ಹೇಳಿಕೆ ವಿರೋಧಿಸಿ ಜಯಕರ್ನಾಟಕ ಸಂಘಟನೆ ಪ್ರತಿಭಟನೆ

ಬೆಳಗಾವಿ(ಆ 21), ಅಥಣಿ ತಾಲೂಕಿನಲ್ಲಿ ಕಳೆದ ಎರಡು ದಿನಗಳ ಹಿಂದೆ ಬೆಳಗಾವಿ ನಿವಾಸಿಯಾದ ಗೌರಂಗ ಗೆಜ್ಜೆ ಎಂಬ ವ್ಯಕ್ತಿ ತನ್ನ ಇತ್ತೀಚಿನ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಮಾಡುತ್ತಾ ವೀರರಾಣಿ ಕಿತ್ತೂರು ಚನ್ನಮ್ಮಾ ಹಾಗೂ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣನವರ ಬಗ್ಗೆ ಹೇಳುತ್ತಾ ಅವರು ಯಾರು ಸ್ವಾತಂತ್ರ್ಯ ಹೋರಾಟಗಾರರು ಅಲ್ಲ ಎಂಬ ಹೇಳಿಕೆಯನ್ನು ನೀಡಿರುತ್ತಾನೆ.

ಇದು ಆರು ಕೋಟಿ ಕನ್ನಡಿಗರ ಮತ್ತು ದೇಶ ಪ್ರೇಮಿಗಳ ಕಂಗೆಣ್ಣಿಗೆ ಗುರಿಯಾಗಿದ್ದಾನೆ. ರಾಣಿ ಚನ್ನಮ್ಮಾ ಮತ್ತು ಸಂಗೋಳ್ಳಿ ರಾಯಣ್ಣಾ ಪ್ರಥಮ ಸ್ವಾತಂತ್ರ್ಯ ಸಂಗ್ರಾಮಕ್ಕಿಂತ ಮೊದಲು ಹೋರಾಡಿದ ವ್ಯಕ್ತಿಗಳು ಇವರಾಗಿದ್ದಾರೆ. ಬಹುಶಃ ಇದನ್ನು ನಾಡದ್ರೋಹಿಗಳು ಮರೆತಿದ್ದಾರೆ. ಬೆಳಗಾವಿಯ ಗಡಿ ಭಾಗದಲ್ಲಿ ಕೋಮು-ಗಲಿಬೆ ಸೃಷ್ಠಿಸುವಂತಹ ಇಂತಹ ವ್ಯಕ್ತಿಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಂಡು ಬೆಳಗಾವಿ ಜಿಲ್ಲೆಯಿಂದ ಗಡಿಪಾರು ಮಾಡಬೇಕೆಂದು ಜಯಕರ್ನಾಟಕ ಸಂಘಟನೆ ಒತ್ತಾಯಿ ಪ್ರತಿಭಟನೆ ನಡೆಸಿದ್ದಾರೆ.

ಜೊತೆಗೆ ಇತನದ್ದು ಇದು ಮೊದಲನೆಯ ಸಲ ಅಲ್ಲ ಪದೇ ಪದೇ ಈ ಇಂತಹ ಹೇಳಿಕೆಗಳನ್ನು ನೀಡುತ್ತಾ ಬಂದಿರುತ್ತಾನೆ. ಇವನ ಮೇಲೆ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಜಯ ಕರ್ನಾಟಕ ಸಂಘಟನೆ ಆತನಿಗೆ ಬುದ್ದಿಕಲಿಸಬೇಕಾಗುತ್ತದೆ. ಕೂಡಲೆ ಮಾನ್ಯ ಕರ್ನಾಟಕ ಸರಕಾರ ಇಂಥವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಜಯ ಕರ್ನಾಟಕ ಸಂಘಟನೆ ಅಧಿಕಾರಿಗೆ ಮನವಿಯನ್ನು ಸಲ್ಲಿಸಿದ್ದಾರೆ.

ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ಪ್ರಹ್ಲಾದ್ ವಾಗ್ಮೊರೆ, ತಾಲೂಕ ಅಧ್ಯಕ್ಷ ಆಕಾಶ್ ನಂದಗಾoವ್, ರಿಯಾಜ್ ಬಿರಾದಾರ್, ಅಶೋಕ್, ಭಜಂತ್ರಿ, ಮನೋಜ್ ಕಟಗೇರಿ, ಸುನಿಲ್, ಅಭಿಷೇಕ್ ತೇಲಿ, ಬೀರಪ್ಪ, ತುರಾಯಿ ಸಂಜಯ್ ವಾಗ್ಮೊಡೆ ಸುನಿಲ್, ಮಂಗಸುಳಿ ಗಂಗಾಧರ್, ತುರಾಯಿ ಅಕ್ಷಯ್, ಪೂಜಾರಿ ಸಚಿನ್, ಕಾಂಬಳೆ ಬಸವರಾಜ್, ನಂದಗಾವ್ ಶ್ರೀಧರ್ ಪಾಟೀಲ್, ನಾಗರಾಜ್ ಇನ್ನಿತರ ಉಪಸ್ಥಿತರಿದ್ದರು

  • Related Posts

    ದೇವಸ್ಥಾನದ  ಕಾಮಗಾರಿಗೆ  25 ಲಕ್ಷ  ಹಣ ಬಿಡುಗಡೆ ಮಾಡಿದ ಲಕ್ಷ್ಮಿ ಹೆಬ್ಬಾಳ್ಕರ್…

    ಬೆಳಗಾವಿ ಜಿಲ್ಲೆಯ ಬಾಳೇಕುಂದ್ರಿ ಕೆ.ಎಚ್ ಗ್ರಾಮದಲ್ಲಿ ನೂತನ ಶ್ರೀ ಮಹಾಲಕ್ಷ್ಮಿ ದೇವಸ್ಥಾನ ಕಟ್ಟಡದ ನಿರ್ಮಾಣದ ಕಾಮಗಾರಿಗೆ ಮೊದಲನೇ ಕಂತಿನಲ್ಲಿ 25 ಲಕ್ಷ ರೂ,ಗಳನ್ನು ಬಿಡುಗಡೆ ಮಾಡಿಕೊಟ್ಟರು.  ಈ  ಹಿನ್ನೆಲೆಯಲ್ಲಿ ಇಂದು ದೇವಸ್ಥಾನ ಕಮಿಟಿ ಹಾಗೂ ಗ್ರಾಮಸ್ಥರ ವತಿಯಿಂದ ಲಕ್ಷ್ಮಿ ಹೆಬ್ಬಾಳ್ಕರ್  ಗೌರವ-ಸನ್ಮಾನ…

    ಅಥಣಿಯಲ್ಲಿ ಶ್ರೀ ಲಕ್ಷ್ಮಣ ಸವದಿ ಪಾರ್ಕ್ ಹಾಗೂ ವೃತ್ತದ ಉದ್ಘಾಟನೆ…

    ಈ ವೇಳೆ ಮಾಜಿ ಉಪ ಮುಖ್ಯಮಂತ್ರಿಗಳು ಅಥಣಿಯ ಜನಪ್ರಿಯ ಶಾಸಕರಾದ ಶ್ರೀ ಲಕ್ಷ್ಮಣ ಸವದಿಯವರು ನೆರವೇರಿಸಿ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಈ ಸಂದರ್ಭದಲ್ಲಿ ಪ,ಪೂ,ಶ್ರೀ ಮರುಳಸಿದ್ಧ ಮಹಾಸ್ವಾಮೀಜಿಗಳು ಶೆಟ್ಟರಮಠ ಅಥಣಿ,ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಶ್ರೀ ಸದಾಶಿವ ಬುಟಾಳಿ,ಶ್ರೀ ಶಿವಾನಂದ ದಿವಾನಮಳ,ಸಂಕೋನಟ್ಟಿ…

    Leave a Reply

    Your email address will not be published. Required fields are marked *

    error

    Enjoy this blog? Please spread the word :)

    error: Content is protected !!