ಜಿಲ್ಲೆಯಲ್ಲಿ ಪಹಣಿ ತಿದ್ದುಪಡಿ ಆಂದೋಲನಒಂದೇ ದಿನದಲ್ಲಿ 3 ಸಾವಿರಕ್ಕೂ ಹೆಚ್ಚು ಪಹಣಿ ತಿದ್ದುಪಡಿಗೆ ಅಸ್ತು; ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ಮಾಹಿತಿ

ದಾವಣಗೆರೆ,ಆ.23(ಕರ್ನಾಟಕ ವಾರ್ತೆ) ರೈತರು ತಮ್ಮ ಭೂಮಿಯ ದಾಖಲೆಗಳನ್ನು ಸರಿಪಡಿಸಲು ತಾಲ್ಲೂಕು ಕಚೇರಿಗೆ ಹೋಗುವುದು ಸಾಮಾನ್ಯ ಆದರೆ ಜಿಲ್ಲಾ ಆಡಳಿತ ಒಂದೇ ದಿನದಲ್ಲಿ ಮೂರು ಸಾವಿರಕ್ಕಿಂತ ಹೆಚ್ಚು ಪಹಣಿ ತಿದ್ದುಪಡಿ ಪ್ರಕರಣಗಳನ್ನು ಇತ್ಯರ್ಥ ಮಾಡಿ ಸರಿಪಡಿಸಿದ ದಾಖಲೆಗಳನ್ನು ರೈತರ ಮನೆ ಬಾಗಿಲಿಗೆ ತುಲುಪಿಸುವ ವ್ಯವಸ್ಥೆಯನ್ನು ಜಿಲ್ಲಾ ಆಡಳಿತ ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ. ತಿಳಿಸಿದ್ದಾರೆ.

ಜಿಲ್ಲೆಯ ಆರೂ ತಾಲ್ಲೂಕುಗಳಲ್ಲಿ ಒಟ್ಟು 4600 ಕ್ಕಿಂತ ಹೆಚ್ಚು ಪಹಣಿ ತಿದ್ದುಪಡಿ ಪ್ರಕರಣಗಳು ಬಾಕಿ ಇದ್ದು ರೈತರು ಇದರಿಂದ ಸಾಕಷ್ಟು ತೊಂದರೆಯನ್ನು ಅನುಭವಿಸುತ್ತಿದ್ದರು. ಇದನ್ನು ಜಿಲ್ಲಾ ಆಡಳಿತ ಮನಗಂಡು ಶೀಘ್ರದಲ್ಲಿ ತಿದ್ದುಪಡಿ ಮಾಡಿ ದಾಖಲೆಗಳನ್ನು ಸರಿಪಡಿಸಿಕೊಡಲು ಉದ್ದೇಶಿಸಿ ಆಗಸ್ಟ್ 23 ರಂದು ಜಿಲ್ಲೆಯ ಎಲ್ಲಾ ತಾಲ್ಲೂಕು ಕಚೇರಿಗಳಲ್ಲಿ ಮೂಲ ಕಡತಗಳೊಂದಿಗೆ ತಿದ್ದುಪಡಿ ಮಾಡುವ ಪ್ರಕ್ರಿಯೆಯನ್ನು ಕೈಗೊಳ್ಳಲಾಯಿತು.


ತಿದ್ದಪಡಿ ಪ್ರಕರಣಗಳಲ್ಲಿ ಹೆಸರು ತಪ್ಪಾಗಿರುವುದು, ವಿಸ್ತೀರ್ಣ ವ್ಯತ್ಯಾಸ, ಇಂಡೀಕರಣ ಆಗದೇ ಇರುವುದು, ಎರಡು ಭಾರಿ ಮ್ಯುಟೇಷನ್ ದಾಖಲು, ಕಾಲಂ 3 ಮತ್ತು 9 ರಲ್ಲಿ ತಪ್ಪಾಗಿ ನಮೂದು ಆಗಿರುವುದು ಸೇರಿದಂತೆ ವಿವಿಧ ಬಗೆಯ 9 ತರಹದ ತಿದ್ದುಪಡಿಗಳನ್ನು ಸರಿಪಡಿಸಲಾಯಿತು.

  • Related Posts

    ಜಿಲ್ಲಾ ಪೊಲೀಸ್ ವತಿಯಿಂದ ರಸ್ತೆ ಸುರಕ್ಷತಾ ಮಾಸಾಚರಣೆಯ ಸಮಾರೋಪ ಸಮಾರಂಭ…

    ದಿನಾಂಕ: 01-01-2025 ರಿಂದ 31-01-2025 ಒಂದು ತಿಂಗಳ ಕಾಲ ಪ್ರತಿ ವರ್ಷದಂತೆ ರಸ್ತೆ ಸುರಕ್ಷತಾ ಮಾಸಾಚರಣೆಯನ್ನು ಜಿಲ್ಲಾ ಪೊಲೀಸ್ ವತಿಯಿಂದ ಹಮ್ಮಿಕೊಂಡಿದ್ದು, ಇಂದು ದಾವಣಗೆರೆ ನಗರದ ರೇಣುಕಾ ಮಂದಿರದ ಕಲ್ಯಾಣ ಮಂಟಪದಲ್ಲಿ ರಸ್ತೆ ಸುರಕ್ಷತಾ ಮಾಸಾಚರಣೆಯ ಸಮಾರೋಪ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ…

    ಶಾಲಾ ಆವರಣ ಅನೈತಿಕ ತಾಣಗಳಾಗಬಾರದು, ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ಸಿಗಬೇಕು, ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್….

    ದಾವಣಗೆರೆ, ಜನವರಿ.28 : ಜಿಲ್ಲೆಯಲ್ಲಿನ ಎಲ್ಲಾ ಸರ್ಕಾರಿ ಶಾಲೆಗಳಿಗೆ ಕಾಂಪೌಂಡ್ ಸೇರಿದಂತೆ ಕೊಠಡಿ, ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಆಸನ ವ್ಯವಸ್ಥೆಯನ್ನು ಕಲ್ಪಿಸುವ ಮೂಲಕ ಗುಣಮಟ್ಟದ ಶಿಕ್ಷಣ ಭವಿಷ್ಯದ ನಾಗರಿಕರಾಗುವ ಪ್ರತಿ ಮಕ್ಕಳಿಗೆ ಸಿಗುವಂತೆ ಮಾಡಬೇಕು, ಆದರೆ ಸಂಜೆಯ ವೇಳೆ…

    Leave a Reply

    Your email address will not be published. Required fields are marked *

    error: Content is protected !!