ನೂತನ ಎಸ್ಪಿ ಆಗಿ ಉಮಾ ಪ್ರಶಾಂತ್ ಅಧಿಕಾರ ಸ್ವೀಕಾರ…

ದಾವಣಗೆರೆ(ಆ 25)..ದಾವಣಗೆರೆ ಜಿಲ್ಲೆಯ ನೂತನ ಎಸ್‌,ಪಿ ಯಾಗಿ ಉಮಾ ಪ್ರಶಾಂತ್ ರವರು ಇಂದು ಅಧಿಕಾರವನ್ನು ಸ್ವೀಕರಿಸಿದ್ದಾರೆ, ದಾವಣಗೆರೆಯ ಎಸ್ ಪಿ ಡಾ ಅರುಣ್ ರವರು ಕಾರ್ಯನಿರ್ವಹಿಸುತ್ತಿದ್ದು ಗುಲ್ಬರ್ಗ ಜಿಲ್ಲೆಗೆ ಕಾರಣಾಂತರಗಳಿಂದ ವರ್ಗಾವಣೆಗೊಂಡಿದ್ದರಿಂದ ಅವರ ಜಾಗಕ್ಕೆ ಚಿಕ್ಕಮಗಳೂರು ಜಿಲ್ಲೆಯ ಉಮಾ ಪ್ರಶಾಂತ್ ರವರು ದಾವಣಗೆರೆಯ ನೂತನ ಎಸ್,ಪಿ ಯಾಗಿ ಅಧಿಕಾರವನ್ನು ಇಂದು ಸ್ವೀಕರಿಸಿದರು,

ಈ ಹಿಂದೆ ಇದ್ದ ಎಸ್ ಪಿ ಅರುಣ್ ರವರು ಕೆಲವು ದಿನಗಳಲ್ಲಿ ಹಲವಾರು ಚಟುವಟಿಕೆಗಳಿಗೆ ಕಡಿವಾಣ ಹಾಕಿದ್ದರು ಆದರೆ ಕಾರಣಾಂತರಗಳಿಂದ ಇಂದು ಅವರನ್ನು ಗುಲ್ಬರ್ಗ ಜಿಲ್ಲೆಯ ಎಸ್ ಪಿ ಯಾಗಿ ವರ್ಗಾವಣೆ ಮಾಡಲಾಗಿದ್ದು ಅವರ ಜಾಗಕ್ಕೆ ಚಿಕ್ಕಮಂಗಳೂರು ಜಿಲ್ಲೆಯಲ್ಲಿ ಖಡಕ್ ಎಸ್,ಪಿ ಯಾಗಿ, ಅಪರಾಧಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ್ದು, ಟ್ರಾಫಿಕ್ ಸೇರಿದಂತೆ ಬೇರೆ ಬೇರೆ ರೀತಿಯ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದರು. ಚಿಕ್ಕಮಂಗಳೂರಿನಲ್ಲಿ ಕಾರ್ಯವೈಖರ್ಯಗಳಿಂದಲೇ ಜನರು ಮನಸು ಗೆದ್ದಿದ್ದರು ಇದೀಗ ದಾವಣಗೆರೆಯ ನೂತನ ಎಸ್‌.ಪಿ ಯಾಗಿ ಇಂದು ಅಧಿಕಾರ ಸ್ವೀಕರಿಸಿದ್ದಾರೆ

ಈ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಅವರು ಪ್ರತಿಯೊಂದು ಜಿಲ್ಲೆಯಲ್ಲಿ ಅದರದೇ ಆದಂತಹ ಸಮಸ್ಯೆಗಳು ಕಾರ್ಯವೈಖರಿಗಳು ಇದ್ದೇ ಇರುತ್ತದೆ ನಾನು ಮೊದಲಿಗೆ ಕಾನೂನು ಮತ್ತು ಸುವ್ಯವಸ್ಥೆ ಬಗ್ಗೆ ಹೆಚ್ಚು ಗಮನ ಹರಿಸುತ್ತೇನೆ. ಜೊತೆಗೆ ಯಾವುದೇ ಕ್ರೈಂ ಆಗದಂತೆ ತಡೆಯುತ್ತೇನೆ, ಜೊತೆಗೆ ರಾಷ್ಟ್ರೀಯ ಹೆದ್ದಾರಿ ದಾವಣಗೆರೆ ಸಮೀಪ ಇರುವುದರಿಂದ ಹಲವಾರು ಆಕ್ಸಿಡೆಂಟ್ ಆಗುತ್ತವೆ ಅದರ ಬಗ್ಗೆಯೂ ಹೆಚ್ಚು ಗಮನ ಹರಿಸುತ್ತೇನೆ.

ಜೊತೆಗೆ ಮಹಿಳಾ ಮತ್ತು ಮಕ್ಕಳ ದೌರ್ಜನಕ್ಕೆ ಸಂಬಂಧಪಟ್ಟಂತೆ ಕೇಸ್ ಗಳಾಗಲಿ ಅಥವಾ ಸಮಸ್ಯೆಗಳ ಬಗ್ಗೆ ಹೆಚ್ಚು ಗಮನ ಹರಿಸುತ್ತೇನೆ, ಎಲ್ಲದಕ್ಕೂ ಮಿಗಿಲಾಗಿ ದಾವಣಗೆರೆಯಲ್ಲಿ ಉತ್ತಮ ಅಧಿಕಾರಿಗಳು ಇದ್ದು ಜನಸ್ನೇಹಿ ಪೊಲೀಸ್ ಮಾಡಲು ಮುಂದಾಗಿದ್ದು ಜನರ ಸಹಕಾರದೊಂದಿಗೆ ಒಳ್ಳೆ ರೀತಿಯಲ್ಲಿ ಕಾನೂನು ಬದ್ಧವಾಗಿ ಕೆಲಸ ಮಾಡುತ್ತೇನೆ, ಎಂದು ತಿಳಿಸಿದ್ದಾರೆ

  • Related Posts

    ಜಿಲ್ಲಾ ಪೊಲೀಸ್ ವತಿಯಿಂದ ರಸ್ತೆ ಸುರಕ್ಷತಾ ಮಾಸಾಚರಣೆಯ ಸಮಾರೋಪ ಸಮಾರಂಭ…

    ದಿನಾಂಕ: 01-01-2025 ರಿಂದ 31-01-2025 ಒಂದು ತಿಂಗಳ ಕಾಲ ಪ್ರತಿ ವರ್ಷದಂತೆ ರಸ್ತೆ ಸುರಕ್ಷತಾ ಮಾಸಾಚರಣೆಯನ್ನು ಜಿಲ್ಲಾ ಪೊಲೀಸ್ ವತಿಯಿಂದ ಹಮ್ಮಿಕೊಂಡಿದ್ದು, ಇಂದು ದಾವಣಗೆರೆ ನಗರದ ರೇಣುಕಾ ಮಂದಿರದ ಕಲ್ಯಾಣ ಮಂಟಪದಲ್ಲಿ ರಸ್ತೆ ಸುರಕ್ಷತಾ ಮಾಸಾಚರಣೆಯ ಸಮಾರೋಪ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ…

    ಶಾಲಾ ಆವರಣ ಅನೈತಿಕ ತಾಣಗಳಾಗಬಾರದು, ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ಸಿಗಬೇಕು, ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್….

    ದಾವಣಗೆರೆ, ಜನವರಿ.28 : ಜಿಲ್ಲೆಯಲ್ಲಿನ ಎಲ್ಲಾ ಸರ್ಕಾರಿ ಶಾಲೆಗಳಿಗೆ ಕಾಂಪೌಂಡ್ ಸೇರಿದಂತೆ ಕೊಠಡಿ, ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಆಸನ ವ್ಯವಸ್ಥೆಯನ್ನು ಕಲ್ಪಿಸುವ ಮೂಲಕ ಗುಣಮಟ್ಟದ ಶಿಕ್ಷಣ ಭವಿಷ್ಯದ ನಾಗರಿಕರಾಗುವ ಪ್ರತಿ ಮಕ್ಕಳಿಗೆ ಸಿಗುವಂತೆ ಮಾಡಬೇಕು, ಆದರೆ ಸಂಜೆಯ ವೇಳೆ…

    Leave a Reply

    Your email address will not be published. Required fields are marked *

    error: Content is protected !!