ಕಾಂಗ್ರೆಸ್ ಸೇರ್ತಾರಾ… ಎಂ.ಪಿ ರೇಣುಕಾಚಾರ್ಯ…?

ದಾವಣಗೆರೆ, ಆ.26: ಬಿಜೆಪಿ ಮುಖಂಡರ ವಲಸೆ ಬಗ್ಗೆ ತೆರೆಮರೆಯಲ್ಲಿ ಚಟುವಟಿಕೆಗಳು ನಡೆದಿರುವ ಹೊತ್ತಿನಲ್ಲೇ ಪಕ್ಷದ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಅವರು ಕಾಂಗ್ರೆಸ್ ನಾಯಕರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿರುವುದು ಹಲವರು ಅನುಮಾನ ಉಂಟಾಗಿದೆ‌.

ಎಂ.ಪಿ.ರೇಣುಕಾಚಾರ್ಯ ಅವರು ತಮ್ಮ ಹೊನ್ನಾಳಿ ತಾಲೂಕನ್ನು ಬರಪೀಡಿತ ಪ್ರದೇಶ ಎಂದು ಘೋಷಿಸುವಂತೆ ಉಭಯ ನಾಯಕರಿಗೆ ರೇಣುಕಾಚಾರ್ಯ ಮನವಿ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಇವರು ಕಾಂಗ್ರೆಸ್ ಸೇರುವವರಿದ್ದಾರೆಯೇ ಎಂಬ ಪ್ರಶ್ನೆಗಳು ಸಹ ಮೂಡಿದೆ


ರೇಣುಕಾಚಾರ್ಯ, ನಾನು ಬಿಜೆಪಿಯಲ್ಲೇ ಇದ್ದೇನೆ. ನಾನು ಕಾಂಗ್ರೆಸ್ ಸೇರುವ ಬಗ್ಗೆ ಮಾತನಾಡಲು ಭೇಟಿಯಾಗಿಲ್ಲ. ನನಗೆ ಕಾಂಗ್ರೆಸ್‌ ನಿಂದ ಆಹ್ವಾನವೂ ಬಂದಿಲ್ಲ. ವರಮಹಾಲಕ್ಷ್ಮೀ ಹಬ್ಬದ ಶುಭಾಶಯ ತಿಳಿಸಿ ಹೊನ್ನಾಳಿ, ನ್ಯಾಮತಿಯನ್ನು ಬರಪೀಡಿತ ತಾಲೂಕು ಎಂದು ಘೋಷಿಸಲು ಮನವಿ ಮಾಡಲು ಆಗಮಿಸಿದ್ದೆ.

ನಾನು ಚುನಾವಣೆಯಲ್ಲಿ ಸೋತಿದ್ದರೂ ಆ ತಾಲೂಕಿನ ಜನರು ರಾಜಕೀಯ ಭವಿಷ್ಯ ನೀಡಿದ್ದಾರೆ. ಹೀಗಾಗಿ ಬರಪೀಡಿತ ತಾಲೂಕು ಆಗಿ ಘೋಷಿಸಲು ಮನವಿ ಮಾಡಿದ್ದೇನೆ ಎಂದರು.

ಎಸ್ ಎಸ್ ಮಲ್ಲಿಕಾರ್ಜುನ್ ಭೇಟಿ: ಸಚಿವರಾದ ಎಸ್ ಎಸ್ ಮಲ್ಲಿಕಾರ್ಜುನ್ ಅವರನ್ನ ಭೇಟಿಯಾಗಿ ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕುಗಳನ್ನ ಬರ ತಾಲೂಕುಗಳ ಪಟ್ಟಿಗೆ ಸೇರ್ಪಡೆಗೊಳಿಸಲು ಶಿಫಾರಸ್ಸು ಮಾಡಲು ಮನವಿ ನೀಡಿ

ಕಂದಾಯ ಸಚಿವರ ಭೇಟಿ; ಕಂದಾಯ ಸಚಿವರಾದ ಶ್ರೀ ಕೃಷ್ಣ ಬೈರೇಗೌಡ ಅವರನ್ನ ಭೇಟಿಯಾಗಿ ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕುಗಳನ್ನ ಬರ ತಾಲೂಕುಗಳ ಪಟ್ಟಿಗೆ ಸೇರಿಸಬೇಕೆಂದು ಮನವಿ ನೀಡಿದೆನು.

  • Related Posts

    ನವದೆಹಲಿಯಲ್ಲಿ ತೆಂಗು,ಅಡಿಗೆ ಬೆಳೆಯುವ ರೈತರ ಸಂಕಷ್ಟ ನಿವಾರಣೆಗೆ ಮನವಿ ಸಲ್ಲಿಸಿದ ಡಾ|| ಪ್ರಭಾ ಮಲ್ಲಿಕಾರ್ಜುನ್

    ನವದೆಹಲಿಯ ಭವನದಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಕರ್ನಾಟಕದ ಸಂಸದರು ಮತ್ತು ಮುಖಂಡರ ನಿಯೋಗವು ಭೇಟಿಯಾಗಿ, ತೆಂಗು ಮತ್ತು ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಸಂಕಷ್ಟ ನಿವಾರಣೆಗಾಗಿ ತುರ್ತು ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ…

    ಕೇಂದ್ರದಿಂದ ಕರ್ನಾಟಕ್ಕೆ 8.73 ಲಕ್ಷ ಮೆಟ್ರಿಕ್‌ ಟನ್‌ ಯೂರಿಯಾ ನೀಡಿದರೂ, ಸಿಎಂ ಹೇಳಿರುವುದು ಹಸಿ ಸುಳ್ಳ – ಬಿಜೆಪಿ ಆರೋಪ.

    ಕೇಂದ್ರ ಸರ್ಕಾರ ಕರ್ನಾಟಕ್ಕೆ 8.73 ಲಕ್ಷ ಮೆಟ್ರಿಕ್‌ ಟನ್‌ ಯೂರಿಯಾ ನೀಡಿದರೂ, ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಯೂರಿಯಾವನ್ನು ಸರಿಯಾಗಿ ವಿತರಿಸುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿರುವುದು ಹಸಿ ಸುಳ್ಳು!! ಬಿಜೆಪಿ ಆರೋಪ ಮಾಡಿದ್ದೆ ಕಾಳಸಂತೆಯಲ್ಲಿ ಯೂರಿಯಾ ಅಕ್ರಮವಾಗಿ ಮಾರಾಟವಾಗುತ್ತಿದೆ ಎಂದು…

    Leave a Reply

    Your email address will not be published. Required fields are marked *

    error

    Enjoy this blog? Please spread the word :)

    error: Content is protected !!