10ನೇ ತರಗತಿ ವಿದ್ಯಾರ್ಥಿಯ ಕೊಲೆ; ಕುಟುಂಬಸ್ಥರಿಂದ ಪ್ರತಿಭಟನೆ

ಉತ್ತರಪ್ರದೇಶ (ಆ, 29),, ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ  10ನೇ ತರಗತಿಯ ವಿದ್ಯಾರ್ಥಿಗೆ ಅನ್ಯ ಸಮುದಾಯಕ್ಕೆ ಸೇರಿದ ಸಹಪಾಠಿ ವಿದ್ಯಾರ್ಥಿಗಳ ತಂಡ ಬ್ಯಾಟ್‌ನಿಂದ ಹಲ್ಲೆ ನಡೆಸಿದ ಕಾರಣ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ನಡೆದಿದೆ,ಪ್ರಯಾಗರಾಜ್‌ನ ಖೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಪುರ ದತ್ತು ಗ್ರಾಮದ ಬಳಿ  16 ವರ್ಷದ ಸತ್ಯಂ ಶರ್ಮಾ ಮೃತ ವಿದ್ಯಾರ್ಥಿ. ಘಟನೆಯಿಂದ ಕೋಪಗೊಂಡ ಬಾಲಕನ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಖೇರಿ ಚೌಕದ ಬಳಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ. ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ. ಸ್ಥಳದಲ್ಲಿ ಉದ್ವಿಗ್ನತೆ ಉಂಟಾಗಿರುವ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಸತ್ಯಂ ಶರ್ಮಾ ಅವರ  ಸಂಬಂಧಿ ಬಾಲಕಿ ಕೂಡ ಅದೇ ಶಾಲೆಯಲ್ಲಿ ಓದುತ್ತಿದ್ದರು. ಶಾಲೆಯಲ್ಲಿ ಕೆಲವು ವಿದ್ಯಾರ್ಥಿಗಳು ಬಾಲಕನೊಂದಿಗೆ ಜಗಳವಾಡಿದ್ದರು. ಈ ವೇಳೆ ಶಾಲೆಯ ಶಿಕ್ಷಕರೊಬ್ಬರು ಸಮಾಧಾನಪಡಿಸಿ ಕಳುಹಿಸಿದ್ದರು. ಆದರೆ ಮನೆಗೆ ತೆರಳುವಾಗ ಮತ್ತೆ ಗಲಾಟೆಯಾಗಿ ಕೊಲೆ ನಡೆದಿದೆ ಎನ್ನಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಯೋರ್ವರು ಈ ಕುರಿತು ಮಾಹಿತಿಯನ್ನು ನೀಡಿದ್ದು, ಕಾಲೇಜಿನಲ್ಲಿ ವಿದ್ಯಾರ್ಥಿಗಳ ನಡುವೆ ವಾಗ್ವಾದ ನಡೆದಿದೆ. ಬಳಿಕ ಮನೆಗೆ ತೆರಳುವಾಗ ವಿದ್ಯಾರ್ಥಿ ಮೇಲೆ ಬ್ಯಾಟ್‌ನಿಂದ ಹಲ್ಲೆ ನಡೆಸಲಾಗಿದೆ. ಗಾಯಗೊಂಡ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ಅವರು ತಿಳಿಸಿದ್ದಾರೆ.

ಈ ಕುರಿತು ಪ್ರಕರಣ ದಾಖಲಾಗಿದು, ಸದ್ಯ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ಬಾಲಕ ಸಂಬಂಧಿ ಬಾಲಕಿಗೆ ಕಿರುಕುಳ ನೀಡಿದ್ದನ್ನು ಪ್ರಶ್ನಿಸಿದ್ದಕ್ಕೆ ಕೊಲೆ ನಡೆದಿದೆ ಎಂದು ಆರೋಪಿಸಲಾಗಿತ್ತು. ಆದರೆ  ಸುದ್ದಿ ಸುಳ್ಳು ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಅಶಾಂತಿ ಹೆಚ್ಚಾದ ಕಾರಣ ಅಂಗಡಿಗಳನ್ನು ಮುಚ್ಚಲಾಗಿತ್ತು. ಸಂಜೆಯವರೆಗೂ ಗಲಾಟೆ ಮುಂದುವರಿದಿದ್ದು, ಪೊಲೀಸರು ಸ್ಥಳದಲ್ಲಿ ಹೆಚ್ಚುವರಿ ಪಡೆಗಳನ್ನು ನಿಯೋಜಿಸಿ ಬಿಗಿ ಭದ್ರತೆಯನ್ನು ಕೈಗೊಂಡಿದ್ದಾರೆ.

  • Related Posts

    ಕಳವಾಗಿದ್ದ 34 ಗ್ರಾಂ ತೂಕದ ಬಂಗಾರದ 01 ಕೈ ಉಂಗುರ ಮತ್ತು 03 ಬಂಗಾರದ ಬಳೆಗಳು ಮತ್ತು ಒಂದು ಐಫೋನ್ ಮೊಬೈಲ್ ಫೋನ್ ಸೇರಿ 2.12.900/- ವಶ

    ಈ ಮೂಲಕ ನಿಮಗೆ ತಿಳಿಯಪಡಿಸುವುದೇನೆಂದರೆ ದಾವಣಗೆರೆ ರೈಲ್ವೆ ಪೊಲೀಸ್ ಠಾಣೆಯ ಮೊಕದ್ದಮೆ ಸಂಖ್ಯೆ 49/2023 ಕಲಂ 379 ಐಪಿಸಿ ಪ್ರಕರಣದ ನೇದ್ದರಲ್ಲಿ ದಿನಾಂಕ 03-09-2023 ರಂದು ಕಳವು ಪ್ರಕರಣ ವರದಿಯಾಗಿದ್ದು ಸದರಿ ಪ್ರಕರಣದ ಆರೋಪಿ ಮತ್ತು ಮಾಲು ಪತ್ತೆ ಸಂಬಂಧ ಮಾನ್ಯ…

    ಅಶ್ಲೀಲ ವಿಡಿಯೋದ ಬ್ಲ್ಯಾಕ್‌ಮೇಲ್‌, ವಿದ್ಯಾರ್ಥಿನಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ..

    ದಾವಣಗೆರೆ s 04 : ತನ್ನ ಅಶ್ಲೀಲ ವಿಡಿಯೋ ಹರಿಯಬಿಡುವ ಬೆದರಿಕೆಯಿಂದ ಕಂಗಾಲಾಗಿ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದ 17 ವರ್ಷ ವಿದ್ಯಾರ್ಥಿನಿಯೊಬ್ಬರು ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದಾರೆ. ದಾವಣಗೆರೆ ಜಿಲ್ಲೆಯ ಜಗಳೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ವಿದ್ಯಾರ್ಥಿನಿ ಕೆಲ ದಿನಗಳ ಹಿಂದೆ…

    Leave a Reply

    Your email address will not be published. Required fields are marked *

    error: Content is protected !!