ಮಾನಸಿಕ ಮತ್ತು ಬೌದ್ಧಿಕ ವಿಕಾಸಕ್ಕೆ ಕ್ರೀಡೆ ಪೂರಕ ಕ್ರೀಡೆ ಜೀವನದ ಅವಿಭಾಜ್ಯ ಅಂಗ: ಜಿಲ್ಲಾಧಿಕಾರಿ

ರಾಷ್ಟ್ರೀಯ ಕ್ರೀಡಾ ದಿನದ ಆಚರಣೆಯ ಅಂಗವಾಗಿ ದಿನಾಂಕ 29-08-2023 ರಂದು ಅಮೃತ ವಿದ್ಯಾಲಯಂ ಶಾಲೆಯಲ್ಲಿ ಇಂಟರ್ ಸ್ಕೂಲ್ ಹಬ್ ಲೆವೆಲ್ ಚೆಸ್ ಟೂರ್ನಮೆಂಟ್ ನ್ನು(ಅಂತರ್ ಶಾಲಾ ಮಟ್ಟದ ಚದುರಂಗ ಸ್ಪರ್ಧೆ) ಏರ್ಪಡಿಸಲಾಗಿತ್ತು.
ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ದಾವಣಗೆರೆ ಜಿಲ್ಲೆಯ ಜಿಲ್ಲಾಧಿಕಾರಿಗಳಾದ ಶ್ರೀಯುತ ವೆಂಕಟೇಶ್ ಎಂ.ವಿ ಇವರು ಆಗಮಿಸಿದ್ದರು. ಅತಿಥಿಗಳನ್ನು ಅಮೃತ ವಿದ್ಯಾಲಯಂ ಶಾಲೆಯ ವಿದ್ಯಾರ್ಥಿನಿಯರು ತಿಲಕವಿಟ್ಟು ವೇದ ಘೋಷಗಳ ಮೂಲಕ ಸ್ವಾಗತಿಸಿದರು. ಶ್ರೀಯುತರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಕ್ಕಳ ಮಾನಸಿಕ ಮತ್ತು ಬೌದ್ಧಿಕ ವಿಕಾಸಕ್ಕೆ ಕ್ರೀಡೆ ಪೂರಕವಾಗಿದೆ. ಕ್ರೀಡೆ ಜೀವನದ ಅವಿಭಾಜ್ಯ ಅಂಗವಾಗಬೇಕು ಎಂದು ಹೇಳಿದರು.3


ಶ್ರೀಯುತ ದಿನೇಶ್ .ಕೆ .ಶೆಟ್ಟಿ ಅಧ್ಯಕ್ಷರು ದಾವಣಗೆರೆ ಡಿಸ್ಟ್ರಿಕ್ಟ್ ಸ್ಪೋರ್ಟ್ಸ್ ಅಸೋಸಿಯೇಷನ್ ಇವರು ಅತಿಥಿಗಳಾಗಿ ಆಗಮಿಸಿ ಜಗತ್ತು ಸ್ಪರ್ಧಾತ್ಮಕವಾಗಿದೆ, ಚದುರಂಗದಾಟವು ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಜೀವನಕ್ಕೆ ಅಣಿಗೊಳಿಸಲು ಸಹಾಯಕವಾಗಿದೆ ಮಕ್ಕಳ ಬೌದ್ಧಿಕ ಶಕ್ತಿ ಬೆಳವಣಿಗೆ ಹಾಗೂ ಜೀವನದ ಹಾಗೂ ಹೋಗುಗಳು ಎದುರಿಸಲು ಚದುರಂಗ ಸಹಕಾರಿಯಾಗುತ್ತದೆ ಚದುರಂಗದಾಟವು ಸಾವಿರಾರು ವರ್ಷಗಳಿಂದ ಪೂರ್ವಜರು ಹಾಡಿಕೊಂಡು ಬರುತ್ತಿದ್ದು ಇಂತಹ ಕ್ರೀಡೆಗಳು ಇನ್ನು ಉನ್ನತ ಮಟ್ಟಕ್ಕೆ ಪ್ರೋತ್ಸಾಹ ಸಿಕ್ಕು ಮಕ್ಕಳು ಬೆಳೆಯುವಂತಾಗಲಿ ಎಂದು ವಿದ್ಯಾರ್ಥಿಗಳನ್ನು ಕುರಿತು ಹಿತನುಡಿಗಳನ್ನು ಆಡಿದರು.

ಈ ಕಾರ್ಯಕ್ರಮದಲ್ಲಿ ದಾವಣಗೆರೆ ಚೆಸ್ ಅಸೋಸಿಯೇಷನ್ ಕಾರ್ಯದರ್ಶಿಗಳಾದ ಯುವರಾಜ್ .ಟಿ .ಹಾಗೂ ಅಮೃತ ವಿದ್ಯಾಲಯಂ ಶಾಲೆಯ ಪ್ರಾಂಶುಪಾಲರಾದ ಶ್ರೀಮತಿ ಪ್ರತಿಭಾ. ಎನ್ ಉಪ ಪ್ರಾಂಶುಪಾಲರಾದ ಶ್ರೀಯುತ ಪ್ರತೀಕ್ ಶೆಟ್ಟಿ ಹಾಗೂ ಅಮೃತ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀಯುತ ಎನ್ .ಸಿ .ವಿವೇಕ್ ಮತ್ತು ಅಮೃತ ವಿದ್ಯಾಲಯಂ ಶಾಲೆಯ ಆಡಳಿತಾಧಿಕಾರಿಯಾದ ಶ್ರೀಯುತ ನಂದೀಶ್ ರಾವ್ ಪುತ್ಲಿ, ಶಾಲೆಯ ಫಿಸಿಕಲ್ ಡೈರೆಕ್ಟರ್ಗಳಾದ ಕುಮಾರಸ್ವಾಮಿ ಮೇಘರಾಜ್ ಸಂತೋಷ್ ಕುಮಾರ್ , ಹೇಮಂತ್ ಶ್ವೇತಾ ಹಾಗೂ ಶಾಲೆಯ ಎಲ್ಲ ಸಿಬ್ಬಂದಿ ವರ್ಗದವರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿಕೊಟ್ಟರು ನಡೆಸಿಕೊಟ್ಟರು. 18 ವಿವಿಧ CBSE ಶಾಲೆಗಳಿಂದ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಚದುರಂಗ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

  • Related Posts

    ದಾವಣಗೆರೆಯ ಜಿಲ್ಲಾ ಪೊಲೀಸ್ ಚಿಣ್ಣರ ಅಂಗಳ ಶಾಲೆಗೆ ಭೇಟಿ ನೀಡಿದ ಡಾ. ಜಿ. ಪರಮೇಶ್ವರ್

    ಸನ್ಮಾನ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ದಾವಣಗೆರೆ ನಗರಕ್ಕೆ ವಿವಿಧ ಕಾರ್ಯಕ್ರಮಗಳ ಬೇಟಿ ನೀಡಿದ ಸಂದರ್ಭದಲ್ಲಿ ಪಿಜೆ ಬಡಾವಣೆಯ ಪೊಲೀಸ್ ವಸತಿ ಗೃಹ ಸಮುಚ್ಛಯದ ಆವರಣದಲ್ಲಿರುವ ದಾವಣಗೆರೆ ಜಿಲ್ಲಾ ಪೊಲೀಸ್ ಚಿಣ್ಣರ ಅಂಗಳ ಶಾಲೆಗೆ ಭೇಟಿ ನೀಡಿದರು. ನಂತರ…

    “ವಿಷ ಕೊಡಿ ಇಲ್ಲವೇ ಯೂರಿಯಾ ಕೊಡಿ” ದಾವಣಗೆರೆಯಲ್ಲಿ ಬಿಜೆಪಿ ಇಂದ ಪ್ರತಿಭಟನೆ

    ದಾವಣಗೆರೆ ಜಿಲ್ಲಾ ಭಾರತೀಯ ಜನತಾ ಪಕ್ಷದ ವತಿಯಿಂದ ದಾವಣಗೆರೆಯಲ್ಲಿ ಪ್ರತಿಭಟನೆ ಮಾಡಲಾಯಿತು. ರೈತರಿಗೆ ಸಮಯಕ್ಕೆ ಸರಿಯಾಗಿ ಯೂರಿಯಾ ಗೊಬ್ಬರ ಕೊಡದೇ, ರೈತರ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆ ಹಾಗೂ ತನ್ನ ತಪ್ಪನ್ನು ಕೇಂದ್ರ ಸರ್ಕಾರದ…

    Leave a Reply

    Your email address will not be published. Required fields are marked *

    error

    Enjoy this blog? Please spread the word :)

    error: Content is protected !!