ಸರ್ಕಾರದ ಮಹತ್ವಾಕಾಂಕ್ಷಿ, ನಾಲ್ಕನೇ ಗ್ಯಾರಂಟಿ ಗೃಹಲಕ್ಷ್ಮೀ ಯೋಜನೆಯ ಉದ್ಘಾಟನಾ ಸಮಾರಂಭ

ಮೈಸೂರು, ಆ.30 : ಚುನಾವಣಾ ಪ್ರಣಾಳಿಕೆಯನ್ನು ಸಮರ್ಪಕವಾಗಿ ಜಾರಿಮಾಡಬೇಕಿರುವುದು ಯಾವುದೇ ಸರ್ಕಾರದ ರಾಜಧರ್ಮ. ಅದರಂತೆ ನಮ್ಮ ಸರ್ಕಾರ ಗೃಹಲಕ್ಮೀ ಯೋಜನೆಯನ್ನು ಜಾರಿ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು . ಈವರೆಗೆ ಕೊಟ್ಟ ಮಾತಿನಂತೆ ಯಾವ ಸರ್ಕಾರವೂ ನಡೆದುಕೊಂಡಿಲ್ಲ ಎಂದರೆ ಅತಿಶಯೋಕ್ತಿಯಲ್ಲ. ನಮ್ಮ ಸರ್ಕಾರ ಮುಂದಿನ 5 ವರ್ಷಗಳಲ್ಲಿ ಜನರಿಗೆ ನೀಡಿರುವ ಭರವಸೆಗಳನ್ನು ನೂರಕ್ಕೆ ನೂರು ಈಡೇರಿಸುವ ವಿಶ್ವಾಸ, ಭರವಸೆ ನಮಗಿದೆ.

ನಾವು ಜನರ ಮುಂದಿಟ್ಟಿದ್ದೆವು. ಗೃಹಜ್ಯೋತಿ, ಶಕ್ತಿ ಯೋಜನೆ, ಅನ್ನಭಾಗ್ಯ, ನಾಲ್ಕನೇ ಗ್ಯಾರಂಟಿಯಾಗಿ ಗೃಹಲಕ್ಷ್ಮೀ ಯೋಜನೆಯನ್ನು ಇಂದು ಜಾರಿಮಾಡಲಾಗಿದೆ ಕರ್ನಾಟಕದಲ್ಲಿ 1.26 ಕೋಟಿ ಕುಟುಂಬಗಳಿವೆ. ಆ ಕುಟುಂಬಗಳ ಯಜಮಾನಿಯಾರಿಗೆ 2000 ರೂ.ಗಳನ್ನು ಅವರ ಖಾತೆಗೆ ಇಂದು ಜಮಾ ಮಾಡಲಾಗಿದೆ. ಈ ಯೋಜನೆಗೆ 1.10 ಕೋಟಿ ಜನ ನೋಂದಾಯಿಸಿಕೊಂಡಿದ್ದಾರೆ.

01 ಜೂನ್ 11 ರಂದು ಶಕ್ತಿ ಯೋಜನೆ ಜಾರಿಯಾಗಿದ್ದು, 48,500 ಕೋಟಿ ಮಹಿಳೆಯರು ಉಚಿತವಾಗಿ ಸರ್ಕಾರಿ ಬಸ್ಸುಗಳಲ್ಲಿ ಪ್ರಯಾಣ ಮಾಡಿದ್ದಾರೆ.

02 ಅನ್ನಭಾಗ್ಯ ಕಾರ್ಯಕ್ರಮವನ್ನು ಜುಲೈ 10 ರಂದು ಜಾರಿಗೆ ತಂದೆವು. ಕೇಂದ್ರ ಸರ್ಕಾರ ಅಕ್ಕಿಯನ್ನು ನೀಡದೇ ಹೋದರೂ ನಾವು 170 ರೂ.ಗಳನ್ನು ಅಕ್ಕಿ ಸಿಗುವವರೆಗೂ ಪ್ರತಿ ಬಿಪಿಎಲ್, ಅಂತ್ಯೋದಯ ಕಾರ್ಡುದಾರರ ಖಾತೆಗೆ ಜಮಾ ಮಾಡಿದ್ದೇವೆ,

03. ಜುಲೈ ತಿಂಗಳಿಂದ ಗೃಹಜ್ಯೋತಿ ಕಾರ್ಯಕ್ರಮದಡಿ 200 ಯೂನಿಟ್ ವರೆಗೆ ವಿದ್ಯುತ್ ಬಳಸುವವರಿಗೆಲ್ಲಾ ಉಚಿತ ವಿದ್ಯುತ್ ಒದಗಿಸಿ ಶೂನ್ಯ ಬಿಲ್ ನೀಡುತ್ತಿದ್ದೇವೆ. ಈ ಯೋಜನೆಗೆ 1.56 ಕೋಟಿ ಜನ ನೋಂದಾಯಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಐತಿಹಾಸಿಕ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಗಿದೆ ಎಂದರು.

ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಸಂಸದ ರಾಹುಲ್ ಗಾಂಧಿ, ರಾಜ್ಯಸಭಾ ಸದಸ್ಯ ಹಾಗೂ ಕರ್ನಾಟಕ ಉಸ್ತುವಾರಿ ರಂದೀಪ್ ಸುರ್ಜೇವಾಲಾ, ಕೆ.ಸಿ.ವೇಣುಗೋಪಾಲ್, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಮಾಜ ಕಲ್ಯಾಣ ಸಚಿವ ಡಾ: ಕೆ.ಹೆಚ್.ಮುನಿಯಪ್ಪ, ಸಚಿವರಾದ ಕೃಷ್ಣಬೈರೇಗೌಡ, ಲಕ್ಷ್ಮೀ ಹೆಬ್ಬಾಳ್ಕರ್, ಬೈರತಿ ಸುರೇಶ್, ಚೆಲುವರಾಯಸ್ವಾಮಿ, ಕೆ.ಹೆಚ್.ಮುನಿಸ್ವಾಮಿ, ಡಾ:ಜಿ.ಪರಮೇಶ್ವರ್, ಕೆ.ಎನ್.ರಾಜಣ್ಣ, ಪಿ.ನರೇಂದ್ರಸ್ವಾಮಿ, ಬೋಸರಾಜು , ಶಾಸಕರು ಉಪಸ್ಥಿತರಿದ್ದರು.

  • Related Posts

    ನಂಜನಗೂಡು ತಾಲ್ಲೂಕಿನ ಗ್ರಾಮಗಲ್ಲಿ ಸಿ. ಸಿ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಗುದ್ದಲಿ ಪೂಜೆ ನೆರೆವೇರಿಸಿದ್ದ ದರ್ಶನ್ ದ್ರುವನಾರಾಯಣ್

    29, ಜೂಲೈ 2025, ನಂಜನಗೂಡು ತಾಲ್ಲೂಕಿನ ಬೆಂಡಗಳ್ಳಿ ಗ್ರಾಮದಲ್ಲಿ ಸಾಮಾನ್ಯ ವರ್ಗದ ಬೀದಿಯಲ್ಲಿ ಸಿ. ಸಿ ರಸ್ತೆ ಮತ್ತು ಚರಂಡಿ ಕಾಮಗಾರಿಗೆ 20 ಲಕ್ಷ ರೂ ವೆಚ್ಚದಲ್ಲಿ ಗುದ್ದಲಿ ಪೂಜೆ ಮತ್ತು ಬದನವಾಳು ಗ್ರಾಮ ಪಂಚಾಯಿತಿಯ ಮಹದೇವನಗರ ಗ್ರಾಮದ ಮುಸ್ಲಿಂ ಸಮಾಜದ…

    ಶ್ರೀ ಕ್ಷೇತ್ರ ಸುತ್ತೂರು ಜಾತ್ರಾ ಮಹೋತ್ಸವದ ಅಂಗವಾಗಿ ಭಜನಾ ಮೇಳದ ಸಮಾರೋಪ ಕಾರ್ಯಕ್ರಮ

    ಪೂಜ್ಯ ಶ್ರೀ ಶಿವರಾತ್ರಿ ದೇಶಿಕೇಂದ್ರ ಶ್ರೀಗಳ ದಿವ್ಯ ನೇತೃತ್ವದಲ್ಲಿ ನಡೆಯುತ್ತಿರುವ ಮೈಸೂರಿನ ಶ್ರೀ ಕ್ಷೇತ್ರ ಸುತ್ತೂರು ಜಾತ್ರಾ ಮಹೋತ್ಸವದ ಅಂಗವಾಗಿ ಭಜನಾ ಮೇಳದ ಸಮಾರೋಪ ಕಾರ್ಯಕ್ರಮ ಜರುಗಿತುಮ್. ಕಪಿಲೆಯ ತೀರದಲ್ಲಿ ಪುಣ್ಯಕ್ಷೇತ್ರವನ್ನು ಸ್ಥಾಪಿಸಿದ ಪೂಜ್ಯ ಆದಿ ಜಗದ್ಗುರು ಶಿವರಾತ್ರೀಶ್ವರ ಶಿವಯೋಗಿಗಳ ತಮ್ಮ…

    Leave a Reply

    Your email address will not be published. Required fields are marked *

    error

    Enjoy this blog? Please spread the word :)

    error: Content is protected !!