ಅಕ್ಕ-ತಂಗಿಯಂದಿರಿಗೆ ರಾಖಿ ಹಬ್ಬದ ಶುಭಾಶಯ ಹೇಳಿದ ದರ್ಶನ್..

ಅಣ್ಣ ತಂಗಿಯ ಜೀವನದ ಒಂದು ಉತ್ತಮ ಪ್ರೀತಿಯ ಸಂಕೇತ ರಾಖಿ ಹಬ್ಬವಾಗಿದ್ದು, ಒಬ್ಬರನ್ನು ಪರಸ್ಪರ ರಕ್ಷಣೆ ಮಾಡುವ ಮನಸ್ಸನ್ನು ಹೊಂದಿರುತ್ತಾರೆ. ರಕ್ಷಾ ಬಂಧನ ಪ್ರಾಚೀನ ಕಾಲದಿಂದ ಪ್ರಾಮುಖ್ಯತೆ ಹೊಂದಿದ್ದು,ಶ್ರಾವಣ ಮಾಸದಲ್ಲಿ ಆಚರಿಸುವ ಒಂದು ಹಬ್ಬವಾಗಿದೆ. ಆ ದಿನ ಸಹೋದರಿಯರು ತಮ್ಮ ಸಹೋದರನ ಮುಂಗೈಗೆ ರಾಖಿಯನ್ನು ಕಟ್ಟಿ ಆರತಿ ಮಾಡಿ, ಸೋದರನ ಆಶೀರ್ವಾದವನ್ನು ಬೇಡುವುದು ವಾಡಿಕೆ.

ರಾಖಿ ಹಬ್ಬ ಉತ್ತರ ಭಾರತದಲ್ಲಿ ಇದ್ದಷ್ಟು ಜನಪ್ರಿಯತೆ ಕರ್ನಾಟಕದಲ್ಲಿ ಇಲ್ಲ. ಆದರೂ, ಇತ್ತೀಚೆಗಿನ ದಿನಗಳಲ್ಲಿ ಯುವ ಸಮುದಾಯದಲ್ಲಿ ರಾಖಿ ಕಟ್ಟಿ ಅಣ್ಣನ ಆಶೀರ್ವಾದ ಪಡೆಯುವ ಸಂಸ್ಕೃತಿ ಹೆಚ್ಚಾಗಿದೆ. ಅದರಲ್ಲೂ ಸೆಲೆಬ್ರೆಟಿ ವಲಯದಲ್ಲಿ ಸ್ವಲ್ಪ ಜಾಸ್ತಿನೇ ಇದೆ.

ರಾಖಿ ಹಬ್ಬದಂದು ಸ್ಯಾಂಡಲ್‌ವುಡ್ ನಟ ಚಾಲೆಂಜಿಂಗ್‌ ಸ್ಟಾರ್ ದರ್ಶನ್ ಮನೆಯಲ್ಲೂ ಸಂಭ್ರಮ ಮನೆ ಮಾಡಿದೆ. ಹೀಗಾಗಿ ಕರ್ನಾಟಕದ ತಮ್ಮ ಅಭಿಮಾನಿಗಳಿಗೆ ಅಕ್ಕತಂಗಿಯಂದಿರಿಗೆ ದರ್ಶನ್ ರಕ್ಷಾ ಬಂಧನದ ಶುಭಾಶಯಗಳನ್ನು ತಿಳಿಸಿದ್ದಾರೆ.

ರಕ್ಷಾ ಬಂಧನದ ಈ ಶುಭ ದಿನದಂದು ಚಾಲೆಂಜಿಂಗ್ ಸ್ಟಾರ್ ಟ್ವೀಟ್ ಮಾಡಿದ್ದಾರೆ. ರಾಖಿ ಕಟ್ಟಿರುವ ಫೋಟೊವೊಂದನ್ನು ಶೇರ್ ಮಾಡಿದ್ದಾರೆ. ಇದರೊಂದಿಗೆ “ಪ್ರೀತಿಯಿಂದ ಬಂದು ಹರಸಿದ ಹಾಗೂ ಎಲ್ಲಾ ನನ್ನ ಅಕ್ಕತಂಗಿಯರಿಗೆ ರಕ್ಷಾ ಬಂಧನ ಶುಭಾಶಯಗಳು” ಎಂದು ಟ್ವೀಟ್ ಮೂಲಕ ನಾಡಿನ ಜನತೆಗೆ ರಕ್ಷಾ ಬಂಧನದ ಶುಭಾಶಯಗಳನ್ನು ಹರಿಸಿದ್ದಾರೆ. ದರ್ಶನ್ ಟ್ವೀಟ್‌ಗೆ ಕಂಡು ಅಭಿಮಾನಿಗಳು ಹರ್ಷ ವ್ಯಕ್ತಪಡಿಸುತ್ತಿದ್ದಾರೆ.

  • Related Posts

    ನಿಮ್ಮಎಲ್ಲರ ಪ್ರೀತಿಯೇ ನನ್ನ ಗೆಲುವಿಗೆ ದಾರಿ : ಬಿಗ್ ಬಾಸ್ ವಿನ್ನರ್ ಹನುಮಂತ ಭಾವುಕ…

    ಬಿಗ್ ಬಾಸ್ ಸೀಸನ್ 11ರ ವಿನ್ನರ್‌ ಯಾರು ಎನ್ನುವ ಕುತೂಹಲಕ್ಕೆ ಈಗಾಗಲೇ ತೆರೆಬಿದ್ದಿದೆ. ಲೇಟಾಗಿ ಬಂದರೂ ಲೇಟೆಸ್ಟ್‌ ಆಗಿ ಬಂದ ವಲ್ಡ್‌ ಕಾರ್ಡ್ ಎಂಟ್ರಿ ಸ್ಪರ್ಧಿ ಹಾಡುಗಾರ ಕುರಿಗಾಯಿ ಹನುಮಂತ ಬಿಗ್ ಬಾಸ್ ವಿನ್ನರ್ ಆಗಿದ್ದಾರೆ. ಬಿಗ್‌ ಬಾಸ್‌ ಆಟ ಅಂದರೆ…

    ಬಿಡುಗಡೆಯಾಗಲಿದೆ ಟೊಯೊಟಾ ಲ್ಯಾಂಡ್ ಕ್ರೂಸರ್ ಮಿನಿ…

    ಟೊಯೊಟಾ ಕಂಪನಿಯು ಸುಜುಕಿ ಜಿಮ್ನಿಗೆ ಸೆಡ್ಡು ಹೊಡೆಯಲು ಹೊಚ್ಚ ಹೊಸ ಲೈಫ್ ಸ್ಟೈಲ್ ಕಾಂಪ್ಯಾಕ್ಟ್ ಆಫ್-ರೋಡರ್ ಅನ್ನು ಅಭಿವೃದ್ಧಿಪಡಿಸುತ್ತಿದೆ ಎಂದು ವ್ಯಾಪಕವಾಗಿ ವರದಿಯಾಗಿದೆ. ಜಪಾನಿನ ಮಾಧ್ಯಮ ವರದಿಗಳ ಪ್ತಕಾರ, ಇದನ್ನು ಹೈಬ್ರಿಡ್ ಮತ್ತು ಎಲೆಕ್ಟ್ರಿಕ್ ಪವರ್‌ಟ್ರೇನ್ ಆಯ್ಕೆಗಳಲ್ಲಿ ಮಾರಾಟ ಮಾಡಬಹುದೆಂದು ಹೇಳಲಾಗುತ್ತಿದೆ.…

    Leave a Reply

    Your email address will not be published. Required fields are marked *

    error: Content is protected !!