
ನಗರದ ವಿದ್ಯಾನಗರದಲ್ಲಿರುವ ಕನ್ನಡ ಭವನದಲ್ಲಿ ವಿಶ್ವ ಪತ್ರಿಕಾ ವಿತರಕರ ದಿನಾಚರಣೆ ಮತ್ತು ಹಿರಿಯ ಪತ್ರಕರ್ತರಿಗೆ ಸನ್ಮಾನ
ದಾವಣಗೆರೆ ನಗರದ ವಿದ್ಯಾನಗರದಲ್ಲಿರುವ ಕನ್ನಡ ಭವನದಲ್ಲಿ ವಿಶ್ವ ಪತ್ರಿಕಾ ದಿನಾಚರಣೆ ಮತ್ತು ಹಿರಿಯ ಪತ್ರಿಕಾ ವಿತರಕರಿಗೆ ಸನ್ಮಾನ ಕಾರ್ಯಕ್ರಮವನ್ನು ಜಿಲ್ಲಾ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದಿಂದ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಹಿರಿಯ ಐದು ಜನ ಪತ್ರಿಕಾ ವಿತರಕರಿಗೆ ಮತ್ತು ಪಾಲಿಕೆ ಮೇಯರ್ ವಿನಾಯಕ ಅವರಿಗೆ ಸೇರಿದಂತೆ ಗಣ್ಯರಿಗೆ ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ ಪತ್ರಕರ್ತ ಬಿಎನ್ ಮಲ್ಲೇಶ್, ಕಸಾಪ ಜಿಲ್ಲಾಧ್ಯಕ್ಷ ವಾಮದೇವಪ್ಪ, ಕಾರ್ಯನಿರತ ಪತ್ರಕರ್ತರ ಜಿಲ್ಲಾಧ್ಯಕ್ಷ ಮಂಜುನಾಥ್, ವರದಿಗಾರರ ಕೂಟ ಅಧ್ಯಕ್ಷ ಏಕಾಂತಪ್ಪ ಇದ್ದರು.









