ಧಾರವಾಡದಲ್ಲಿ ಸೆ. 9 ರಿಂದ 12 ರವರೆಗೆ ಸುಸ್ಥಿರ ಕೃಷಿಗಾಗಿ ಸಿರಿಧಾನ್ಯಗಳು ಘೊಷವಾಕ್ಯದಡಿ ಪ್ರಸಕ್ತ ಸಾಲಿನ ಕೃಷಿ ಮೇಳ.

ಧಾರವಾಡ, ಸೆ.06:ನಗರದ ಕೃಷಿ ವಿಶ್ವವಿದ್ಯಾಲಯವು 2023 ರ ಕೃಷಿ ಮೇಳವನ್ನು ಸೆಪ್ಟೆಂಬರ್ 9 ರಿಂದ 12 ರವರೆಗೆ ಸುಸ್ಥಿರ ಕೃಷಿಗಾಗಿ ಸಿರಿಧಾನ್ಯಗಳು ಎಂಬ ಘೋಷವಾಕ್ಯದೊಂದಿಗೆ ಆಚರಿಸಲು ನಿರ್ಧರಿಸಲಾಗಿದೆ ಎಂದು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಪಿ.ಎಲ್. ಪಾಟೀಲ ಅವರು ತಿಳಿಸಿದರು.

ಅವರು ಇಂದು (ಸೆ.6) ಕಚೇರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಟಿ ಉದ್ದೇಶಿಸಿ ಮಾತನಾಡಿ, ಕೃಷಿ ಮೇಳವನ್ನು ಸೆಪ್ಟೆಂಬರ್ 9 ರಂದು ಬೆಳಿಗ್ಗೆ 11-30 ಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಉದ್ಘಾಟಿಸಲಿದ್ದು, ಗೌರವ ಅತಿಥಿಗಳಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಸಭಾಪತಿ ಬಸವರಾಜ ಹೊರಟ್ಟಿ, ಸಂಸದ ಪ್ರಲ್ಹಾದ ಜೋಶಿ, ಕಾರ್ಮಿಕ ಇಲಾಖೆಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಸೇರಿದಂತೆ ಇನ್ನಿತರ ಸಚಿವರು, ಶಾಸಕರು ಆಗಮಿಸುವರು. ಕೃಷಿ ಸಚಿವರಾದ ಚಲುವರಾಯಸ್ವಾಮಿ ಕೃಷಿ ವಿಶ್ವವಿದ್ಯಾನಿಲಯದ ಪ್ರಕಟಣೆಗಳನ್ನು ಬಿಡುಗಡೆ ಮಾಡಲಿದ್ದಾರೆ. ಅಧ್ಯಕ್ಷತೆಯನ್ನು ಶಾಸಕ ವಿನಯ ಕುಲಕರ್ಣಿ ವಹಿಸಲಿದ್ದಾರೆ ಎಂದರು.

ಈ ಕೃಷಿ ಮೇಳದಲ್ಲಿ ಅಂದಾಜು 15 ಲಕ್ಷಕ್ಕಿಂತಲೂ ಹೆಚ್ಚು ರೈತರು, ರೈತ ಮಹಿಳೆಯರು , ವಿಸ್ತರಣಾ ಹಾಗೂ ಸ್ವಯಂ ಸೇವಾ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆಯಿದೆ. ಕೃಷಿಮೇಳ -2023 ರ ಪ್ರಮುಖ ಆಕರ್ಷಣೆಗಳು ಅಂತರಾಷ್ಟ್ರೀಯ ಸಿರಿಧಾನ್ಯಗಳ ವರ್ಷ-2023, ಸಾವಯವ ಕೃಷಿ ಬೆಳಗಳು, ಸಿರಿಧಾನ್ಯ ಉತ್ಪಾದನೆ, ಮೌಲ್ಯವರ್ಧನೆ ಹಾಗೂ ಮಾರುಕಟ್ಟೆ, ಇದರ ಜೊತೆಗೆ ಸಂಶೋಧನೆ ಮಾಡಿದ ವಿವಿಧ ತಳಿಗಳ ಹಾಗೂ ಆಧುನಿಕ ಕೃಷಿ ತಂತದಾನಗಳ ಮಾಹಿತಿ, ಹಿಂಗಾರು ಬೆಳೆಗಳ ತಾಂತ್ರಿಕತೆಗಳು, ಕಿಸಾನ್ ಡೋನ್ ಬಳಕೆ, ಬರ ನಿರ್ವಹಣಾ ಶಾಂತಿಶತೆಗಳು, ಓಣ ಬೇಸಾಯ, ಜಲಾನಯನ ಅಭಿವೃದ್ಧಿ, ಮಣ್ಣು ಆರೋಗ್ಯ, ಜಲಸಾಕ್ಷರತೆ, ಜಲ ಸಂರಕ್ಷಣೆ ತಾಂತ್ರಿಕತೆಗಳು, ಕೃಷಿ ಹಾಗೂ ತೋಟಗಾರಿಕೆ ಹುಟ್ಟುವಳಿಗಳ ರಫ್ತು ಅವಕಾಶಗಳನ್ನು ಬಿಂಬಿಸುವ ಪದರ್ಶನಗಳು ಹಾಗೂ ಅನೇಕ ವಿಶಿಷ್ಟ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ ಎಂದರು.

ಕೃಷಿ ಮೇಳದ ಅಂಗವಾಗಿ ಫಲ-ಪುಷ್ಪ ಮತ್ತು ತರಕಾರಿ ಬೆಳೆಗಳ ಪ್ರದರ್ಶನ, ಪರಿಸರ ಸಂರಕ್ಷಣೆ, ಕೃಷಿ ಯಂತ್ರೋಪಕರಣಗಳು, ಯಶಸ್ವಿ ರೈತರೊಂದಿಗೆ ಸಂವಾದ, ಕೃಷಿ ಸಮಾಲೋಚನೆ, ವಿವಿಧ ಪ್ರದರ್ಶನ, ವಿಸ್ಮಯಕಾರಿ ಕೀಟ ಪ್ರಪಂಚ, ಕೃಷಿ, ಅರಣ್ಯ ಜಾನುವಾರುಗಳ ಪ್ರದರ್ಶನ ಹುಟ್ಟುವಳಿಗಳ ಮೌಲ್ಯವರ್ಧನೆಗಾಗಿ ಅನುμÁ್ಠನಗೊಂಡಿರುವ ವಿವಿಧ ಪ್ರಾತ್ಯಕ್ಷಿಕೆಗಳ ವೀಕ್ಷಣೆ ಮತ್ತು ಪ್ರದರ್ಶನ, ವಸ್ತ್ರ ವಿನ್ಯಾಸ, ವಿವಿಧ ಸಂಘ-ಸಂಸ್ಥೆಗಳಿಂದ ಉತ್ಪನ್ನಗಳ ಮಾರಾಟ ಮಾಹಿತಿ ಇತ್ಯಾದಿ ವಿಶಿಷ್ಟ ಕಾರ್ಯಕ್ರಮಗಳನ್ನು ವ್ಯವಸ್ಥಿತ ರೀತಿಯಲ್ಲಿ ಸಂಘಟಿಸಲಾಗುತ್ತಿದೆ ಎಂದರು.

ಆದಾಯ ದ್ವಿಗುಣಗೊಳಿಸುವ ಎಂಬ ರೈತರೊಂದಿಗೆ ಚರ್ಚೆಗೆ ಅವಕಾಶ ಮಾಡಿಕೊಡಲಾಗುತ್ತದೆ. ಅಲ್ಲದೇ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಬರುವ ಪ್ರತಿ ಜಿಲ್ಲೆಯ ವಿಶೇಷ ಸಾಧನೆಗೈದ ಕೃಷಿಕ ಹಾಗೂ ಶ್ರೇಷ್ಠ ಕೃಷಿ ಮಹಿಳೆಯರನ್ನು ಆಯ್ಕೆ ಮಾಡಿ ಪ್ರಶಸ್ತಿ ನೀಡಿ ಗೌರವಿಸುತ್ತಿರುವುದು. ಇದರೊಂದಿಗೆ ವಿವಿಧ ಅಭಿವೃದ್ಧಿ ಇಲಾಖೆಗಳು, ಬೀಜ, ಗೊಬ್ಬರ, ಕೀಟನಾಶಕ ಉತ್ಪಾದಿಸುವ ಘಟಕಗಳು ಮತ್ತು ಅನೇಕ ಸರಕಾರಿ ಹಾಗೂ ಸರಕಾರೇತರ ಸಂಘ ಸಂಸ್ಥೆಗಳು 450 ಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಸ್ಟಾಕ್‍ಗಳು ಭಾಗವಹಿಸುವುದರಿಂದ ರೈತರಿಗೆ ಸೂಕ್ತ ಮಾಹಿತಿ ಹಾಗೂ ಕೃಷಿ ಪರಿಕರ ಲಭ್ಯವಾಗಲಿವೆ. ಕಾರಣ, ತಮ್ಮ ವ್ಯಾಪ್ತಿಯಲ್ಲಿ ಬರುವ ಎಲ್ಲ ಅಧಿಕಾರಿಗಳಿಗೆ ಕೃಷಿಮೇಳದಲ್ಲಿ ಭಾಗವಹಿಸಲು ಸೂಕ್ತ ನಿರ್ದೆಶನ ನೀಡುವುದರೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ರೈತರು, ರೈತ ಮಹಿಳೆಯರು, ಗ್ರಾಮೀಣ ಯುವಕರು ಹಾಗೂ ವಿಸ್ತರಣಾ ಕಾರ್ಯಕರ್ತರು ಸಕೀಯವಾಗಿ ಭಾಗವಹಿಸಲು ಸೂಕ್ತ ವ್ಯವಸ್ಥೆ ಅನುಕೂಲ ಮಾಡಿಕೊಡಬೇಕೆಂದು ಕೋರಿದರು.

ಮಳಿಗೆಗಳನ್ನು ಕಾಯ್ದಿರಿಸಲು (0836-2214468, 8277478507), ಅಧ್ಯಕ್ಷರು, ವಸ್ತು ಪ್ರದರ್ಶನ ಸಮಿತಿ, ಕೃಷಿ ಮೇಳ -2023 ಕೃವಿನಿ, ಧಾರವಾಡ ಇವರನ್ನು ಸಂಪರ್ಕಿಸಲು ವಿನಂತಿಸಿದರು.

ಪತ್ರಿಕಾಗೋಷ್ಟಿಯಲ್ಲಿ ಡಾ.ಎಸ್.ಎಸ್.ಅಂಗಡಿ, ಡಾ.ಬಿ.ಡಿ. ಬಿರಾದಾರ, ಡಾ.ಎಸ್.ಎನ್. ಜಾಧವ ಸೇರಿದಂತೆ ಕೃಷಿ ವಿಜ್ಞಾನಿಗಳು, ಪ್ರಾಧ್ಯಾಪಕರು ಉಪಸ್ಥಿತರಿದ್ದರು.

ಮಹೇಶ್ ಮಂಜುನಾಥ್ ಶರ್ಮಾ
ಉತ್ತರ ಕರ್ನಾಟಕ ವಿಶೇಷ ಮುಖ್ಯ ಜಿಲ್ಲಾ ವರದಿಗಾರು….

  • Related Posts

    ರೈತ ಸಂಪರ್ಕ ಕೇಂದ್ರಕ್ಕೆ ಜಿಲ್ಲಾಧಿಕಾರಿ ದಿವ್ಯ ಪ್ರಭು ದಿಢೀರ್ ಭೇಟಿ;

    ಜಿಲ್ಲೆಯ ಪ್ರತಿ ಆರ್.ಎಸ್ ಕೆ.ದಲ್ಲಿ ರೈತರ ಬೇಡಿಕೆ ವಹಿ ಮತ್ತು ರೈತರ ಕುಂದುಕೊರತೆ ವಹಿ ನಿರ್ವಹಿಸಲು ನಿರ್ದೇಶನ ನೀಡಿದ ಡಿಸಿ. ಧಾರವಾಡ ಜ.31: ಇಂದು ಬೆಳಿಗ್ಗೆ ನಗರದ ಗಾಂಧಿ ಭವನ ಕಾಮಗಾರಿ ವೀಕ್ಷಣೆಗೆ ತರಳಿದ್ದ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು, ಗಾಂಧಿ…

    ಹುಬ್ಬಳ್ಳಿಯ ಹೆಸ್ಕಾಂ ಮುಖ್ಯ ಕಚೇರಿಯಲ್ಲಿ ಕಲಘಟಗಿ ಕ್ಷೇತ್ರದ ವಿದ್ಯುತ್‌ ಸಮಸ್ಯೆಗಳ ಬಗ್ಗೆ ಸಭೆ…

    Leave a Reply

    Your email address will not be published. Required fields are marked *

    error: Content is protected !!