

ಧಾರವಾಡ ಸೆ.08: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೆಪ್ಟೆಂಬರ್ 9 ರಂದು ಧಾರವಾಡ ಜಿಲ್ಲೆಗೆ ಆಗಮಿಸಲಿದ್ದಾರೆ.
ಸೆಪ್ಟೆಂಬರ್ 9ರಂದು ಬೆಳಿಗ್ಗೆ 10 ಗಂಟೆಗೆ ಬೆಂಳೂರಿನಿಂದ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ಆಗಮಿಸುವ ಅವರು ಬೆಳಿಗ್ಗೆ 11-30 ಗಂಟೆಗೆ ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿ ಹತ್ತಿರ ಇರುವ ಕಾರ್ಗಿಲ್ ಸ್ಮಾರಕಕ್ಕೆ ಭೇಟಿ ನೀಡಿ ಗೌರವ ಸಲ್ಲಿಸುವರು. ನಂತರ ಬೆಳಿಗ್ಗೆ 11-50 ಗಂಟೆಗೆ ಕೃಷಿ ವಿಶ್ವವಿದ್ಯಾಲಯಕ್ಕೆ ಆಗಮಿಸುವರು.
ನಂತರ ಅವರು ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕೃಷಿಮೇಳದ ನಿಮಿತ್ಯ ರೈತರ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ಆಯೋಜಿಸಿರುವ ಫಲಪುಷ್ಪ ಮತ್ತು ಕೀಟ ಪ್ರಪಂಚ ಪ್ರದರ್ಶನ ಉದ್ಘಾಟನೆ ಮತ್ತು ವೀಕ್ಷಣೆ ಮಾಡುವರು. ನಂತರ ಅವರು ಮಧ್ಯಾಹ್ನ 12-15 ಗಂಟೆಗೆ ಕೃಷಿಮೇಳ ವಸ್ತುಪ್ರದರ್ಶನ ಉದ್ಘಾಟನೆ ಮತ್ತು ವೀಕ್ಷಣೆ ಮಾಡುವರು.
ಮಧ್ಯಾಹ್ನ 12-30 ಗಂಟೆಗೆ ಕೃಷಿಮೇಳದ ಮುಖ್ಯವೇದಿಕೆ ಮೇಲೆ ಕೃಷಿಮೇಳ 2023 ಉದ್ಘಾಟನೆ ಮಾಡಲಿದ್ದಾರೆ.
ಮಧ್ಯಾಹ್ನ 3 ಗಂಟೆಗೆ ಕೃಷಿ ವಿದ್ಯಾಲಯದಿಂದ ರಸ್ತೆ ಮೂಲಕ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿ, ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಹೇಶ್ ಮಂಜುನಾಥ್ ಶರ್ಮಾ
ಉತ್ತರ ಕರ್ನಾಟಕ ವಿಶೇಷ ಮುಖ್ಯ ಜಿಲ್ಲಾ ವರದಿಗಾರು….