ಸೆ.17 ರಂದು ಶ್ರೀ ವಿಶ್ವಕರ್ಮ ಜಯಂತಿ ಆಚರಣೆ..

ಧಾರವಾಡ ಸೆ.8 : ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಂಗಣದಲ್ಲಿ ಇಂದು (ಸೆ.8) ಸಂಜೆ ಶ್ರೀ ವಿಶ್ವಕರ್ಮ ಜಯಂತಿಯ ಆಚರಣೆ ಕುರಿತು ಅಪರ ಜಿಲ್ಲಾಧಿಕಾರಿ ಗೀತ ಸಿ.ಡಿ ಅವರ ಅಧ್ಯಕ್ಷತೆಯಲ್ಲಿ ಸಭೆ ಜರುಗಿತು.

ಜಯಂತಿಯನ್ನು ಆಲೂರು ವೆಂಕಟರಾವ್ ಭವನದಲ್ಲಿ ಸೆ.17 ರಂದು ಬೆಳಿಗ್ಗೆ 11 ಗಂಟೆಗೆ ಆಚರಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.

ವೇದಿಕೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಇದ್ದರು. ಸಭೆಯಲ್ಲಿ ಜಿಲ್ಲಾ ವಿಶ್ವಕರ್ಮ ಸಮುದಾಯದ ಅಧ್ಯಕ್ಷ ಕಳಪ್ಪ ಬಡಿಗೇರ ಮತ್ತು ಸಮುದಾಯದ ಮುಖಂಡರಾದ ಶಿವಣ್ಣ ಬಡಿಗೇರ, ವಸಂತ ಅರ್ಕಚಾರ, ವಿ.ವಿ.ಬಡಿಗೇರ, ವಿಠ್ಠಲ ಕಮ್ಮಾರ, ಎಂ.ಬಿ.ಬಡಿಗೇರ ಅವರು ಉಪಸ್ಥಿತರಿದ್ದರು.

ಮಹೇಶ್ ಮಂಜುನಾಥ್ ಶರ್ಮಾ
ಉತ್ತರ ಕರ್ನಾಟಕ ವಿಶೇಷ ಮುಖ್ಯ ಜಿಲ್ಲಾ ವರದಿಗಾರು….

  • Related Posts

    ರೈತ ಸಂಪರ್ಕ ಕೇಂದ್ರಕ್ಕೆ ಜಿಲ್ಲಾಧಿಕಾರಿ ದಿವ್ಯ ಪ್ರಭು ದಿಢೀರ್ ಭೇಟಿ;

    ಜಿಲ್ಲೆಯ ಪ್ರತಿ ಆರ್.ಎಸ್ ಕೆ.ದಲ್ಲಿ ರೈತರ ಬೇಡಿಕೆ ವಹಿ ಮತ್ತು ರೈತರ ಕುಂದುಕೊರತೆ ವಹಿ ನಿರ್ವಹಿಸಲು ನಿರ್ದೇಶನ ನೀಡಿದ ಡಿಸಿ. ಧಾರವಾಡ ಜ.31: ಇಂದು ಬೆಳಿಗ್ಗೆ ನಗರದ ಗಾಂಧಿ ಭವನ ಕಾಮಗಾರಿ ವೀಕ್ಷಣೆಗೆ ತರಳಿದ್ದ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು, ಗಾಂಧಿ…

    ಹುಬ್ಬಳ್ಳಿಯ ಹೆಸ್ಕಾಂ ಮುಖ್ಯ ಕಚೇರಿಯಲ್ಲಿ ಕಲಘಟಗಿ ಕ್ಷೇತ್ರದ ವಿದ್ಯುತ್‌ ಸಮಸ್ಯೆಗಳ ಬಗ್ಗೆ ಸಭೆ…

    Leave a Reply

    Your email address will not be published. Required fields are marked *

    error

    Enjoy this blog? Please spread the word :)

    error: Content is protected !!