ಉದಯನಿಧಿ ಸ್ಟಾಲಿನ್ ಹೇಳಿಕೆಗೆ ಬಿಜೆಪಿ ಜಿಲ್ಲಾ ಘಟಕ ಉಪಾಧ್ಯಕ್ಷ ಶ್ರೀನಿವಾಸ ದಾಸಕರಿಯಪ್ಪ ಆಕ್ರೋಶ…

ದಾವಣಗೆರೆ ೯-೯-೨೩ : ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಕೋಮು ಪ್ರಚೋದನೆ ಹಾಗೂ ರಾಷ್ಟ್ರದ್ರೋಹದ ಹೇಳಿಕೆ ನೀಡಿದ ತಮಿಳುನಾಡಿನ ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆಯನ್ನು ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಶ್ರೀನಿವಾಸ ದಾಸಕರಿಯಪ್ಪ ಪ್ರಕಟಣೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸನಾತನ ಹಿಂದು ಧರ್ಮದ ಬಗ್ಗೆ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ತನ್ನ ಹೆತ್ತ ತಾಯಿಯಿಂದ ಹಿಂದೂ, ಸಂಸ್ಕೃತಿ, ಸಂಸ್ಕಾರಗಳನ್ನು ಮೊದಲು ಕಲಿಯಲಿ. ಹಿಂದು ಧರ್ಮವನ್ನು ಅವಮಾನಿಸಿದೆದಂದರೆ ಹೆತ್ತ ತಾಯಿಯನ್ನೇ ಅವಮಾನಿಸಿದಂತೆ ಎಂಬುದನ್ನು ಉದಯನಿಧಿ ಅರಿಯಲಿ.

ತಮಿಳುನಾಡಿನ ಮುಖ್ಯಮಂತ್ರಿ ಪುತ್ರ ಎಂ.ಕೆ.ಸ್ಟಾಲಿನ್ ಪುತ್ರ, ಯುವ ಕಲ್ಯಾಣ ಮತ್ತು ಕ್ರೀಡಾ ಅಭಿವೃದ್ಧಿ, ವಿಶೇಷ ಕಾಯ್ದೆ ಅನುಷ್ಠಾನ ಇಲಾಖೆ ಸಚಿವರು, ಡಿ.ಎಂ.ಕೆ. ಪಕ್ಷದ ಯುವ ಘಟಕದ ಅಧ್ಯಕ್ಷನೂ ಆದ ಉದಯ ನಿಧಿ ಸ್ಟಾಲಿನ್ ಓಲೈಕೆ ಮತ್ತು ಮತ ಬ್ಯಾಂಕ್ ರಾಜಕೀಯ ಬಿಡಲಿ.
ಈ ರೀತಿಯ ಹೇಳಿಕೆಯನ್ನು ನೀಡಿದ್ದು, ನಮ್ಮ ಸನಾತನ ಧರ್ಮವನ್ನು ಡೆಂಗ್ಯೂ, ಕೊರೊನಾ, ಮಲೇರಿಯಾಕ್ಕೆ ಸಮಾನವಾದದ್ದು ಎಂಬ ಹೇಳಿಕೆ ನೀಡಿರುವುದು ಅಕ್ಷಮ್ಯ ಹಾಗೂ ಖಂಡನೀಯ.ಜವಾಬ್ದಾರಿಯುತ ಸ್ಥಾನದಲ್ಲಿರುವ ಉದಯನಿಧಿನಂಹವರು ಸಮಾಜದಲ್ಲಿ ವಿಷಬೀಜ ಬಿತ್ತುವ ಕೆಲಸ ಮಾಡಬಾರದು. ಕಾಂಗ್ರೆಸ್ ಮೈತ್ರಿಪಕ್ಷ ಡಿ.ಎಂ.ಕೆ ಹಾಗೂ ಐ.ಎನ್.ಡಿ.ಐ.ಎ ಮೈತ್ರಿಕೂಟ ಸನಾತನ ಧರ್ಮವಾದ ನಮ್ಮ ಹಿಂದುತ್ವದ ನಿರ್ಮೂಲನೆ ಬಗ್ಗೆ ಮಾತನಾಡುತ್ತಾ ದ್ವೇಷಿಸುತ್ತಿರುವುದು ಖಂಡನೀಯ ಸಂಗತಿಯಾಗಿದೆ.

  • Related Posts

    ದಾವಣಗೆರೆಯ ಜಿಲ್ಲಾ ಪೊಲೀಸ್ ಚಿಣ್ಣರ ಅಂಗಳ ಶಾಲೆಗೆ ಭೇಟಿ ನೀಡಿದ ಡಾ. ಜಿ. ಪರಮೇಶ್ವರ್

    ಸನ್ಮಾನ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ದಾವಣಗೆರೆ ನಗರಕ್ಕೆ ವಿವಿಧ ಕಾರ್ಯಕ್ರಮಗಳ ಬೇಟಿ ನೀಡಿದ ಸಂದರ್ಭದಲ್ಲಿ ಪಿಜೆ ಬಡಾವಣೆಯ ಪೊಲೀಸ್ ವಸತಿ ಗೃಹ ಸಮುಚ್ಛಯದ ಆವರಣದಲ್ಲಿರುವ ದಾವಣಗೆರೆ ಜಿಲ್ಲಾ ಪೊಲೀಸ್ ಚಿಣ್ಣರ ಅಂಗಳ ಶಾಲೆಗೆ ಭೇಟಿ ನೀಡಿದರು. ನಂತರ…

    “ವಿಷ ಕೊಡಿ ಇಲ್ಲವೇ ಯೂರಿಯಾ ಕೊಡಿ” ದಾವಣಗೆರೆಯಲ್ಲಿ ಬಿಜೆಪಿ ಇಂದ ಪ್ರತಿಭಟನೆ

    ದಾವಣಗೆರೆ ಜಿಲ್ಲಾ ಭಾರತೀಯ ಜನತಾ ಪಕ್ಷದ ವತಿಯಿಂದ ದಾವಣಗೆರೆಯಲ್ಲಿ ಪ್ರತಿಭಟನೆ ಮಾಡಲಾಯಿತು. ರೈತರಿಗೆ ಸಮಯಕ್ಕೆ ಸರಿಯಾಗಿ ಯೂರಿಯಾ ಗೊಬ್ಬರ ಕೊಡದೇ, ರೈತರ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆ ಹಾಗೂ ತನ್ನ ತಪ್ಪನ್ನು ಕೇಂದ್ರ ಸರ್ಕಾರದ…

    Leave a Reply

    Your email address will not be published. Required fields are marked *

    error

    Enjoy this blog? Please spread the word :)

    error: Content is protected !!