“ತ್ಯಾಜ್ಯ ನಿರ್ವಹಣೆಯ ಕುರಿತು ತರಬೇತಿ ಕಾರ್ಯಾಗಾರ” ಸ್ವಚ್ಛತೆಯೇ ಸೇವೆ ಅಭಿಯಾನಕ್ಕೆ : ಚಾಲನೆ

ಕನಕಪುರ (ಸೆ.15): ಸ್ವಚ್ಛತೆ ಒಂದು ಅಭ್ಯಾಸ ಮತ್ತು ಸಾಮಾಜಿಕ ಜವಾಬ್ದಾರಿಯೂ ಹೌದು. ಸಾಮೂಹಿಕ ಪ್ರಯತ್ನದಿಂದ ಮಾತ್ರ ಅದನ್ನು ಸಂಪೂರ್ಣವಾಗಿ ತರಬೇಕು. ವೈಯಕ್ತಿಕವಾಗಿ ಸ್ವಚ್ಛವಾಗಿರುವುದರ ಜೊತೆಗೆ ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಡುವುದು ನಮ್ಮ ಜವಾಬ್ದಾರಿ ಯಾಗಬೇಕು ಎಂದು ಅಭಿಪ್ರಾಯಪಟ್ಟರು.

ಜಿಲ್ಲಾ ಪಂಚಾಯತ್ ರಾಮನಗರ, ತಾಲ್ಲೂಕು ಪಂಚಾಯತ್ ಕನಕಪುರ ಹಾಗೂ ಶಿವನಹಳ್ಳಿ ಗ್ರಾಮ ಪಂಚಾಯತಿಯ ಸಹಯೋಗದೊಂದಿಗೆ ಸೆಪ್ಟೆಂಬರ್ 15ರಿಂದ ಅಕ್ಟೋಬರ್ 2ರವರೆಗೂ ಗಾಂಧಿ ಜಯಂತಿ ಅಂಗವಾಗಿ #ಸ್ವಚ್ಛತೆಯ ಸೇವೆ# ಎಂಬ ಅಭಿಯಾನ ಮತ್ತು ತಾಜ್ಯ ನಿರ್ವಹಣೆಯ ಕುರಿತ ತರಬೇತಿ ಕಾರ್ಯಾಗಾರವನ್ನು ಮಾನ್ಯ ಸಹಾಯಕ ನಿರ್ದೇಶಕರು (ಗ್ರಾ. ಉ) ಮೋಹನ್ ಬಾಬು ಅವರು ಗಿಡಕ್ಕೆ ನೀರು ಹಾಕುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ಸ್ವಚ್ಛತೆಯ ಮೊದಲ ಹಂತವೆಂದರೆ ತನ್ನನ್ನು ತಾನು ಸ್ವಚ್ಛವಾಗಿಟ್ಟುಕೊಳ್ಳುವುದು, ಸ್ವಚ್ಛತೆಯ ಎರಡನೇ ಹಂತವೆಂದರೆ ಮನೆ, ಶಾಲೆ, ಉದ್ಯಾನ, ಬೀದಿ, ನೆರೆಹೊರೆ ಮತ್ತು ಇಡೀ ದೇಶ ಸೇರಿದಂತೆ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛ ವಾಗಿಟ್ಟುಕೊಳ್ಳುವುದು. ವಿಪರೀಮಿತವಾದ ಪ್ಲಾಸ್ಟಿಕ್‌ ಬಳಕೆ ಪರಿಸರಕ್ಕೆ ಮಾರಕವಾಗಿ ಪರಿಣಮಿಸಿದ್ದು, ಪ್ಲಾಸ್ಟಿಕ್‌ ಬಳಸದಿರುವ ಕುರಿತು ಸ್ವಯಂ ನಿರ್ಬಂಧ ಹೇರಿಕೊಳ್ಳಬೇಕಾಗಿದೆ. ಹಾಗೆಯೇ ಅಂಗಡಿ, ಮಾಲ್‌ ಗಳಿಗೆ ಹೋಗುವಾಗ ಸ್ವಯಂ ಪ್ರೇರಿತವಾಗಿ ಕೈ ಚೀಲವನ್ನು ಕಡ್ಡಾಯವಾಗಿ ತೆಗೆದುಕೊಂಡು ಹೋಗಲು ಅವರು ಸೂಚಿಸಿದರು,

ಈ ಸಂದರ್ಭದಲ್ಲಿ ಶಿವನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹನುಮಂತ ನಾಯ್ಕ, ಸಂಪನ್ಮೂಲ ವ್ಯಕ್ತಿ ರೂಪೇಶ್ ಸಹಾಯಕ ನಿರ್ದೇಶಕರು (ಗ್ರಾ.ಉ)ರಾಮನಗರ ತಾಲ್ಲೂಕು ಪಂಚಾಯತ್, ಪಂ.ಅ. ಅಧಿಕಾರಿ ಕೃಷ್ಣ ಮೂರ್ತಿ, ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯತಿಗಳ ಅಭಿವೃದ್ದಿ ಅಧಿಕಾರಿಗಳು, ಜಿ.ಪಂ. ಎಸ್.ಬಿ.ಎಂ. ಸಂಯೋಜಕರು, ಸಂಜೀವಿನಿ ಒಕ್ಕೂಟದ ಅಧ್ಯಕ್ಷರುಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು..

ಮಹೇಶ್ ಮ್ ಶರ್ಮಾ
ಉತ್ತರ ಕರ್ನಾಟಕದ ವಿಶೇಷ ವರದಿಗಾರು

  • Related Posts

    ಆನೆ ಮತ್ತು ಮಾನವ ಸಂಘರ್ಷಕ್ಕೆ ಪರಿಹಾರ ಕಂಡುಕೊಳ್ಳುವದಕಾಗಿ ಸಭೆ…

    ರಾಮನಗರ ಜಿಲ್ಲೆಯ ಆನೆ ಮತ್ತು ಮಾನವ ಸಂಘರ್ಷಕ್ಕೆ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಇಂದು ರಾಮನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಹತ್ವದ ಸಭೆ ನಡೆಸಲಾಯಿತು. ಸಭೆಯಲ್ಲಿ ರಾಮನಗರ ಕ್ಷೇತ್ರದ ಶಾಸಕರಾದ ಇಕ್ಬಾಲ್ ಹುಸೇನ್, ಚನ್ನಪಟ್ಟಣ ಕ್ಷೇತ್ರದ ಶಾಸಕರಾದ ಶ್ರೀ ಸಿಪಿ ಯೋಗೇಶ್ವರ್, ಮಾಜಿ ಸಂಸದರಾದ…

    ಆನೇಕಲ್ ತಾಲ್ಲೂಕಿನಲ್ಲಿ ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆಯಲ್ಲಿ ಸಮಿತಿಯ ಕರ್ತವ್ಯ ಮತ್ತು ಜವಾಬ್ದಾರಿ ಕುರಿತು ಒಂದು ದಿನದ ತರಬೇತಿ ಕಾರ್ಯಾಗಾರ…

    ಆನೇಕಲ್ ತಾಲ್ಲೂಕು, 06/09/2023 ರಂದು ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಆನೇಕಲ್ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲ್ಲೂಕು ವ್ಯಾಪ್ತಿಯ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಘನ ತ್ಯಾಜ್ಯ ನಿರ್ವಹಣೆ ಮೇಲ್ವಿಚಾರಣೆಗಾಗಿ ರಚಿಸಲಾಗಿರುವ ಗ್ರಾಮ ಪಂಚಾಯತ್ ಮಟ್ಟದ ಮೇಲುಸ್ತುವಾರಿ ಸಮಿತಿಯ ಸದಸ್ಯರುಗಳಿಗೆ ಘನ ಮತ್ತು…

    Leave a Reply

    Your email address will not be published. Required fields are marked *

    error: Content is protected !!