ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಂಚೆ ಸೇವೆಗಳು ಒಂದೇ ಸೂರಿನಡಿ : ಅಂಚೆ ನಿರೀಕ್ಷಕ ವೇಣುಗೋಪಾಲ್

ದಾವಣಗೆರೆ; ಸೆ.15 : ಅಂಚೆ ಜನ ಸಂಪರ್ಕ ಅಭಿಯಾನವು ಅಂಚೆಯ ವಿವಿಧ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸಿ ಜನರ ಮನೆ ಬಾಗಿಲಿಗೆ ಸೌಲಭ್ಯಗಳನ್ನು ತಲುಪಿಸುವಲ್ಲಿ ಯಶಸ್ವಿಯಾಗಿದೆ ಎಂದು ಅಂಚೆ ನಿರೀಕ್ಷಕ ವೇಣುಗೋಪಾಲ್ ತಿಳಿಸಿದರು.

ಮಂಗಳವಾರ(ಸೆ.12) ಭಾರತೀಯ ಅಂಚೆ ಇಲಾಖೆಯೂ ದಾವಣಗೆರೆ ವಿಭಾಗದ ವತಿಯಿಂದ ಜಗಳೂರು ಅಂಚೆ ಕಚೇರಿಯಲ್ಲಿ ಆಯೋಜಿಸಿದ ಅಂಚೆ ಜನ ಸಂಪರ್ಕ ಅಭಿಯಾನ ಕುರಿತು ಅವರು ಮಾತನಾಡಿದರು.

ಅಂಚೆ ಇಲಾಖೆಯು ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಾರ್ವಜನಿಕ ಸೇವೆಗಳು ಒಂದೇ ಸೂರಿನಡಿಯಲ್ಲಿ ಒದಗಿಸುವುದರ ಮೂಲಕ ದಾವಣಗೆರೆ ಅಂಚೆ ವಿಭಾಗವು ಯಶಸ್ವಿಯಾಗಿದೆ. ಈ ಅಭಿಯಾನದಲ್ಲಿ ಒಂದು ಸಾವಿರಕ್ಕೂ ಹೆಚ್ಚು ಖಾತೆಗಳನ್ನು ತೆರೆದಿದ್ದು ಮತ್ತು ವಿವಿಧ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸಿ ಜನರ ಮನೆ ಬಾಗಿಲಿಗೆ ಸೌಲಭ್ಯಗಳನ್ನು ತಲುಪಿಸುವಲ್ಲಿ ಯಶಸ್ವಿಯಾಗಿದೆ ಎಂದರು.

ದಾವಣಗೆರೆ ಅಂಚೆ ಅಧೀಕ್ಷಕ ಚಂದ್ರಶೇಖರ್ ಮಾತನಾಡಿ, ಈಗಿನ ಆಧುನಿಕ ಜಗತ್ತಿಗೆ ತಕ್ಕಂತೆ ಅಂಚೆ ಇಲಾಖೆಯೂ ಬ್ಯಾಂಕಿಂಗ್ ವ್ಯವಹಾರದಲ್ಲಿ ಅಭಿವೃದ್ಧಿ ಹೊಂದಿದ್ದು, ಸಾಮಾನ್ಯ ಜನರಿಗೆ ತಮ್ಮ ಮನೆ ಬಾಗಿಲಿಗೆ, iಠಿಠಿb, ಡಿಜಿಟಲ್ ಅಕೌಂಟ್ಸ್‍ಗಳನ್ನು ಮಾಡಿ ಕೊಡುವುದರ ಮೂಲಕ ಎಟಿಎಂ ಮತ್ತು ಫೆÇೀನ್ ಪೇ ಇಂತಹ ಆಧುನಿಕ ವ್ಯವಹಾರಗಳನ್ನು ಅಂಚೆ ಇಲಾಖೆಯು ಒದಗಿಸಿ ಅನ್ನಭಾಗ್ಯ, ಗೃಹಲಕ್ಷ್ಮಿ, ಪಿಎಂ ಕಿಸಾನ್, ಇಂತಹ ಅನೇಕ ಯೋಜನೆಗಳು ಪ್ರಯೋಜನಕಾರಿ ಸೌಲಭ್ಯಗಳನ್ನು ಜನರಿಗೆ ಒದಗಿಸುತ್ತಿದೆ. ಅಂಚೆ ಜೀವ ವಿಮೆ, ಗ್ರಾಮೀಣ ಅಂಚೆ ಜೀವ ವಿಮೆ, ಛಿsಛಿ ಸೇವೆಗಳು, ಆಧಾರ್ ತಿದ್ದುಪಡಿ, ಆಧಾರ್ ನೋಂದಣಿ, ಸಾಮಾನ್ಯರು ಪಡೆಯಬಹುದಂತಹ ಹತ್ತು ಲಕ್ಷ ಮೌಲ್ಯದ ಅಪಘಾತ ವಿಮೆಗಳನ್ನು ಅಂಚೆಯ ಮೂಲಕ ಒದಗಿಸಲಾಗುತ್ತದೆ ಎಂದರು.

ಸಿಪಿಐ ಶ್ರೀನಿವಾಸರಾವ್ ಮಾತನಾಡಿ, ಅಂಚೆ ಕಚೇರಿಯಲ್ಲಿ ಉಳಿತಾಯ ಮಾಡಿದರೆ ಇಟ್ಟ ಹಣಕ್ಕೆ ಲೋಪವಾಗದಂತೆ ಉಳಿಕೆಯಾಗುವುದು, ಪ್ರತಿಯೊಬ್ಬರು ಖಆ ಖಾತೆಯನ್ನು ಮಾಡಿಸಿದರೆ ನಿಮ್ಮ ಮಕ್ಕಳ ಭವಿಷ್ಯಕ್ಕೆ ಉಳಿತಾಯ ಅವಶ್ಯ ಎಂದರು.

ಜಗಳೂರಿನ ಪೆÇೀಸ್ಟ್ ಮಾಸ್ಟರ್ ಎ.ಕೆ ಬಸಪ್ಪ, ತಾಲ್ಲೂಕು ಕಚೇರಿ ಶಿರಸ್ತೆದಾರ ಸುರೇಶ್, ಜಗಳೂರು ಸಿಡಿಪಿಒ ರೇಖಾ, ಸಹಾಯಕ ಅಂಚೆ ಅಧೀಕ್ಷಕ ಗುರುಪ್ರಸಾದ್ ಉಪಸ್ಥಿತರಿದ್ದರು.

  • Related Posts

    ಜಿಲ್ಲಾ ಪೊಲೀಸ್ ವತಿಯಿಂದ ರಸ್ತೆ ಸುರಕ್ಷತಾ ಮಾಸಾಚರಣೆಯ ಸಮಾರೋಪ ಸಮಾರಂಭ…

    ದಿನಾಂಕ: 01-01-2025 ರಿಂದ 31-01-2025 ಒಂದು ತಿಂಗಳ ಕಾಲ ಪ್ರತಿ ವರ್ಷದಂತೆ ರಸ್ತೆ ಸುರಕ್ಷತಾ ಮಾಸಾಚರಣೆಯನ್ನು ಜಿಲ್ಲಾ ಪೊಲೀಸ್ ವತಿಯಿಂದ ಹಮ್ಮಿಕೊಂಡಿದ್ದು, ಇಂದು ದಾವಣಗೆರೆ ನಗರದ ರೇಣುಕಾ ಮಂದಿರದ ಕಲ್ಯಾಣ ಮಂಟಪದಲ್ಲಿ ರಸ್ತೆ ಸುರಕ್ಷತಾ ಮಾಸಾಚರಣೆಯ ಸಮಾರೋಪ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ…

    ಶಾಲಾ ಆವರಣ ಅನೈತಿಕ ತಾಣಗಳಾಗಬಾರದು, ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ಸಿಗಬೇಕು, ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್….

    ದಾವಣಗೆರೆ, ಜನವರಿ.28 : ಜಿಲ್ಲೆಯಲ್ಲಿನ ಎಲ್ಲಾ ಸರ್ಕಾರಿ ಶಾಲೆಗಳಿಗೆ ಕಾಂಪೌಂಡ್ ಸೇರಿದಂತೆ ಕೊಠಡಿ, ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಆಸನ ವ್ಯವಸ್ಥೆಯನ್ನು ಕಲ್ಪಿಸುವ ಮೂಲಕ ಗುಣಮಟ್ಟದ ಶಿಕ್ಷಣ ಭವಿಷ್ಯದ ನಾಗರಿಕರಾಗುವ ಪ್ರತಿ ಮಕ್ಕಳಿಗೆ ಸಿಗುವಂತೆ ಮಾಡಬೇಕು, ಆದರೆ ಸಂಜೆಯ ವೇಳೆ…

    Leave a Reply

    Your email address will not be published. Required fields are marked *

    error: Content is protected !!