ವಿಜೃಂಭಣೆಯಿಂದ ನಡೆದ ಶ್ರೀ ಗುರು ಕೊಟ್ಟೂರೇಶ್ವರ ಸ್ವಾಮಿಯ ರಥೋತ್ಸವ

ಕೊಟ್ಟೂರು : ಇಲ್ಲಿನ ಶ್ರೀಗುರು ಕೊಟ್ಟೂರೇಶ್ವರ ಸ್ವಾಮಿಯ ಮಹಾರಥೋತ್ಸವವು ಮೂಲಾ ನಕ್ಷತ್ರದಲ್ಲಿ ಬಹು ವಿಜೃಂಭಣೆಯಿಂದ ಶುಕ್ರವಾರ ಜರುಗಿದೆ. ಕೋವಿಡ್‌ ವೈರಸ್ ಕಾರಣ ನಿಮಿತ್ತ ಜಿಲ್ಲಾಡಳಿತ ಹೊರ ಜಿಲ್ಲೆಯ ಭಕ್ತರ ಪ್ರವೇಶ ನಿಷೇಧಿಸಲಾಗಿತ್ತು. ಪ್ರತಿವರ್ಷದ ಪದ್ಧತಿಯಂತೆ ರಥೋತ್ಸವ ಜರುಗಿದ ಬಳಿಕ ತೇರು ಬಜಾರ್‌ನ ತನ್ನ ಜಾಗದಲ್ಲಿ ನಿಲುಗಡೆಗೊಂಡಿತು.

ಶ್ರೀ ಕೊಟ್ಟೂರೇಶ್ವರ ಸ್ವಾಮಿ ರಥೋತ್ಸವ ಪ್ರಾರಂಭಗೊಳ್ಳುತ್ತಿದ್ದಂತೆ ವಿಸ್ಮಯ ಎಂಬಂತೆ ಜಮಾವಣೆಗೊಂಡಿದ್ದ ಜನಸ್ತೋಮ ಒಗ್ಗಟ್ಟಾಗಿ ರಥೋತ್ಸವವನ್ನು ಎಳೆದೊಯ್ಯಲು ನಾ ಮುಂದೆ ತಾ ಮುಂದೆ ಎಂಬಂತೆ ಮುಗಿಬಿದ್ದರು. ತದನಂತರ 70 ಅಡಿ ಎತ್ತರದ ರಥೋತ್ಸವ ರಾಜ ಗಾಂಭೀರ್ಯದೊಂದಿಗೆ ಬಯಲುಗುಂಟ ಸಾಗಿತು. ಇದಕ್ಕೂ ಮುನ್ನ ಶ್ರೀ ಸ್ವಾಮಿಯನ್ನು ಮಧ್ಯಾಹ್ನದ ಪೂಜಾ ಕೈಂಕರ್ಯದ ನಂತರ ಮೂಲ ಹಿರೇಮಠದಿಂದ ಪ್ರಧಾನ ಧರ್ಮಕರ್ತ ಸಿ.ಎಚ್‌.ಎಂ. ಗಂಗಾಧರಯ್ಯ ಮತ್ತು ಪೂಜಾ ಬಳಗದವರು ಸಕಲ ಬಿರುದಾವಳಿಗಳೊಂದಿಗೆ ಹೊರ ತಂದು ಬೆಳ್ಳಿ ಪಲ್ಲಕ್ಕಿಯಲ್ಲಿ ಆಸೀನಪಡಿಸಿ ಸಂಭ್ರಮದ ಮೆರವಣಿಗೆ ಕೈಗೊಂಡರು.

  • Related Posts

    ದಾವಣಗೆರೆಯ ಜಿಲ್ಲಾ ಪೊಲೀಸ್ ಚಿಣ್ಣರ ಅಂಗಳ ಶಾಲೆಗೆ ಭೇಟಿ ನೀಡಿದ ಡಾ. ಜಿ. ಪರಮೇಶ್ವರ್

    ಸನ್ಮಾನ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ದಾವಣಗೆರೆ ನಗರಕ್ಕೆ ವಿವಿಧ ಕಾರ್ಯಕ್ರಮಗಳ ಬೇಟಿ ನೀಡಿದ ಸಂದರ್ಭದಲ್ಲಿ ಪಿಜೆ ಬಡಾವಣೆಯ ಪೊಲೀಸ್ ವಸತಿ ಗೃಹ ಸಮುಚ್ಛಯದ ಆವರಣದಲ್ಲಿರುವ ದಾವಣಗೆರೆ ಜಿಲ್ಲಾ ಪೊಲೀಸ್ ಚಿಣ್ಣರ ಅಂಗಳ ಶಾಲೆಗೆ ಭೇಟಿ ನೀಡಿದರು. ನಂತರ…

    “ವಿಷ ಕೊಡಿ ಇಲ್ಲವೇ ಯೂರಿಯಾ ಕೊಡಿ” ದಾವಣಗೆರೆಯಲ್ಲಿ ಬಿಜೆಪಿ ಇಂದ ಪ್ರತಿಭಟನೆ

    ದಾವಣಗೆರೆ ಜಿಲ್ಲಾ ಭಾರತೀಯ ಜನತಾ ಪಕ್ಷದ ವತಿಯಿಂದ ದಾವಣಗೆರೆಯಲ್ಲಿ ಪ್ರತಿಭಟನೆ ಮಾಡಲಾಯಿತು. ರೈತರಿಗೆ ಸಮಯಕ್ಕೆ ಸರಿಯಾಗಿ ಯೂರಿಯಾ ಗೊಬ್ಬರ ಕೊಡದೇ, ರೈತರ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆ ಹಾಗೂ ತನ್ನ ತಪ್ಪನ್ನು ಕೇಂದ್ರ ಸರ್ಕಾರದ…

    Leave a Reply

    Your email address will not be published. Required fields are marked *

    error

    Enjoy this blog? Please spread the word :)

    error: Content is protected !!