ಅಕ್ರಮ ಮರಳು ಸಂಗ್ರಹಣೆಯ ಮೇಲೆ ಪೊಲೀಸ್ ದಾಳಿ ಮರಳು ವಶ


ದಾವಣಗೆರೆಯ ಜನವರಿ 27,
ಮಲೇಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಮರಳು ಮತ್ತು ಅಕ್ರಮ ಕಾನೂನು ಬಾಹಿರ ಚಟುವಟಿಕೆಗಳನ್ನು ತಡೆಗಟ್ಟುವ ಸಲುವಾಗಿ ಪೊಲೀಸ್ ಅಧೀಕ್ಷಕರಾದ ಶ್ರೀಮತಿ ಉಮಾ ಪ್ರಶಾಂತ ಐ.ಪಿ.ಎಸ್. ದಾವಣಗೆರೆ ಜಿಲ್ಲೆ, ಹೆಚ್ಚುವರಿ ಪೊಲೀಸ್ ಅಧೀಕ್ಷಕರವರಾದ ಶ್ರೀ ವಿಜಯಕುಮಾರ್ ಎಂ ಸಂತೋಷ ರವರು & ಶ್ರೀ ಜಿ. ಮಂಜುನಾಥ ಹಾಗೂ ಮಾನ್ಯ ದಾವಣಗೆರೆ ಗ್ರಾಮಾಂತರ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಶ್ರೀ ಬಸವರಾಜ್ ಬಿ.ಎಸ್ ರವರ ಮಾರ್ಗದರ್ಶನದಲ್ಲಿ ಹಾಗೂ ಹರಿಹರ ವೃತ್ತ ನಿರೀಕ್ಷಕರಾದ ಶ್ರೀ ಸುರೇಶ ಸಗರಿ ಮತ್ತು ಪಿ.ಎಸ್.ಐ ಶ್ರೀ ಪ್ರಭು ಡಿ ಕೆಳಗಿನಮನಿ ಮಲೇಬೆನ್ನೂರು ರವರ ನೇತೃತ್ವದಲ್ಲಿ ತಂಡವನ್ನು ರಚಿಸಲಾಗಿರುತ್ತದೆ.

ದಿನಾಂಕ:-27-01-2025 ರಂದು ಮಧ್ಯಾಹ್ನ ಸಮಯದಲ್ಲಿ ಮಲೇಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯ ಇಂಗಳಗೊAದಿ ಗ್ರಾಮದ ಬಳಿಯ ತುಂಗಭದ್ರಾ ನದಿ ದಂಡೆಯಲ್ಲಿ ಯಾರೋ ಅಪರಿಚತರು ಮರಳನ್ನು ಅಕ್ರಮವಾಗಿ ಸಾಗಣಿಕೆ ಮಾಡಿ ಲಾಭ ಮಾಡಿಕೊಳ್ಳುವ ದುರುದ್ದೇಶದಿಂದ ಮರಳನ್ನು ಸಂಗ್ರಹಿಸಿಟ್ಟಿದ್ದ ಸ್ಥಳದ ಮೇಲೆ ಹರಿಹರ ವೃತ್ತ ನಿರೀಕ್ಷಕರಾದ ಶ್ರೀ ಸುರೇಶ ಸಗರಿ ರವರ ಮಾರ್ಗದರ್ಶನದಲ್ಲಿ ಮಲೇಬೆನ್ನೂರು ಪೊಲೀಸ್ ಠಾಣೆಯ ಪಿ.ಎಸ್.ಐ ಶ್ರೀ ಪ್ರಭು ಡಿ ಕೆಳಗಿನಮನಿ ರವರೊಳಗೊಂಡ ತಂಡವು ದಾಳಿ ಮಾಡಿ ಅಂದಾಜು ಬೆಲೆ 90,000/- ರೂ ಬೆಲೆಯ ಸುಮಾರು 60 ಮೆಟ್ರಿಕ್ ಟನ್ ಮರಳನ್ನು ವಶ ಪಡಿಸಿಕೊಂಡಿರುತ್ತಾರೆ. ಈ ಬಗ್ಗೆ ಮಲೇಬೆನ್ನೂರು ಪೊಲೀಸ್ ಠಾಣೆಯ ಗುನ್ನೆ ನಂ: 19/2025 ಕಲಂ: 303 (2) ಬಿ.ಎನ್.ಎಸ್ ರೀತ್ಯಾ ಪ್ರಕರಣ ದಾಖಲಿಸಿರುತ್ತದೆ.
ಈ ಅಕ್ರಮ ಮರಳು ಸಂಗ್ರಹಣೆ ಮೇಲಿನ ಕಾರ್ಯಚರಣೆಯಲ್ಲಿ ಮೇಲ್ಕಂಡ ಅಧಿಕಾರಿಗಳು ಸೇರಿದಂತೆ ಪಿ.ಎಸ್.ಐ (ತನಿಖೆ) ಶ್ರೀ ಚಿದಾನಂದಪ್ಪ, ಸಿಬ್ಬಂದಿಯವರಾದ ವೆಂಕಟೇಶ್, ನಿಂಗರಾಜು, ಮಲ್ಲಿಕಾರ್ಜುನ, ನಾಗರಾಜ್ ಜೀಪ್ ಚಾಲಕರಾದ ರಾಜಪ್ಪ, ಮುರುಳಿಧರ ರವರ ತಂಡವು ಭೇದಿಸುವಲ್ಲಿ ಯಶಸ್ವಿಯಾಗಿದ್ದು ಈ ಪತ್ತೆ ಕಾರ್ಯಕ್ಕೆ ಪೊಲೀಸ್ ಅಧೀಕ್ಷಕರಾದ ಶ್ರೀಮತಿ ಉಮಾ ಪ್ರಶಾಂತ್ ರವರು ಮೆಚ್ಚುಗೆ ವ್ಯಕ್ತ ಪಡಿಸಿರುತ್ತಾರೆೆ

  • Related Posts

    ದಾವಣಗೆರೆಯ ಜಿಲ್ಲಾ ಪೊಲೀಸ್ ಚಿಣ್ಣರ ಅಂಗಳ ಶಾಲೆಗೆ ಭೇಟಿ ನೀಡಿದ ಡಾ. ಜಿ. ಪರಮೇಶ್ವರ್

    ಸನ್ಮಾನ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ದಾವಣಗೆರೆ ನಗರಕ್ಕೆ ವಿವಿಧ ಕಾರ್ಯಕ್ರಮಗಳ ಬೇಟಿ ನೀಡಿದ ಸಂದರ್ಭದಲ್ಲಿ ಪಿಜೆ ಬಡಾವಣೆಯ ಪೊಲೀಸ್ ವಸತಿ ಗೃಹ ಸಮುಚ್ಛಯದ ಆವರಣದಲ್ಲಿರುವ ದಾವಣಗೆರೆ ಜಿಲ್ಲಾ ಪೊಲೀಸ್ ಚಿಣ್ಣರ ಅಂಗಳ ಶಾಲೆಗೆ ಭೇಟಿ ನೀಡಿದರು. ನಂತರ…

    “ವಿಷ ಕೊಡಿ ಇಲ್ಲವೇ ಯೂರಿಯಾ ಕೊಡಿ” ದಾವಣಗೆರೆಯಲ್ಲಿ ಬಿಜೆಪಿ ಇಂದ ಪ್ರತಿಭಟನೆ

    ದಾವಣಗೆರೆ ಜಿಲ್ಲಾ ಭಾರತೀಯ ಜನತಾ ಪಕ್ಷದ ವತಿಯಿಂದ ದಾವಣಗೆರೆಯಲ್ಲಿ ಪ್ರತಿಭಟನೆ ಮಾಡಲಾಯಿತು. ರೈತರಿಗೆ ಸಮಯಕ್ಕೆ ಸರಿಯಾಗಿ ಯೂರಿಯಾ ಗೊಬ್ಬರ ಕೊಡದೇ, ರೈತರ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆ ಹಾಗೂ ತನ್ನ ತಪ್ಪನ್ನು ಕೇಂದ್ರ ಸರ್ಕಾರದ…

    Leave a Reply

    Your email address will not be published. Required fields are marked *

    error

    Enjoy this blog? Please spread the word :)

    error: Content is protected !!