ಕೊಟ್ಟೂರು: ಫೆ22_ಶ್ರೀಗುರು ಕೊಟ್ಟೂರೇಶ್ವರ ರಥೋತ್ಸವ_ಪೂರ್ವಭಾವಿ ಸಭೆ…

ವಿಜಯನಗರ ಜಿಲ್ಲೆ ಕೊಟ್ಟೂರು : ಶ್ರೀಕ್ಷೇತ್ರ ಶ್ರೀಗುರು ಕೊಟ್ಟೂರೇಶ್ವರ ಸ್ವಾಮಿ ರಥೋತ್ಸವ ಫೇ 22 ರಂದು ಜರುಗಲಿದ್ದು, ತನ್ನಿಮ್ಮಿತ್ತ ಜ29ರಂದು ಪೂರ್ವಭಾವಿ ಸಭೆಯು, ಜಿಲ್ಲಾಧಿಕಾರಿಗಳಾದ ದಿವಾಕರ್ ಹಾಗೂ ಕ್ಷೇತ್ರದ ಶಾಸಕ ನೇಮಿರಾಜ್ ನಾಯ್ಕ್ ನೇತೃತ್ವದಲ್ಲಿ ಜರುಗಿತು.

ಜಿಲ್ಲಾಧಿಕಾರಿಗಳಾದ ದಿವಾಕರವರು ಮಾತನಾಡಿ, ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ನಸ್ಸರುಲ್ಲಾ ರವರ ಕುರಿತು ಸ್ವಚ್ಛತೆ ಹಾಗೂ ಬರುವಂತಹ ಭಕ್ತಾದಿಗಳಿಗೆ ಕುಡಿಯುವ ನೀರನ್ನು ಸಮರ್ಪಕವಾಗಿ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದರು.

ಪೊಲೀಸ್ ಇಲಾಖೆಯವರು ಜನ ದಟ್ಟಣೆ ಹಾಗೂ ವಾಹನ ದಟ್ಟಣೆ ನಿಯಂತ್ರಿಸಲು, ಹಾಗೂ ಶಾಂತಿ ಸುವ್ಯವಸ್ಥೆ ಕಾಪಾಡಲು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಜರುಗಿಸಬೇಕಿದೆ. ಅಗತ್ಯ ಸಿಬ್ಬಂದಿಗಳನ್ನು ನಿಯೋಜಿಸಬೇಕು, ಹೆಚ್ಚಚ್ಚು ಬ್ಯಾರಿಕೇಡ್ ಗಳನ್ನು ಅಗತ್ಯವಿರುವೆಡೆಗಳಲ್ಲಿ ಹಾಕಬೇಕಿದೆ. ಭಕ್ತರು ಹಾಗೂ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆ, ಹಾಗೂ ಅನಾಹುತಗಳಾಗದಂತೆ ಮುಂಜಾಗ್ರತ ಕ್ರಮ ಕೈಗೊಳ್ಳಬೇಂದು ಇಲಾಖಾಧಿಕಾರಿಗೆ ಸಲಹೆ ನೀಡಿದರು.

ವಿದ್ಯುತ್ ಇಲಾಖೆ ಸೇರಿದಂತೆ ವಿವಿದ ಇಲಾಖೆಗಳ ಅಧಿಕಾರಿಗಳಿಗೆ, ಹಲವು ಜವಾಬ್ದಾರಿಗಳನ್ನು ನೀಡುವ ಮೂಲಕ. ಹಲವು ಇಲಾಖೆಗಳ ಅಧಿಕಾರಿಗಳ ಹೆಗಲಿಗೆ, ಕೆಲ ಗುರುತರವಾದ ಜವಾಬ್ದಾರಿಗಳನ್ನು ಜಿಲ್ಲಾಧಿಕಾರಿಗಳು ವಹಿಸಿದರು. ರಥೋತ್ಸವ ಸಾಂಗವಾಗಿ ವಿಜೃಂಭಣೆಯಿಂದ ಜರುಗುವುದಕ್ಕೆ, ಅಗತ್ಯವಾಗಿ ಕೈಗೊಳ್ಳಬೇಕಾಗಿರುವ ಮುಂಜಾಗ್ರತಾ ಕ್ರಮಗಳಿಗೆ ಸಂಬಂಧಿಸಿದಂತೆ. ಅವರು ಪ್ರಮುಖ ಸಲಹೆ ಸೂಚನೆಗಳನ್ನು ಸಭೆಗೆ ನೀಡಿದರು. ರಥೋತ್ಸವ ಹಾಗೂ ಜಾತ್ರೆಗೆ ಸಂಭಂದಿಸಿದಂತೆ, ಅನೇಕ ಪ್ರಮುಖ ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಸಭೆಯಲ್ಲಿ ತಹಶಿಲ್ದಾರರಾದ ಜಿ.ಕೆ. ಅಮರೇಶ, ಪಟ್ಟಣ ಪಂಚಾಯ್ತಿ ಅದ್ಯಕ್ಷರಾದ ರೇಖಾ ರಮೇಶ್. ಉಪಾದ್ಯಕ್ಷರಾದ ಸಿದ್ದಯ್ಯ ಹಾಗೂ ವಿವಿದ ಸದಸ್ಯರು. ದೇವಸ್ಥಾನದ ಕ್ರಿಯಾಮೂರ್ತಿ ಪ್ರಕಾಶ್ ಸ್ವಾಮಿ, ತಾಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿ ಹನುಮಂತಪ್ಪ ಸೇರಿದಂತೆ ವಿವಿದ ಇಲಾಖಾಧಿಕಾರಿಗಳು ಹಾಜರಿದ್ದರು. ಧರ್ಮಕರ್ತರಾದ ಶೇಖರಯ್ಯ. ಕಟ್ಟೆಮನೆ ದೈವಸ್ಥರು ಮತ್ತು ಪಟ್ಟಣದ ಹಿರಿಯ ನಾಗರೀಕರು, ಭಕ್ತರು, ಪ್ರಮುಖರು, ದೈವಸ್ಥರು, ಪಟ್ಟಣದ ಪ್ರಮುಖರು, ಗಣ್ಯರು ಊಪಸ್ಥಿತರಿದ್ದರು.

  • Related Posts

    ಚಿಕ್ಕ ವಯಸ್ಸಿಗೆ ದೊಡ್ಡ ಸಾಧನೆ : ವರ್ಲ್ಡ್ ವೈಡ್ ಬುಕ್ ಆಫ್ ರೆಕಾರ್ಡ್ ಗೆ ಸೇರಿದ ದ್ವಿತಾ ಮೋಹನ್

    ಹೊಸಪೇಟೆ ಕಂಪ್ಲಿ: ಸ್ಥಳೀಯ ನಿವಾಸಿ ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯರಾದ ಮೋಹನ್ ಕುಮಾರ್ ದಾನಪ್ಪ, ಸೌಮ್ಯ ಶ್ರೀ ದಂಪತಿಯ ದ್ವೀತಿಯ ಪುತ್ರಿ ದ್ವಿತಾ ಮೋಹನ್ (6 ತಿಂಗಳು) ರು ಯಾವುದೇ ಸಹಾಯ, ಬಾಹ್ಯ ಬೆಂಬಲವಿಲ್ಲದೆ ಅತಿ ಹೆಚ್ಚು ಸಮಯ…

    ವಿಜಯನಗರ ಜಿಲ್ಲಾಧಿಕಾರಿಗಳು ವಿವಿಧ ಕಂದಾಯ ಅಧಿಕಾರಿಗಳೊಂದಿಗೆ ಜಿಲ್ಲಾಮಟ್ಟದ ಗೈರು ವಿಲೇ ಸಮಿತಿ ಸಭೆ…

    ದಿನಾಂಕ:25.03.2025 ರಂದು ಮಾನ್ಯ ಜಿಲ್ಲಾಧಿಕಾರಿಗಳು ಎಂ ಎಸ್ ದೇವಕರವರು, ಹಡಗಲಿ & ಹರಪನಹಳ್ಳಿ ತಾಲೂಕಿನ ವಿವಿಧ ಕಂದಾಯ ಅಧಿಕಾರಿಗಳೊಂದಿಗೆ ಜಿಲ್ಲಾಮಟ್ಟದ ಗೈರು ವಿಲೇ ಸಮಿತಿ ಸಭೆ ನಡೆಸಿ, ಭೂ ಮಂಜೂರಾತಿ ಪ್ರಕರಣಗಳಲ್ಲಿ ಮಿಸ್ಸಿಂಗ್‌ ಕಡತಗಳ ನಿರ್ವಹಣೆ ಹಾಗೂ ಸ್ಥಾನಿಕ ವರದಿಗಳನ್ನು ಸೇರಿದಂತೆ…

    Leave a Reply

    Your email address will not be published. Required fields are marked *

    error

    Enjoy this blog? Please spread the word :)

    error: Content is protected !!