ಶಿವಮೊಗ್ಗದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ….

೨೬ ಜೂಲೈ ೨೦೨೫, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಶಿವಮೊಗ್ಗ ತಾಲ್ಲೂಕು ಘಟಕ ಇಂದು ಶಿವಮೊಗ್ಗದ ವಿನೋಬನಗರದ ಸ್ವಗೃಹದಲ್ಲಿ ಆಯೋಜಿಸಿದ್ದ ಪದಾಧಿಕಾರಿಗಳ ಘೋಷಣೆ ಹಾಗೂ ವಿವಿಧ ಘಟಕಗಳ ಜವಾಬ್ದಾರಿ ಹಂಚಿಕೆ ಸಮಾರಂಭದಲ್ಲಿ ಪಾಲ್ಗೊಂಡು ನೂತನ ಪದಾಧಿಕಾರಿಗಳಿಗೆ ಪ್ರಮಾಣ ಪತ್ರ ವಿತರಿಸಿದರು.

ಈ ವೇಳೆ ಬಿ. ವೈ. ರಾಘವೇಂದ್ರರವರು ವೀರಶೈವ ಲಿಂಗಾಯತ ಸಮುದಾಯದ ಸುದೀರ್ಘ ಇತಿಹಾಸ, ಗುರು ಪರಂಪರೆ, ಸಮಾಜದ ಮುಖ್ಯವಾಹಿನಿಯಲ್ಲಿ ಮಠಗಳು ತೋರುತ್ತಿರುವ ಪಾತ್ರ, ದಾಸೋಹದ ಮಹತ್ವ, ನಿರಂತರ ಶಿಕ್ಷಣ, ಆರೋಗ್ಯ ಸೇವೆಗಳು ಸೇರಿದಂತೆ ಇನ್ನೂ ಅನೇಕ ಸಮಾಜಮುಖಿ ಕಾರ್ಯಗಳಲ್ಲಿ ವೀರಶೈವ ಲಿಂಗಾಯತ ಸಮುದಾಯ ತೋರುತ್ತಿರುವ ಬಹುಮುಖ್ಯ ಪಾತ್ರಗಳ ಬಗ್ಗೆ ಹಾಗೂ ಸಮುದಾಯ ಕಟ್ಟಲು ಒಗ್ಗಟ್ಟಿನ ಮಂತ್ರದ ಮೂಲಕ ಸಂಘಟಿಸುವ ಕುರಿತು ಮಾತನಾಡಿದರು.

ಈ ಸಂದರ್ಭದಲ್ಲಿ ಪ್ರಮುಖರಾದ ಶ್ರೀ ಬಳ್ಳೇಕೆರೆ ಸಂತೋಷ್ ಅವರು, ಶ್ರೀ ಮಲ್ಲಿಕಾರ್ಜುನ್ ಅವರು, ಶ್ರೀಮತಿ ಅನಿತಾ ರವಿಶಂಕರ್ ಅವರು, ಶ್ರೀಮತಿ ಗೀತಾ ರವೀಂದ್ರ ಅವರು, ಶ್ರೀ ನವೀನ್ ವಾರದ್ ಅವರು ಸೇರಿದಂತೆ ಅನೇಕ ಹಿರಿಯರು ಉಪಸ್ಥಿತರಿದ್ದರು.

  • Related Posts

    ಶಿವಮೊಗ್ಗದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ, ಬಿಜೆಪಿ ಪಕ್ಷದ ನೂತನ ಜಿಲ್ಲಾ ಪದಾಧಿಕಾರಿಗಳ ಕಾರ್ಯಕ್ರಮ

    ೨೬-೭೨೫, ಶಿವಮೊಗ್ಗ, ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಇಂದು ಹಮ್ಮಿಕೊಂಡಿದ್ದ ಭಾರತೀಯ ಜನತಾ ಪಕ್ಷದ ನೂತನ ಜಿಲ್ಲಾ ಪದಾಧಿಕಾರಿಗಳ ಘೋಷಣೆ ಹಾಗೂ ಪಕ್ಷದ ತಾಲ್ಲೂಕು ಘಟಕದ ಅಧ್ಯಕ್ಷರುಗಳ ಪದಗ್ರಹಣ ಸಮಾರಂಭದಲ್ಲಿ ಪಕ್ಷದ ಶಾಲು ಹೊದಿಸುವ ಮೂಲಕ ಚಾಲನೆ ನೀಡಿದರು. ಬಿ ವೈ ರಾಘವೇಂದ್ರರವರು…

    ಶಿವಮೊಗ್ಗ ಅಭಿವೃದ್ಧಿಗೆ ಕುರಿತು ಸಚಿವ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಜಿ ಅವರನ್ನು ಭೇಟಿ

    ಬಿ. ವೈ. ರಾಘವೇಂದ್ರರವರು ಶಿವಮೊಗ್ಗ ಕ್ಷೇತ್ರದ ಪ್ರಮುಖ ಪ್ರವಾಸೋದ್ಯಮ ತಾಣಗಳ ಅಭಿವೃದ್ಧಿಯ ಕುರಿತು ಹಿಂದಿನ ಪ್ರಸ್ತಾವನೆಯನ್ನು ಮುಂದುವರಿಸಲು ದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಜಿ ಅವರನ್ನು ಭೇಟಿ ಮಾಡಿ ಮಾತನಾಡಿಯಾರು. ರಾಜ್ಯಗಳಿಗೆ ಬಂಡವಾಳ…

    Leave a Reply

    Your email address will not be published. Required fields are marked *

    error

    Enjoy this blog? Please spread the word :)

    error: Content is protected !!