
ಬೆಳಗಾವಿ ನಗರದ ಕೆ.ಪಿ.ಟಿ.ಸಿ.ಎಲ್ ಸಮುದಾಯ ಭವನದಲ್ಲಿ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ (ರಿ) ಜಿಲ್ಲಾ ಘಟಕ ಬೆಳಗಾವಿ ಇವರ ಆಶ್ರಯದಲ್ಲಿ ನಡೆದ 26 ನೇ ಕಾರ್ಗಿಲ್ ಮತ್ತು ಆಪರೇಷನ್ ಸಿಂಧೂರ ವಿಜಯೋತ್ಸವದ ಕಾರ್ಯಕ್ರಮ ನಡೆಯಿತು

ಈ ಸಂದರ್ಭದಲ್ಲಿ ,ಮಾತನಾಡಿದ ಲಕ್ಷ್ಮಿ ಹೆಬ್ಬಾಳ್ಕರ್ , 26 ವರ್ಷಗಳ ಹಿಂದೆ, 1999ರಲ್ಲಿ ನಡೆದ ಕಾರ್ಗಿಲ್ ಯುದ್ಧದ ವಿಜಯೋತ್ಸವ ಮತ್ತು ವೀರ ಮರಣವನ್ನಪ್ಪಿದ ನಮ್ಮ ಸೈನಿಕರ ತ್ಯಾಗ ಮತ್ತು ಶೌರ್ಯವನ್ನು ಗೌರವಪೂರ್ವಕವಾಗಿ ಸ್ಮರಿಸಿದರು.

ಕಾರ್ಯಕ್ರಮದಲ್ಲಿ ಶ್ರೀ ರುದ್ರಯ್ಯ ಹಿರೇಮಠ್ ಸ್ವಾಮಿಗಳು, ಶಾಸಕರಾದ ಆಸಿಫ್ ಸೇಠ್, ಬಸಪ್ಪ ತಳವಾರ, ಯುವರಾಜಣ್ಣ ಕದಂ, ಮನೋಹರ್ ಬೆಳಗಾಂವ್ಕರ್, ಶಂಕರಗೌಡ ಪಾಟೀಲ, ಸುನಿಲ ದಾಗರ್, ಕಲ್ಲಪ್ಪ ಪಾಟೀಲ, ಆರ್.ವಾಯ್.ಹಿರೇಮಠ್, ಮಾಜಿ ಸೈನಿಕರು ಉಪಸ್ಥಿತರಿದ್ದರು.








