
೨೮, ಜೂಲೈ ೨೦೨೫, ಬೆಳಗಾವಿ ಜಿಲ್ಲೆ ಬೈಲಹೊಂಗಲ ನಗರದ ಬಿ.ಬಿ.ಗಣಾಚಾರಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಡಿದ್ದ ಬೆಳಗಾವಿ ಗ್ರಾಮೀಣ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಯುವ ಪರ್ವ ಪ್ರತಿಜ್ಞೆ – 2025 ರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನಡೆಯಿತು, ಈ ಸಂದರ್ಭದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಪದಾಧಿಕಾರಿಗಳಿಗೆ ಶುಭ ಕೋರಿದರು

ಸಮಾರಂಭ ಉದ್ದೇಶಿಸಿ ಮಾತನಾಡಿದ ಲಕ್ಷ್ಮಿ ಹೆಬ್ಬಾಳ್ಕರ್ ಪಕ್ಷದ ಹಾಗೂ ರಾಷ್ಟ್ರದ ಭವಿಷ್ಯ ಯುವಕರ ಕೈಯಲ್ಲಿದ್ದು, ದೇಶದ ಭವಿಷ್ಯ ರೂಪಿಸುವಲ್ಲಿ ಯುವ ಕಾಂಗ್ರೆಸ್ ಪ್ರಮುಖ ಪಾತ್ರ ವಹಿಸುತ್ತಿದೆ. ಯುವಕರು ಜನರ ಸಮಸ್ಯೆಗಳ ಕುರಿತಂತೆ ಆತ್ಮೀಯತೆ ಮತ್ತು ಜವಾಬ್ದಾರಿಯಿಂದ ಕೆಲಸ ಮಾಡಬೇಕು. ದೇಶದ ಬೆಳವಣಿಗೆಗೆ ಯುವಕರ ಶ್ರಮದ ಅಗತ್ಯವಿದ್ದು, ಹಾಗಾಗಿ ಯುವಕರು ತಕ್ಕ ರೀತಿಯಲ್ಲಿ ನಿಷ್ಠೆ ಮತ್ತು ಶ್ರಮದಿಂದ ಪಕ್ಷದ ಬಗ್ಗೆ ಕಾಳಜಿ ವಹಿಸಿ ಕಾರ್ಯ ನಿರ್ವಹಿಸುವುದು ಅತ್ಯವಶ್ಯಕ ಎಂದರು.

ಈ ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಅಣ್ಣ ಜಾರಕಿಹೊಳಿ, ಶಾಸಕರಾದ ಮಹಾಂತೇಶ್ ಕೌಜಲಗಿ, ಬಾಬಾಸಾಹೇಬ್ ಪಾಟೀಲ, ವಿಶ್ವಾಸ್ ವೈದ್ಯ, ಮುಖಂಡರಾದ ಮಹಾಂತೇಶ್ ಕಡಾಡಿ, ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ರಾಜ್ಯಾಧ್ಯಕ್ಷರಾದ ಮುಂಜುನಾಥ್ ಎಚ್.ಎಸ್, ಮೃಣಾಲ್ ಹೆಬ್ಬಾಳಕರ್, ವಿನಯ ನಾವಲಗಟ್ಟಿ, ರಾಹುಲ್ ಜಾರಕಿಹೊಳಿ, ಕಾರ್ತಿಕ ಪಾಟೀಲ, ದೀಪಿಕಾ ರೆಡ್ಡಿ, ಅಬ್ದುಲ್ ದೇಸಾಯಿ ಉಪಸ್ಥಿತರಿದ್ದರು.









