
ಸನ್ಮಾನ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ದಾವಣಗೆರೆ ನಗರಕ್ಕೆ ವಿವಿಧ ಕಾರ್ಯಕ್ರಮಗಳ ಬೇಟಿ ನೀಡಿದ ಸಂದರ್ಭದಲ್ಲಿ ಪಿಜೆ ಬಡಾವಣೆಯ ಪೊಲೀಸ್ ವಸತಿ ಗೃಹ ಸಮುಚ್ಛಯದ ಆವರಣದಲ್ಲಿರುವ ದಾವಣಗೆರೆ ಜಿಲ್ಲಾ ಪೊಲೀಸ್ ಚಿಣ್ಣರ ಅಂಗಳ ಶಾಲೆಗೆ ಭೇಟಿ ನೀಡಿದರು.

ನಂತರ ಚಿಣ್ಣರ ಅಂಗಳ ಶಾಲಾ ವ್ಯವಸ್ಥೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಚಿಣ್ಣರ ಅಂಗಳ ಶಾಲಾ ಮಕ್ಕಳಿಗೆ ಚಾಕೋಲೆಟ್ ಕೊಟ್ಟು , ಕೇಕ್ ತಿನ್ನಿಸಿ ಮಕ್ಕಳೊಂದಿಗೆ ಸೆಲ್ಫಿ ಪೋಟೋ ತೆಗೆದುಕೊಂಡರು. ನಿರಂತರ ಕಾರ್ಯಕ್ರಮ ಮಧ್ಯದಲ್ಲಿ ಸ್ವಲ್ಪ ಸಮಯ ಮಕ್ಕಳೊಂದಿಗೆ ಸಮಯ ಕಳೆದರು.

ಈ ಸಂದರ್ಭದಲ್ಲಿ ಮಾನ್ಯ ಐಜಿಪಿ ರವರಾದ ಡಾ. ಬಿ ಆರ್ ರವಿಕಾಂತೇಗೌಡ ಐಪಿಎಸ್ ರವರು, ಪೊಲೀಸ್ ಅಧೀಕ್ಷಕರಾದ ಶ್ರೀಮತಿ ಉಮಾ ಪ್ರಶಾಂತ್ ಐಪಿಎಸ್ ರವರು, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ಪರಮೇಶ್ವರ ಹೆಗಡೆ & ಶ್ರೀ ಜಿ ಮಂಜುನಾಥ ರವರು ಹಾಗೂ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.










