
31 ಜೂಲೈ 2025,
ನವದೆಹಲಿಯಲ್ಲಿ ಕೇಂದ್ರ ರಸಗೊಬ್ಬರ ಸಚಿವರಾದ ಶ್ರೀ ಜೆ.ಪಿ. ನಡ್ಡಾ ಅವರಿಗೆ ದಾವಣಗೆರೆ ಜಿಲ್ಲೆಗೆ ತಕ್ಷಣ ಯೂರಿಯಾ ಪೂರೈಕೆ ಮಾಡಬೇಕೆಂದು ಸಚಿವರಾದ ಡಾ।। ಪ್ರಭಾ ಮಲ್ಲಿಕಾರ್ಜುನ್ ಮನವಿ ಪತ್ರ ಸಲ್ಲಿಸಿದರು.
ಪ್ರಸ್ತುತ ದಾವಣಗೆರೆ ಜಿಲ್ಲೆಯಲ್ಲಿ ಮುಂಗಾರು ಮಳೆ ಸಮೃದ್ಧವಾಗಿದ್ದು, ಬಿತ್ತನೆ ಚಟುವಟಿಕೆ ವೇಗವರ್ಧಿತವಾಗಿದೆ. ಈ ಹಿನ್ನೆಲೆಯಲ್ಲಿ ರೈತರಿಗೆ ತಕ್ಷಣ 16,568 ಮೆಟ್ರಿಕ್ ಟನ್ ಯೂರಿಯಾ ಅಗತ್ಯವಿದ್ದು, ಕೇಂದ್ರ ಸರ್ಕಾರವು ತ್ವರಿತ ಕ್ರಮ ಕೈಗೊಂಡು ಪೂರೈಕೆ ಮಾಡಬೇಕೆಂದು ಮನವಿ ಮಾಡಲಾಯಿತು.
ಈ ಸಂದರ್ಭದಲ್ಲಿ ಸಂಸದರುಗಳಾದ ಶ್ರೀ ಸಾಗರ್ ಖಂಡ್ರೆ, ಶ್ರೀ ಜಿ. ಕುಮಾರ್ ನಾಯಕ್ ಮತ್ತು ಶ್ರೀ ತುಕಾರಾಂ ಅವರುಗಳು ನಿಯೋಗದಲ್ಲಿ ಭಾಗಿಯಾಗಿದ್ದರು.








