ಕುಂದುವಾಡ ಸಹಕಾರಿ ಸಂಘಕ್ಕೆ ಅಧ್ಯಕ್ಷರಾಗಿ ಹೆಚ್ ಜಿ ಗೋಪಾಲಪ್ಪ ಅವಿರೋಧ ಆಯ್ಕೆ..

ದಾವಣಗೆರೆ; ಕುಂದುವಾಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರ ಆಯ್ಕೆ ಹಳೇ ಕುಂದುವಾಡದ ಕಚೇರಿಯಲ್ಲಿ ಗುರುವಾರ ನಡೆಯಿತು.. ಅಧ್ಯಕ್ಷರಾಗಿ ಹೆಚ್ ಜಿ ಗೋಪಾಲಪ್ಪ, ಉಪಾಧ್ಯಕ್ಷರಾಗಿ ಹನುಮಂತಪ್ಪ ಅವಿರೋಧವಾಗಿ ಆಯ್ಕೆಯಾದರು. ಗೋಪಾಲಪ್ಪ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಆಯ್ಕೆ ಮಾಡಲಾಯಿತು..

ನೂತನ ಅಧ್ಯಕ್ಷರಿಗೆ, ಉಪಾಧ್ಯಕ್ಷರಿಗೆ ಗ್ರಾಮಸ್ಥರು, ಮುಖಂಡರು ಸನ್ಮಾನಿಸಿ ಗೌರವಿಸಿದರು.. ಈ ಸಂದರ್ಭದಲ್ಲಿ ಮಾತನಾಡಿದ ನೂತನ ಅಧ್ಯಕ್ಷ ಹೆಚ್ ಜಿ ಗೋಪಾಲಪ್ಪ, ಕೃಷಿಗೆ ಸಹಕಾರಿ ಸಂಘಗಳು ಅತ್ಯಮ್ಯೂಲವಾದ ಕೊಡುಗೆ ನೀಡುತ್ತಾ ಬಂದಿದೆ.. ಇಂದು ಕೃಷಿ ಪತ್ತಿನ ಸಹಕಾರಿ ಸಂಘಗಳಿಂದ ರೈತರು ಬಡ್ಡಿರಹಿತ ಸಾಲ ಪಡೆದು ವ್ಯವಸಾಯ ಮಾಡುತ್ತಿದ್ದಾರೆ, ಇಂತಹ ಸಂಘಗಳಿಂದ ರೈತರ ಬದುಕು ಹಸನಾಗಿದೆ, ಕುಂದುವಾಡ ಕೃಷಿ ಪತ್ತಿನ ಸಹಕಾರ ಹಿಂದಿನಿಂದಲೂ ಉತ್ತಮ ಕಾರ್ಯ ನಡೆಸುತ್ತಾ ಬಂದಿದ್ದು, ಮುಂದೆಯೂ ಸಹ ನನ್ನ ಅಧ್ಯಕ್ಷತೆಯಲ್ಲಿ ರೈತರಿಗೆ ಬಡವರಿಗೆ ಮತ್ತಷ್ಟು ಅನುಕೂಲ ವಾತಾವರಣ ಕಲ್ಪಿಸುವ ದಾರಿಯಲ್ಲಿ ಮುನ್ನಡೆಸುತ್ತೇವೆ ಎಂದು ಭರವಸೆ ನೀಡಿದರು..

ಈ ಸಂದರ್ಭದಲ್ಲಿ ಮಾಜಿ ಮೇಯರ್ ಹೆಚ್ ಎನ್ ಗುರುನಾಥ್, ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಹೆಚ್ ತಿಪ್ಪಣ್ಣ, ಎಪಿಎಂಸಿ ಮಾಜಿ ಅಧ್ಯಕ್ಷ ಹೆಚ್ ಜಿ ಗಣೇಶಪ್ಪ, ಮುಖಂಡರಾದ ಮಹೇಶಪ್ಪ, ಜೆ ಮಾರುತಿ, ರೇಣುಕಮ್ಮ, ಹನುಮಂತಪ್ಪ, ಗೌಡ್ರು ಬಸವರಾಜಪ್ಪ, ಚಂದ್ರಪ್ಪ, ಮಂಜಪ್ಪ, ಧರ್ಮಪ್ಪ, ಮಹಾಂತೇಶ್, ಮಧುನಾಗರಾಜ್, ಸಹಕಾರ ಸಂಘದ ಕಾರ್ಯದರ್ಶಿ ರೇವಣಸಿದ್ದಪ್ಪ ಸೇರಿದಂತೆ ಮತ್ತಿತರರು ಇದ್ದರು..

  • Related Posts

    ದಾವಣಗೆರೆಯ ಜಿಲ್ಲಾ ಪೊಲೀಸ್ ಚಿಣ್ಣರ ಅಂಗಳ ಶಾಲೆಗೆ ಭೇಟಿ ನೀಡಿದ ಡಾ. ಜಿ. ಪರಮೇಶ್ವರ್

    ಸನ್ಮಾನ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ದಾವಣಗೆರೆ ನಗರಕ್ಕೆ ವಿವಿಧ ಕಾರ್ಯಕ್ರಮಗಳ ಬೇಟಿ ನೀಡಿದ ಸಂದರ್ಭದಲ್ಲಿ ಪಿಜೆ ಬಡಾವಣೆಯ ಪೊಲೀಸ್ ವಸತಿ ಗೃಹ ಸಮುಚ್ಛಯದ ಆವರಣದಲ್ಲಿರುವ ದಾವಣಗೆರೆ ಜಿಲ್ಲಾ ಪೊಲೀಸ್ ಚಿಣ್ಣರ ಅಂಗಳ ಶಾಲೆಗೆ ಭೇಟಿ ನೀಡಿದರು. ನಂತರ…

    “ವಿಷ ಕೊಡಿ ಇಲ್ಲವೇ ಯೂರಿಯಾ ಕೊಡಿ” ದಾವಣಗೆರೆಯಲ್ಲಿ ಬಿಜೆಪಿ ಇಂದ ಪ್ರತಿಭಟನೆ

    ದಾವಣಗೆರೆ ಜಿಲ್ಲಾ ಭಾರತೀಯ ಜನತಾ ಪಕ್ಷದ ವತಿಯಿಂದ ದಾವಣಗೆರೆಯಲ್ಲಿ ಪ್ರತಿಭಟನೆ ಮಾಡಲಾಯಿತು. ರೈತರಿಗೆ ಸಮಯಕ್ಕೆ ಸರಿಯಾಗಿ ಯೂರಿಯಾ ಗೊಬ್ಬರ ಕೊಡದೇ, ರೈತರ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆ ಹಾಗೂ ತನ್ನ ತಪ್ಪನ್ನು ಕೇಂದ್ರ ಸರ್ಕಾರದ…

    Leave a Reply

    Your email address will not be published. Required fields are marked *

    error

    Enjoy this blog? Please spread the word :)

    error: Content is protected !!