ಕುಂದುವಾಡ ಸಹಕಾರಿ ಸಂಘಕ್ಕೆ ಅಧ್ಯಕ್ಷರಾಗಿ ಹೆಚ್ ಜಿ ಗೋಪಾಲಪ್ಪ ಅವಿರೋಧ ಆಯ್ಕೆ..

ದಾವಣಗೆರೆ; ಕುಂದುವಾಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರ ಆಯ್ಕೆ ಹಳೇ ಕುಂದುವಾಡದ ಕಚೇರಿಯಲ್ಲಿ ಗುರುವಾರ ನಡೆಯಿತು.. ಅಧ್ಯಕ್ಷರಾಗಿ ಹೆಚ್ ಜಿ ಗೋಪಾಲಪ್ಪ, ಉಪಾಧ್ಯಕ್ಷರಾಗಿ ಹನುಮಂತಪ್ಪ ಅವಿರೋಧವಾಗಿ ಆಯ್ಕೆಯಾದರು. ಗೋಪಾಲಪ್ಪ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಆಯ್ಕೆ ಮಾಡಲಾಯಿತು..

ನೂತನ ಅಧ್ಯಕ್ಷರಿಗೆ, ಉಪಾಧ್ಯಕ್ಷರಿಗೆ ಗ್ರಾಮಸ್ಥರು, ಮುಖಂಡರು ಸನ್ಮಾನಿಸಿ ಗೌರವಿಸಿದರು.. ಈ ಸಂದರ್ಭದಲ್ಲಿ ಮಾತನಾಡಿದ ನೂತನ ಅಧ್ಯಕ್ಷ ಹೆಚ್ ಜಿ ಗೋಪಾಲಪ್ಪ, ಕೃಷಿಗೆ ಸಹಕಾರಿ ಸಂಘಗಳು ಅತ್ಯಮ್ಯೂಲವಾದ ಕೊಡುಗೆ ನೀಡುತ್ತಾ ಬಂದಿದೆ.. ಇಂದು ಕೃಷಿ ಪತ್ತಿನ ಸಹಕಾರಿ ಸಂಘಗಳಿಂದ ರೈತರು ಬಡ್ಡಿರಹಿತ ಸಾಲ ಪಡೆದು ವ್ಯವಸಾಯ ಮಾಡುತ್ತಿದ್ದಾರೆ, ಇಂತಹ ಸಂಘಗಳಿಂದ ರೈತರ ಬದುಕು ಹಸನಾಗಿದೆ, ಕುಂದುವಾಡ ಕೃಷಿ ಪತ್ತಿನ ಸಹಕಾರ ಹಿಂದಿನಿಂದಲೂ ಉತ್ತಮ ಕಾರ್ಯ ನಡೆಸುತ್ತಾ ಬಂದಿದ್ದು, ಮುಂದೆಯೂ ಸಹ ನನ್ನ ಅಧ್ಯಕ್ಷತೆಯಲ್ಲಿ ರೈತರಿಗೆ ಬಡವರಿಗೆ ಮತ್ತಷ್ಟು ಅನುಕೂಲ ವಾತಾವರಣ ಕಲ್ಪಿಸುವ ದಾರಿಯಲ್ಲಿ ಮುನ್ನಡೆಸುತ್ತೇವೆ ಎಂದು ಭರವಸೆ ನೀಡಿದರು..

ಈ ಸಂದರ್ಭದಲ್ಲಿ ಮಾಜಿ ಮೇಯರ್ ಹೆಚ್ ಎನ್ ಗುರುನಾಥ್, ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಹೆಚ್ ತಿಪ್ಪಣ್ಣ, ಎಪಿಎಂಸಿ ಮಾಜಿ ಅಧ್ಯಕ್ಷ ಹೆಚ್ ಜಿ ಗಣೇಶಪ್ಪ, ಮುಖಂಡರಾದ ಮಹೇಶಪ್ಪ, ಜೆ ಮಾರುತಿ, ರೇಣುಕಮ್ಮ, ಹನುಮಂತಪ್ಪ, ಗೌಡ್ರು ಬಸವರಾಜಪ್ಪ, ಚಂದ್ರಪ್ಪ, ಮಂಜಪ್ಪ, ಧರ್ಮಪ್ಪ, ಮಹಾಂತೇಶ್, ಮಧುನಾಗರಾಜ್, ಸಹಕಾರ ಸಂಘದ ಕಾರ್ಯದರ್ಶಿ ರೇವಣಸಿದ್ದಪ್ಪ ಸೇರಿದಂತೆ ಮತ್ತಿತರರು ಇದ್ದರು..

  • Related Posts

    ಜಿಲ್ಲಾ ಪೊಲೀಸ್ ವತಿಯಿಂದ ರಸ್ತೆ ಸುರಕ್ಷತಾ ಮಾಸಾಚರಣೆಯ ಸಮಾರೋಪ ಸಮಾರಂಭ…

    ದಿನಾಂಕ: 01-01-2025 ರಿಂದ 31-01-2025 ಒಂದು ತಿಂಗಳ ಕಾಲ ಪ್ರತಿ ವರ್ಷದಂತೆ ರಸ್ತೆ ಸುರಕ್ಷತಾ ಮಾಸಾಚರಣೆಯನ್ನು ಜಿಲ್ಲಾ ಪೊಲೀಸ್ ವತಿಯಿಂದ ಹಮ್ಮಿಕೊಂಡಿದ್ದು, ಇಂದು ದಾವಣಗೆರೆ ನಗರದ ರೇಣುಕಾ ಮಂದಿರದ ಕಲ್ಯಾಣ ಮಂಟಪದಲ್ಲಿ ರಸ್ತೆ ಸುರಕ್ಷತಾ ಮಾಸಾಚರಣೆಯ ಸಮಾರೋಪ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ…

    ಶಾಲಾ ಆವರಣ ಅನೈತಿಕ ತಾಣಗಳಾಗಬಾರದು, ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ಸಿಗಬೇಕು, ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್….

    ದಾವಣಗೆರೆ, ಜನವರಿ.28 : ಜಿಲ್ಲೆಯಲ್ಲಿನ ಎಲ್ಲಾ ಸರ್ಕಾರಿ ಶಾಲೆಗಳಿಗೆ ಕಾಂಪೌಂಡ್ ಸೇರಿದಂತೆ ಕೊಠಡಿ, ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಆಸನ ವ್ಯವಸ್ಥೆಯನ್ನು ಕಲ್ಪಿಸುವ ಮೂಲಕ ಗುಣಮಟ್ಟದ ಶಿಕ್ಷಣ ಭವಿಷ್ಯದ ನಾಗರಿಕರಾಗುವ ಪ್ರತಿ ಮಕ್ಕಳಿಗೆ ಸಿಗುವಂತೆ ಮಾಡಬೇಕು, ಆದರೆ ಸಂಜೆಯ ವೇಳೆ…

    Leave a Reply

    Your email address will not be published. Required fields are marked *

    error: Content is protected !!