ದೇಶಸೇವೆಗೈದು ನಿವೃತ್ತರಾದ ಯೋಧರಿಗೆ ಅದ್ದೂರಿ ಸ್ವಾಗತ 

1st April 2022
ಸುಧೀರ್ಘ ಕಾಲ ದೇಶದೇವೆಗೈದು ಸೇನೆಯಿಂದ ನಿವೃತ್ತರಾಗಿ ಆಗಮಿಸಿದ ದಾವಣಗೆರೆಯ ಸರಸ್ವತಿ ನಗರದ ನಿವಾಸಿಗಳಾದ  ಯೋಧ ಪರಮೇಶ್ ಹಾಗೂ ಪುಟ್ಟಸ್ವಾಮಿ ಅವರಿಗೆ ನಗರದ ರೈಲ್ವೆ ನಿಲ್ದಾಣದಲ್ಲಿ ಅದ್ದೂರಿಯಾಗಿ ಸ್ವಾಗತಕೋರಲಾಯಿತು.
ಯೋಧರನ್ನು ಸ್ವಾಗತ ಮಾಡಿಕೊಂಡ ಹಿಂದೂ ಪರ ಸಂಘಟನೆ ಕಾರ್ಯಕರ್ತರು ಹಾಗೂ ಮಾಜಿ ಸೈನಿಕರು ಹೂವಿನ ಹಾರ ಹಾಕಿ ಜೈಕಾರ ಕೂಗಿದರು.ಸುಧೀರ್ಘ 17 ವರ್ಷ ಸೇವೆ ಸಲ್ಲಿಸಿ ನಿವೃತ್ತರಾದ ದಾವಣಗೆರೆಯ ಪರಮೇಶ್ ಹಾಗೂ ಪುಟ್ಟಸ್ವಾಮಿ.ಇವರಿಬ್ಬರೂ ದೇಶದ ಅಹ್ಮದ್ ನಗರ, ಸೂರತ್, ಪಂಜಾಬ್, ಕಾಶ್ಮೀರ ಗಳಲ್ಲಿ ಸೇವೆ ಸಲ್ಲಿಸಿದ್ದರು.ತೆರೆದ ವಾಹನದಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ಇಬ್ಬರೂ ಯೋಧರನ್ನು ಮೆರವಣಿಗೆ ಮಾಡಲಾಯಿತು.ಈ ವೇಳೆ ಮಾತನಾಡಿದ ಯೋಧ ಪರಮೇಶ್
ಅದ್ದೂರಿ ಸ್ವಾಗತ ನೋಡಿ ಅತ್ಯಂತ ಸಂತಸವಾಗುತ್ತಿದೆ. ಪ್ರತಿಯೊಬ್ಬರು ಸೇನೆಗೆ ಹೋಗಿ ದೇಶ ಭದ್ರತೆ ಮಾಡಬೇಕು.
ದೇಶ ಇದ್ದರೆ ನಾವು, ಇಲ್ಲವಾದ್ರೆ ಉಕ್ರೇನ್ ಪರಿಸ್ಥಿತಿ ಉಂಟಾಗುತ್ತದೆ.ಐದಾರು ವರ್ಷಗಳಿಂದ ಭಾರತ ಸೇನೆ ಎಂದರೆ ಬೇರೆ ದೇಶಗಳಿಗೂ ಭಯ ಇದೆ.ಆದ್ದರಿಂದ ಪ್ರತಿಯೊಬ್ಬ ಯುವಕರೂ ಕೂಡ ಸೇನೆ ಸೇರಿ ದೇಶ ಸೇವೆ ಮಾಡುವಂತೆ ಮನವಿ ಮಾಡಿದರು.

  • Related Posts

    ಜಿಲ್ಲಾ ಪೊಲೀಸ್ ವತಿಯಿಂದ ರಸ್ತೆ ಸುರಕ್ಷತಾ ಮಾಸಾಚರಣೆಯ ಸಮಾರೋಪ ಸಮಾರಂಭ…

    ದಿನಾಂಕ: 01-01-2025 ರಿಂದ 31-01-2025 ಒಂದು ತಿಂಗಳ ಕಾಲ ಪ್ರತಿ ವರ್ಷದಂತೆ ರಸ್ತೆ ಸುರಕ್ಷತಾ ಮಾಸಾಚರಣೆಯನ್ನು ಜಿಲ್ಲಾ ಪೊಲೀಸ್ ವತಿಯಿಂದ ಹಮ್ಮಿಕೊಂಡಿದ್ದು, ಇಂದು ದಾವಣಗೆರೆ ನಗರದ ರೇಣುಕಾ ಮಂದಿರದ ಕಲ್ಯಾಣ ಮಂಟಪದಲ್ಲಿ ರಸ್ತೆ ಸುರಕ್ಷತಾ ಮಾಸಾಚರಣೆಯ ಸಮಾರೋಪ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ…

    ಶಾಲಾ ಆವರಣ ಅನೈತಿಕ ತಾಣಗಳಾಗಬಾರದು, ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ಸಿಗಬೇಕು, ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್….

    ದಾವಣಗೆರೆ, ಜನವರಿ.28 : ಜಿಲ್ಲೆಯಲ್ಲಿನ ಎಲ್ಲಾ ಸರ್ಕಾರಿ ಶಾಲೆಗಳಿಗೆ ಕಾಂಪೌಂಡ್ ಸೇರಿದಂತೆ ಕೊಠಡಿ, ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಆಸನ ವ್ಯವಸ್ಥೆಯನ್ನು ಕಲ್ಪಿಸುವ ಮೂಲಕ ಗುಣಮಟ್ಟದ ಶಿಕ್ಷಣ ಭವಿಷ್ಯದ ನಾಗರಿಕರಾಗುವ ಪ್ರತಿ ಮಕ್ಕಳಿಗೆ ಸಿಗುವಂತೆ ಮಾಡಬೇಕು, ಆದರೆ ಸಂಜೆಯ ವೇಳೆ…

    Leave a Reply

    Your email address will not be published. Required fields are marked *

    error: Content is protected !!