ದೇಶಸೇವೆಗೈದು ನಿವೃತ್ತರಾದ ಯೋಧರಿಗೆ ಅದ್ದೂರಿ ಸ್ವಾಗತ 

1st April 2022
ಸುಧೀರ್ಘ ಕಾಲ ದೇಶದೇವೆಗೈದು ಸೇನೆಯಿಂದ ನಿವೃತ್ತರಾಗಿ ಆಗಮಿಸಿದ ದಾವಣಗೆರೆಯ ಸರಸ್ವತಿ ನಗರದ ನಿವಾಸಿಗಳಾದ  ಯೋಧ ಪರಮೇಶ್ ಹಾಗೂ ಪುಟ್ಟಸ್ವಾಮಿ ಅವರಿಗೆ ನಗರದ ರೈಲ್ವೆ ನಿಲ್ದಾಣದಲ್ಲಿ ಅದ್ದೂರಿಯಾಗಿ ಸ್ವಾಗತಕೋರಲಾಯಿತು.
ಯೋಧರನ್ನು ಸ್ವಾಗತ ಮಾಡಿಕೊಂಡ ಹಿಂದೂ ಪರ ಸಂಘಟನೆ ಕಾರ್ಯಕರ್ತರು ಹಾಗೂ ಮಾಜಿ ಸೈನಿಕರು ಹೂವಿನ ಹಾರ ಹಾಕಿ ಜೈಕಾರ ಕೂಗಿದರು.ಸುಧೀರ್ಘ 17 ವರ್ಷ ಸೇವೆ ಸಲ್ಲಿಸಿ ನಿವೃತ್ತರಾದ ದಾವಣಗೆರೆಯ ಪರಮೇಶ್ ಹಾಗೂ ಪುಟ್ಟಸ್ವಾಮಿ.ಇವರಿಬ್ಬರೂ ದೇಶದ ಅಹ್ಮದ್ ನಗರ, ಸೂರತ್, ಪಂಜಾಬ್, ಕಾಶ್ಮೀರ ಗಳಲ್ಲಿ ಸೇವೆ ಸಲ್ಲಿಸಿದ್ದರು.ತೆರೆದ ವಾಹನದಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ಇಬ್ಬರೂ ಯೋಧರನ್ನು ಮೆರವಣಿಗೆ ಮಾಡಲಾಯಿತು.ಈ ವೇಳೆ ಮಾತನಾಡಿದ ಯೋಧ ಪರಮೇಶ್
ಅದ್ದೂರಿ ಸ್ವಾಗತ ನೋಡಿ ಅತ್ಯಂತ ಸಂತಸವಾಗುತ್ತಿದೆ. ಪ್ರತಿಯೊಬ್ಬರು ಸೇನೆಗೆ ಹೋಗಿ ದೇಶ ಭದ್ರತೆ ಮಾಡಬೇಕು.
ದೇಶ ಇದ್ದರೆ ನಾವು, ಇಲ್ಲವಾದ್ರೆ ಉಕ್ರೇನ್ ಪರಿಸ್ಥಿತಿ ಉಂಟಾಗುತ್ತದೆ.ಐದಾರು ವರ್ಷಗಳಿಂದ ಭಾರತ ಸೇನೆ ಎಂದರೆ ಬೇರೆ ದೇಶಗಳಿಗೂ ಭಯ ಇದೆ.ಆದ್ದರಿಂದ ಪ್ರತಿಯೊಬ್ಬ ಯುವಕರೂ ಕೂಡ ಸೇನೆ ಸೇರಿ ದೇಶ ಸೇವೆ ಮಾಡುವಂತೆ ಮನವಿ ಮಾಡಿದರು.

  • Related Posts

    ದಾವಣಗೆರೆಯ ಜಿಲ್ಲಾ ಪೊಲೀಸ್ ಚಿಣ್ಣರ ಅಂಗಳ ಶಾಲೆಗೆ ಭೇಟಿ ನೀಡಿದ ಡಾ. ಜಿ. ಪರಮೇಶ್ವರ್

    ಸನ್ಮಾನ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ದಾವಣಗೆರೆ ನಗರಕ್ಕೆ ವಿವಿಧ ಕಾರ್ಯಕ್ರಮಗಳ ಬೇಟಿ ನೀಡಿದ ಸಂದರ್ಭದಲ್ಲಿ ಪಿಜೆ ಬಡಾವಣೆಯ ಪೊಲೀಸ್ ವಸತಿ ಗೃಹ ಸಮುಚ್ಛಯದ ಆವರಣದಲ್ಲಿರುವ ದಾವಣಗೆರೆ ಜಿಲ್ಲಾ ಪೊಲೀಸ್ ಚಿಣ್ಣರ ಅಂಗಳ ಶಾಲೆಗೆ ಭೇಟಿ ನೀಡಿದರು. ನಂತರ…

    “ವಿಷ ಕೊಡಿ ಇಲ್ಲವೇ ಯೂರಿಯಾ ಕೊಡಿ” ದಾವಣಗೆರೆಯಲ್ಲಿ ಬಿಜೆಪಿ ಇಂದ ಪ್ರತಿಭಟನೆ

    ದಾವಣಗೆರೆ ಜಿಲ್ಲಾ ಭಾರತೀಯ ಜನತಾ ಪಕ್ಷದ ವತಿಯಿಂದ ದಾವಣಗೆರೆಯಲ್ಲಿ ಪ್ರತಿಭಟನೆ ಮಾಡಲಾಯಿತು. ರೈತರಿಗೆ ಸಮಯಕ್ಕೆ ಸರಿಯಾಗಿ ಯೂರಿಯಾ ಗೊಬ್ಬರ ಕೊಡದೇ, ರೈತರ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆ ಹಾಗೂ ತನ್ನ ತಪ್ಪನ್ನು ಕೇಂದ್ರ ಸರ್ಕಾರದ…

    Leave a Reply

    Your email address will not be published. Required fields are marked *

    error

    Enjoy this blog? Please spread the word :)

    error: Content is protected !!