
ನಡೆದಾಡುವ ದೇವರು ಎಂದರೆ ಅದು ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಯವರು,
ಇಂದು 115ನೇ ಜಯಂತ್ಯುತ್ಸವ ಪ್ರಯುಕ್ತ 115 ಮಕ್ಕಳಿಗೆ ಸ್ವಾಮೀಜಿಯವರ ಹೆಸರು ನಾಮಕರಣ ಮಾಡುವ ಕಾರ್ಯಕ್ರಮವನ್ನು ಮಠದ ಆವರಣದಲ್ಲಿ ಶುಕ್ರವಾರ ನಡೆಯಿತು.
ರಾಜ್ಯದ ವಿವಿಧ ಜಿಲ್ಲೆಗಳಿಂದ ಮಠಕ್ಕೆ ಆಗಮಿಸಿ ಮಕ್ಕಳಿಗೆ ನಾಮಕರಣ ಮಾಡುವುದರ ಜೊತೆಗೆ ಮಕ್ಕಳಿಗೆ ಬೇಕಾದ ತೊಟ್ಟಿಲು, ಹಾಸಿಗೆ ಸೇರಿದಂತೆ ಇತರೆ ಪರಿಕರಗಳನ್ನು ಉಚಿತವಾಗಿ ವಿತರಿಸಲಾಯಿತು. ಬೆಂಗಳೂರಿನ ಶಿವಕುಮಾರ ಸ್ವಾಮೀಜಿ ಅನ್ನದಾನ ಸೇವಾ ಟ್ರಸ್ಟ್ನಿಂದ ಮಕ್ಕಳಿಗೆ ನಾಮಕರಣ ಮಾಡಲಾಯಿತು.









