ಉಚ್ಚoಗಿದುರ್ಗದ ಹಾಲಮ್ಮ ದೇವಸ್ಥಾನದ ಮಹಾದ್ವಾರ ಉದ್ಘಾಟನೆ ಹಾಗೂ ಆಭರಣ ಅರ್ಪಣೆ 

ವಿಜಯನಗರ ಜಿಲ್ಲೆಯ ಪ್ರಸಿದ್ಧ ದೇವಸ್ಥಾನವಾದ ಉಚ್ಚoಗಿದುರ್ಗದ ಹಾಲಮ್ಮ ದೇವಸ್ಥಾನದ ಮಹಾದ್ವಾರಕ್ಕೆ ಕಳಸರೋಹಣ, ಮಹಾದ್ವಾರದ ಉದ್ಘಾಟನೆ ಹಾಗೂ ಭಕ್ತರ ದೇಣಿಗೆ ಯಿಂದ ಸಂಗ್ರಹವಾದ ಆಭರಣಗಳ ಅರ್ಪಣೆ ಕಾರ್ಯಕ್ರಮ ಉಚ್ಚoಗಿದುರ್ಗ ಪುರವರ್ಗ ಮಠದ ಶ್ರೀ ರೇವಣಸಿದ್ದಶಿವಾಚಾರ್ಯ ಮಹಾಸ್ವಾಮಿಗಳು ದಿವ್ಯ ಸಾನಿಧ್ಯದಲ್ಲಿ ಉಚ್ಚoಗಿದುರ್ಗ ಗ್ರಾಮ ಪಂಚಾಯಿತಿ ಅಧ್ಯಕ್ಷರೂ, ಸರ್ವ ಸದಸ್ಯರೂ,ಶ್ರೀ ಹಾಲಮ್ಮ ದೇವಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರೂ,ಸದಸ್ಯರು,ಗ್ರಾಮಸ್ಥರು, ಭಕ್ತರ ಸಮ್ಮುಖದಲ್ಲಿ ನಡೆಯಿತು.

ಈ ಹಾಲಮ್ಮ ದೇವಸ್ಥಾನದ ಮಹಾದ್ವಾರವನ್ನು ಜಗಳೂರು ಶಾಸಕ ಎಸ್ ವಿ ರಾಮಚಂದ್ರಪ್ಪ ಟೇಪ್ ಕಟ್ ಮಾಡುವ ಮೂಲಕ ಉದ್ಘಾಟನೆ ಮಾಡಿದರೆ ಕಳಸರೋಹಣ ಕಾರ್ಯಕ್ರಮವನ್ನು ಶ್ರೀ ರೇವಣಸಿದ್ದ ಶಿವಾಚಾರ್ಯ ಮಹಾಸ್ವಾಮಿಗಳು ದೀಪಾ ಹಚ್ಚುವ ಮೂಲಕ ಉದ್ಘಾಟನೆ ಮಾಡಿದರು.

ನಂತರ ಹಾಲಮ್ಮ ದೇವಿಯ ಮಹಾದ್ವಾರದ ಕಳಸರೋಹಣ ನಡೆಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರೂ,ಸದಸ್ಯರು, ಹಾಲಮ್ಮ ದೇವಸ್ಥಾನದ ಸಮಿತಿಅಧ್ಯಕ್ಷರೂ,ಸದಸ್ಯರು,ಗ್ರಾಮದ ಮುಖಂಡರು,ಭಕ್ತರೂ ಉಪಸ್ಥಿತರಿದ್ದರು..

  • Related Posts

    ಚಿಕ್ಕ ವಯಸ್ಸಿಗೆ ದೊಡ್ಡ ಸಾಧನೆ : ವರ್ಲ್ಡ್ ವೈಡ್ ಬುಕ್ ಆಫ್ ರೆಕಾರ್ಡ್ ಗೆ ಸೇರಿದ ದ್ವಿತಾ ಮೋಹನ್

    ಹೊಸಪೇಟೆ ಕಂಪ್ಲಿ: ಸ್ಥಳೀಯ ನಿವಾಸಿ ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯರಾದ ಮೋಹನ್ ಕುಮಾರ್ ದಾನಪ್ಪ, ಸೌಮ್ಯ ಶ್ರೀ ದಂಪತಿಯ ದ್ವೀತಿಯ ಪುತ್ರಿ ದ್ವಿತಾ ಮೋಹನ್ (6 ತಿಂಗಳು) ರು ಯಾವುದೇ ಸಹಾಯ, ಬಾಹ್ಯ ಬೆಂಬಲವಿಲ್ಲದೆ ಅತಿ ಹೆಚ್ಚು ಸಮಯ…

    ವಿಜಯನಗರ ಜಿಲ್ಲಾಧಿಕಾರಿಗಳು ವಿವಿಧ ಕಂದಾಯ ಅಧಿಕಾರಿಗಳೊಂದಿಗೆ ಜಿಲ್ಲಾಮಟ್ಟದ ಗೈರು ವಿಲೇ ಸಮಿತಿ ಸಭೆ…

    ದಿನಾಂಕ:25.03.2025 ರಂದು ಮಾನ್ಯ ಜಿಲ್ಲಾಧಿಕಾರಿಗಳು ಎಂ ಎಸ್ ದೇವಕರವರು, ಹಡಗಲಿ & ಹರಪನಹಳ್ಳಿ ತಾಲೂಕಿನ ವಿವಿಧ ಕಂದಾಯ ಅಧಿಕಾರಿಗಳೊಂದಿಗೆ ಜಿಲ್ಲಾಮಟ್ಟದ ಗೈರು ವಿಲೇ ಸಮಿತಿ ಸಭೆ ನಡೆಸಿ, ಭೂ ಮಂಜೂರಾತಿ ಪ್ರಕರಣಗಳಲ್ಲಿ ಮಿಸ್ಸಿಂಗ್‌ ಕಡತಗಳ ನಿರ್ವಹಣೆ ಹಾಗೂ ಸ್ಥಾನಿಕ ವರದಿಗಳನ್ನು ಸೇರಿದಂತೆ…

    Leave a Reply

    Your email address will not be published. Required fields are marked *

    error

    Enjoy this blog? Please spread the word :)

    error: Content is protected !!