ಮೇ 28 ರಂದು ಬೃಹತ್‌ ಉದ್ಯೋಗ ಮೇಳ

ಬೆಂಗಳೂರು ಉತ್ತರ ಕಾಂಗ್ರೆಸ್‌ ಮತ್ತು ಕೆಬಿಜೆ ವಾಲಂಟೈಯರ್ಸ್‌ ಅವರಿಂದ ಮೇ 28 ರಂದು ಬೃಹತ್‌ ಉದ್ಯೋಗ ಮೇಳ ಆಯೋಜಿಸಲಾಗಿದ್ದೆ

ಬೆಂಗಳೂರು ಉತ್ತರ ಕಾಂಗ್ರೆಸ್‌ ಮತ್ತು ಕೆಬಿಜೆ ವಾಲಂಟೈಯರ್ಸ್‌ ಬೆಂಗಳೂರು ಮೇ 26: ಬೆಂಗಳೂರು ಉತ್ತರ ಜಿಲ್ಲಾ ಕಾಂಗ್ರೆಸ್‌ ಹಾಗೂ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೃಷ್ಣಭೈರೇಗೌಡ ಅವರ ಸ್ವಯಂ ಸೇವಕರ ತಂಡದ ವತಿಯಿಂದ ಶನಿವಾರ ಮೇ 28, 2022 ರಂದು 5 ನೇ ಬಾರಿ “ಬೃಹತ್‌ ಉದ್ಯೋಗ ಮೇಳ” ವನ್ನು ಆಯೋಜಿಸಲಾಗಿದೆ ಎಂದು ಶ್ರೀಮತಿ ಮೀನಾಕ್ಷಿ ಕೃಷ್ಣ ಭೈರೇಗೌಡ ತಿಳಿಸಿದರು.

  • 5 ನೇ ಬಾರಿ ಉದ್ಯೋಗ ಮೇಳ ಆಯೋಜನೆ
  • ಈ ಬಾರಿ ಮೂರು ಸಾವಿರಕ್ಕೂ ಹೆಚ್ಚು ಉದ್ಯೋಗಾವಕಾಶಗಳ ಲಭ್ಯತೆ


ಇಂದು ಪ್ರೆಸ್‌ಕ್ಲಬ್‌ ನಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಸತತವಾಗಿ ಕಳೆದ 5 ವರ್ಷಗಳಿಂದ ನಮ್ಮ ವಿಧಾನಸಭಾ ಕ್ಷೇತ್ರದಲ್ಲಿ ಬೃಹತ್‌ ಉದ್ಯೋಗ ಮೇಳವನ್ನು ಆಯೋಜಿಸುತ್ತಾ ಬಂದಿದೇವೆ. ಕರೋನಾ ಸಾಂಕ್ರಾಮಿಕದ ಕಾರಣ ಕಳೆದ ಎರಡು ವರ್ಷಗಳಿಂದ ಈ ಮೇಳವನ್ನು ಆಯೋಜಿಸಲು ಆಗಿರಲಿಲ್ಲ. ಈ ಬಾರಿ ಸಾಂಕ್ರಾಮಿಕ ಕಡಿಮೆ ಆಗಿರುವ ನಿಟ್ಟಿನಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗುತ್ತಿದೆ. ಕರೋನಾ ಲಾಕ್‌ಡೌನ್‌ ನಿಂದ ಬಹಳಷ್ಟು ಜನರು ಉದ್ಯೋಗಗಳನ್ನು ಕಳೆದುಕೊಂಡಿದ್ದಾರೆ. ಹಾಗೂ ವಿದ್ಯಭ್ಯಾಸ ಮುಗಿಸಿರುವ ಯುವಕ ಯುವತಿಯರಿಗೆ ಉತ್ತಮ ಅವಕಾಶ ಕಲ್ಪಿಸಿಕೊಡುವುದು ನಮ್ಮ ಉದ್ದೇಶವಾಗಿದೆ. ಕಳೆದ ನಾಲ್ಕು ಮೇಳದಲ್ಲಿ ಭಾಗವಹಿಸಿದ್ದ 17 ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳ ಉದ್ಯೋಗವನ್ನು ಪಡೆದುಕೊಂಡಿದ್ದಾರೆ. ಈ ಬಾರಿ ಇನ್ಪೋಸಿಸ್‌ ಬಿಪಿಓ, ಅಪೊಲೋ, ಹೆಚ್‌ಡಿಎಫ್‌ಸಿ, ಎಸ್‌ಬಿಐ, ಎಲ್‌ಐಸಿ, ಟೆಕ್‌ ಮಹಿಂದ್ರ, ಐಸಿಐಸಿ, ರಿಯಲನ್ಸ್‌ ನಂತಹ 110 ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸುತ್ತಿದ್ದು, 3 ಸಾವಿರಕ್ಕೂ ಹೆಚ್ಚು ಉದ್ಯೋಗಾವಕಾಶಗಳ ಲಭ್ಯತೆಯಿದೆ ಎಂದು ಹೇಳಿದರು.

ಕಾಂಗ್ರೆಸ್‌ ಬೆಂಗಳೂರು ಉತ್ತರದ ಪ್ರಧಾನ ಕಾರ್ಯದರ್ಶಿ ರಾಮಶಂಕರ್‌ ಮಾತನಾಡಿ, ಎಸ್‌ಎಸ್‌ಎಲ್‌ಸಿ, ಐಟಿಐ, ಇಂಜಿನೀಯರಿಂಗ್‌ ಸೇರಿದಂತೆ ಯಾವುದೇ ಪದವಿಧರರು ಕೂಡಾ ಈ ಮೇಳದಲ್ಲಿ ಭಾಗವಹಿಸಿ ಉದ್ಯೋಗಾವಕಾಶಗಳ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಸಹಕಾರ ನಗರದ ದೇವ್‌-ಇನ್‌ ಶಾಲೆಯಲ್ಲಿ ಶನಿವಾರ ಬೆಳಿಗ್ಗೆ 9 ಗಂಟೆಯಿಂದ ಈ ಮೇಳ ಪ್ರಾರಂಭವಾಗಲಿದೆ. ಹೆಚ್ಚಿನ ಮಾಹಿತಿಗಾಗಿ 080-23626678 ಗೆ ಸಂಪರ್ಕಿಸಲು ಕೋರಿದೆ ಎಂದು ಹೇಳಿದರು.


  • Related Posts

    ಸಮಾಜವಾದಿ ಯುವಜನ ಸಭಾ ಅಧ್ಯಕ್ಷ ಆನಂದ್ ಸಿ ತಿರುಮಲ ನೇತೃತ್ವದಲ್ಲಿ ಪಕ್ಷ ಸೇರ್ಪಡೆ

    ಬೆಂಗಳೂರು, 31, ಜೂಲೈ 2025, ಆನೇಕಲ್:- ಮಹಿಳೆಯರು ಸಾಮಾಜಿಕ ಶೋಷಣೆ ಯಿಂದ ಹೊರಗಡೆ ಬಂದು ತಮ್ಮ ಮೂಲಭೂತ ಹಕ್ಕುಗಳಿಗೆ ಹೋರಾಟ ಮಾಡಬೇಕು ಎಂದು ಸಮಾಜವಾದಿ ಪಾರ್ಟಿ ರಾಜ್ಯ ಯುವಜನ ಸಭಾ ಅಧ್ಯಕ್ಷ ಆನಂದ್ ಸಿ ತಿರುಮಲ ಹೇಳಿದರು. ಅವರು ಬೆಂಗಳೂರು ದಕ್ಷಿಣ…

    ವಿಧಾನ ಪರಿಷತ್ ಸದ್ಯಸ ಬಿ ಕೆ ಹರಿಪ್ರಸಾದ್ ಹುಟ್ಟುಹಬ್ಬ – ಶುಭ ಕೋರಿದ ಸಮಾಜವಾದಿ ನಾಯಕರು

    ಬೆಂಗಳೂರು, ಬಿ ಕೆ ಹರಿಪ್ರಸಾದ್ ರವರಿಗೆ ಹುಟ್ಟುಹಬ್ಬದ ಶುಭಾಶಯಗಳು ತಿಳಿಸಿದ ಸಮಾಜವಾದಿ ಪಾರ್ಟಿ ರಾಜ್ಯ ಅಧ್ಯಕ್ಷ ಎನ್ ಮಂಜಪ್ಪ ಮತ್ತು ಯುವಜನ ಸಭಾ ಅಧ್ಯಕ್ಷ ಆನಂದ್ ಸಿ ತಿರುಮಲ ಶುಭಾಶಯಗಳು ಕೋರಿದರು ಕಳೆದ ಸುಮಾರು ವರ್ಷಗಳು ಸಾಮಾಜಿಕ ಹೋರಾಟದಲ್ಲಿ ಜನರ ಮಧ್ಯ…

    Leave a Reply

    Your email address will not be published. Required fields are marked *

    error

    Enjoy this blog? Please spread the word :)

    error: Content is protected !!