ದಾವಣಗೆರೆಯಲ್ಲಿ ಮಾರಿಯಮ್ಮ ದೇವಿಯ ಹೂವಿನ ಕರಗ ಮಹೋತ್ಸವ

ದಾವಣಗೆರೆ ನಗರದ ಪಿಬಿ ರಸ್ತೆಯಲ್ಲಿರುವ ಮುತ್ತು ಮಾರಿಯಮ್ಮ ದೇವಿಯ ಹೂವಿನ ಕರಗ ಮಹೋತ್ಸವ ಜರುಗಿತು. ಸರಿ ಸುಮಾರು 20 ಅಡಿ ಉದ್ದದ ತ್ರಿಶೂಲ ರೂಪಿ ಸರಳನ್ನು ಆ ಯುವಕ ಒಂದು ಕೆನ್ನೆಯಿಂದ ಮತ್ತೊಂದು ಕೆನ್ನೆಯನ್ನು ದಾಟುವಂತೆ ಚುಚ್ಚಿಕೊಂಡು ರಸ್ತೆಯಲ್ಲಿ ಸಾಗುತಿದ್ದರೆ ಅಲ್ಲಿ ನೆರೆದಿದ್ದ ಜನ ಆಶ್ಚರ್ಯದಿಂದ ಈ ದೃಶ್ಯವನ್ನು ಕಣ್ತುಂಬಿಕೊಳ್ಳುತ್ತಿದ್ದರು.

ದೇವಿಗೆ ಹರಕೆ ಹೊತ್ತಿದ್ದ ಮಣಿ ಎಂಬ ಯುವಕ ಬಾಯಿ ಸುಮಾರು 20 ಅಡಿ ಉದ್ದದ ತ್ರಿಶೂಲವನ್ನು ಬಾಯಿಗೆ ಚುಚ್ಚಿಕೊಂಡು ಸುಮಾರು ಅರ್ಧ ಕಿಲೋಮೀಟರ್ ಹೆಚ್ಚು ದೂರ ಕ್ರಮಿಸಿ ಮುತ್ತುಮಾರಿಯಮ್ಮ ಸನ್ನಿದಾನಕ್ಕೆ ಬಂದು ಬಾಯಿ ಬೀಗದ ಹೆಸರಿನಲ್ಲಿ ಭಕ್ತಿ ಸಮರ್ಪಿಸಿದ. ಈ ಯುವಕನ ಭಕ್ತಿ ಪರಾಕಾಷ್ಠೆಗೆ ನೆರೆದಿದ್ದ ಭಕ್ತರು ಮೂಕವಿಸ್ಮಿತರಾಗಿದ್ದರು.

ಈ ಸಂದರ್ಭದಲ್ಲಿ ಮಾಜಿ ಮೇಯರ್ ಅಜಯ್‌ಕುಮಾರ್, ಎಸ್.ಟಿ.ವೀರೇಶ್ ಮತ್ತು ಬೆಳ್ಳೂಡಿ ಪ್ರಕಾಶ್, ಮುತ್ತು ಮಾರಿಯಮ್ಮ ದೇವಸ್ಥಾನ ಸಮಿತಿ ಅಧ್ಯಕ್ಷ ಬಾಲರಾಜು, ಅರ್ಚಕರಾದ ಸುಬ್ಬಣ್ಣ, ನಟರಾಜ್, ಮಂಜುನಾಥ್, ರಾಮಪ್ಪ, ಸಂಪತ್ ಕುಮಾರ್, ಎಂ. ಮಲ್ಲಿಕಾರ್ಜುನ ಭಟ್ರು ಇತರರು ಉಪಸ್ಥಿತರಿದ್ದರು

  • Related Posts

    ದಾವಣಗೆರೆಯ ಜಿಲ್ಲಾ ಪೊಲೀಸ್ ಚಿಣ್ಣರ ಅಂಗಳ ಶಾಲೆಗೆ ಭೇಟಿ ನೀಡಿದ ಡಾ. ಜಿ. ಪರಮೇಶ್ವರ್

    ಸನ್ಮಾನ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ದಾವಣಗೆರೆ ನಗರಕ್ಕೆ ವಿವಿಧ ಕಾರ್ಯಕ್ರಮಗಳ ಬೇಟಿ ನೀಡಿದ ಸಂದರ್ಭದಲ್ಲಿ ಪಿಜೆ ಬಡಾವಣೆಯ ಪೊಲೀಸ್ ವಸತಿ ಗೃಹ ಸಮುಚ್ಛಯದ ಆವರಣದಲ್ಲಿರುವ ದಾವಣಗೆರೆ ಜಿಲ್ಲಾ ಪೊಲೀಸ್ ಚಿಣ್ಣರ ಅಂಗಳ ಶಾಲೆಗೆ ಭೇಟಿ ನೀಡಿದರು. ನಂತರ…

    “ವಿಷ ಕೊಡಿ ಇಲ್ಲವೇ ಯೂರಿಯಾ ಕೊಡಿ” ದಾವಣಗೆರೆಯಲ್ಲಿ ಬಿಜೆಪಿ ಇಂದ ಪ್ರತಿಭಟನೆ

    ದಾವಣಗೆರೆ ಜಿಲ್ಲಾ ಭಾರತೀಯ ಜನತಾ ಪಕ್ಷದ ವತಿಯಿಂದ ದಾವಣಗೆರೆಯಲ್ಲಿ ಪ್ರತಿಭಟನೆ ಮಾಡಲಾಯಿತು. ರೈತರಿಗೆ ಸಮಯಕ್ಕೆ ಸರಿಯಾಗಿ ಯೂರಿಯಾ ಗೊಬ್ಬರ ಕೊಡದೇ, ರೈತರ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆ ಹಾಗೂ ತನ್ನ ತಪ್ಪನ್ನು ಕೇಂದ್ರ ಸರ್ಕಾರದ…

    Leave a Reply

    Your email address will not be published. Required fields are marked *

    error

    Enjoy this blog? Please spread the word :)

    error: Content is protected !!