ದಾವಣಗೆರೆ ಜಿಲ್ಲೆ, ಕೊಂಡಜ್ಜಿ ಗ್ರಾಮದಲ್ಲಿ ನೂತನವಾಗಿ ಆರಂಭವಾಗಿರುವ ಪೊಲೀಸ್ ಪಬ್ಲಿಕ್ ವಸತಿ ಶಾಲೆ

ದಾವಣಗೆರೆ ಜಿಲ್ಲೆ, ಕೊಂಡಜ್ಜಿ ಗ್ರಾಮದಲ್ಲಿ ನೂತನವಾಗಿ ಆರಂಭವಾಗಿರುವ ಪೊಲೀಸ್ ಪಬ್ಲಿಕ್ ವಸತಿ ಶಾಲೆಯ ಪ್ರಸಕ್ತ ಶೈಕ್ಷಣಿಕ ವರ್ಷ 2022-23 ನೇ ಸಾಲಿನ ತರಗತಿಗಳು ಆರಂಭದ ಅಂಗವಾಗಿ ಇಂದು ಶಾಲೆಯಲ್ಲಿ ಮಾನ್ಯ ಐಜಿಪಿ ಪೂರ್ವ ವಲಯ ಶ್ರೀ ಡಾ.ಕೆ.ತ್ಯಾಗರಾಜನ್ ಐಪಿಎಸ್ ರವರ ಅಧ್ಯಕ್ಷತೆಯಲ್ಲಿ ಶಾಲಾ ಆರಂಭದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು, ಮಾನ್ಯ ಪೊಲೀಸ್ ಅಧೀಕ್ಷಕರವರಾದ ಶ್ರೀ ಸಿ.ಬಿ.ರಿಷ್ಯಂತ್ ಐಪಿಎಸ್ ರವರು, ಪ್ರಾಚಾರ್ಯರಾದ ಶ್ರೀ ಯತೀಶ್, ಡಿವೈಎಸ್ಪಿ ರವರಾದ ಶ್ರೀ ಪಿ.ಬಿ.ಪ್ರಕಾಶ್ ಸೇರಿದಂತೆ ಶಿಕ್ಷಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಮಾನ್ಯ ಐಜಿಪಿ ಪೂರ್ವ ವಲಯ ರವರು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಶಾಲಾ ಆವರಣದಲ್ಲಿ ಸಸಿಗಳನ್ನು ನೆಡಲಾಯಿತು.ಕಾರ್ಯಕ್ರಮದಲ್ಲಿ ಮಾನ್ಯ ಐಜಿಪಿ ಪೂರ್ವ ವಲಯ ರವರು ಮತ್ತು ಮಾನ್ಯ ಪೊಲೀಸ್ ಅಧೀಕ್ಷಕರವರು ಮಕ್ಕಳನ್ನು ಉದ್ದೇಶಿಸಿ ಮಾತನಾಡಿ- ಶೈಕ್ಷಣಿಕ ಯಶಸ್ಸು, ಶಿಸ್ತಿನ ಕಲಿಕೆ ಮತ್ತು ಕಠಿಣ ಪರಿಶ್ರಮಗಳ ಸಂಯೋಜನೆಯಾಗಿದೆ. ಉತ್ತಮ ಕಲಿಕೆಗೆ ಬೇಕಾದ ಎಲ್ಲಾ ವ್ಯವಸ್ಥೆಗಳು ಪೊಲೀಸ್ ಪಬ್ಲಿಕ್ ಶಾಲೆಯಲ್ಲಿ ಲಭ್ಯವಿದ್ದು ಅದರ ಪ್ರಯೋಜನ ಪಡೆಯಲು ಮಕ್ಕಳಿಗೆ ಸ್ಫೂರ್ತಿಯ ನುಡಿಗಳನ್ನಾಡಿದರು.

  • Related Posts

    ದಾವಣಗೆರೆಯ ಜಿಲ್ಲಾ ಪೊಲೀಸ್ ಚಿಣ್ಣರ ಅಂಗಳ ಶಾಲೆಗೆ ಭೇಟಿ ನೀಡಿದ ಡಾ. ಜಿ. ಪರಮೇಶ್ವರ್

    ಸನ್ಮಾನ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ದಾವಣಗೆರೆ ನಗರಕ್ಕೆ ವಿವಿಧ ಕಾರ್ಯಕ್ರಮಗಳ ಬೇಟಿ ನೀಡಿದ ಸಂದರ್ಭದಲ್ಲಿ ಪಿಜೆ ಬಡಾವಣೆಯ ಪೊಲೀಸ್ ವಸತಿ ಗೃಹ ಸಮುಚ್ಛಯದ ಆವರಣದಲ್ಲಿರುವ ದಾವಣಗೆರೆ ಜಿಲ್ಲಾ ಪೊಲೀಸ್ ಚಿಣ್ಣರ ಅಂಗಳ ಶಾಲೆಗೆ ಭೇಟಿ ನೀಡಿದರು. ನಂತರ…

    “ವಿಷ ಕೊಡಿ ಇಲ್ಲವೇ ಯೂರಿಯಾ ಕೊಡಿ” ದಾವಣಗೆರೆಯಲ್ಲಿ ಬಿಜೆಪಿ ಇಂದ ಪ್ರತಿಭಟನೆ

    ದಾವಣಗೆರೆ ಜಿಲ್ಲಾ ಭಾರತೀಯ ಜನತಾ ಪಕ್ಷದ ವತಿಯಿಂದ ದಾವಣಗೆರೆಯಲ್ಲಿ ಪ್ರತಿಭಟನೆ ಮಾಡಲಾಯಿತು. ರೈತರಿಗೆ ಸಮಯಕ್ಕೆ ಸರಿಯಾಗಿ ಯೂರಿಯಾ ಗೊಬ್ಬರ ಕೊಡದೇ, ರೈತರ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆ ಹಾಗೂ ತನ್ನ ತಪ್ಪನ್ನು ಕೇಂದ್ರ ಸರ್ಕಾರದ…

    Leave a Reply

    Your email address will not be published. Required fields are marked *

    error

    Enjoy this blog? Please spread the word :)

    error: Content is protected !!