ಸದರನ್ ಸ್ಟಾರ್ ಹೋಟೆಲ್ ಸಿ.ಕೃಷ್ಣಯ್ಯ ಚೆಟ್ಟಿ ಗ್ರೂಪ್ ಆಫ್ ಜ್ಯುವೆಲರ್ಸ್ ವತಿಯಿಂದ ಬಂಗಾರದ (gold) ಆಭರಣ ಪ್ರದರ್ಶನ

ದಾವಣಗೆರೆ, ಆ.೧೮: ನಗರದ ಎಸ್.ಎಸ್.ಮಾಲ್‌ನಲ್ಲಿರುವ ಸದರನ್ ಸ್ಟಾರ್ ಹೋಟೆಲ್ ಶುಕ್ರವಾರ ಸಿ.ಕೃಷ್ಣಯ್ಯ ಚೆಟ್ಟಿ ಗ್ರೂಪ್ ಆಫ್ ಜ್ಯುವೆಲರ್ಸ್ ವತಿಯಿಂದ ಏರ್ಪಡಿಸಿದ್ದ ಬಂಗಾರದ (gold) ಆಭರಣ ಪ್ರದರ್ಶನ, ಮಾರಾಟಕ್ಕೆ ಎಸ್‌ಎಸ್ ಕೇರ್ ಟ್ರಸ್ಟಿನ ಆಜೀವ ಸದಸ್ಯೆ ಡಾ. ಪ್ರಭಾ ಮಲ್ಲಿಕಾರ್ಜುನ್ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, ಕೃಷ್ಣಯ್ಯ ಚೆಟ್ಟಿ ಗ್ರೂಪ್ ಆಫ್ ಜ್ಯುವೆಲ್ಲರ್ಸ್ ಸಂಪೂರ್ಣವಾಗಿ ಕಲ್ಪನೆ, ಸೃಜನಶೀಲತೆ ಮತ್ತು ವಿನ್ಯಾಸ ಮತ್ತು ಗುಣಮಟ್ಟದಲ್ಲಿ ಉತ್ಕೃಷ್ಟತೆಯನ್ನು ಹೊಂದಿದ್ದು, ಈ ಹೊಸ ಶ್ರೇಣಿಯು ವ್ಯಕ್ತಿತ್ವಕ್ಕೆ ಸರಿಹೊಂದುವ ಅಪರೂಪದ ಆಭರಣ ಸಂಗ್ರಹವಾಗಿವೆ. ಹಬ್ಬಗಳ ಸಂಭ್ರಮ ಆರಂಭವಾಗಿದೆ ಅದರಲ್ಲೂ ಮಹಿಳೆಯರು (women) ಆಭರಣ ಪ್ರಿಯರು. ಇಲ್ಲಿ ಮಹಿಳೆಯರಿಗೆ ಇಷ್ಟವಾಗುವಂತಹ ಆಭರಣಗಳಿವೆ ಎಂದರು.

ವಿಶೇಷ ಕೊಡುಗೆಯಾಗಿ 1 ಕ್ಯಾರೆಟ್ ವಜ್ರ ಖರೀದಿಗೆ 2 ಗ್ರಾಂ ಚಿನ್ನದ ನಾಣ್ಯ ಮತ್ತು 1 ಗ್ರಾಂ ಚಿನ್ನ ಖರೀದಿಗೆ 3 ಗ್ರಾಂ ಬೆಳ್ಳಿ ನಾಣ್ಯ ಉಚಿತವಾಗಿ ನೀಡಲಾಗುವುದು. ಬೆಂಗಳೂರಿನ ಸಿ.ಕೃಷ್ಣಯ್ಯ ಚೆಟ್ಟಿ ಗ್ರೂಪ್ ಆಫ್ ಜ್ಯುವೆಲರ್ಸ್ ದಾವಣಗೆರೆ ಜನತೆಗಾಗಿ ನಾಲ್ಕು ದಿನಗಳ ವಿಶೇಷ ಆಭರಣ ಮಾರಾಟವನ್ನು ಪ್ರಸ್ತುಪಡಿಸುತ್ತಿದೆ. ದಾವಣಗೆರೆ ಗ್ರಾಹಕರಿಗಾಗಿಯೇ ವಿಶೇಷವಾಗಿ ಸಂಗ್ರಹಿಸಲಾದ ಅತ್ಯಂತ ಆಕರ್ಷಕ ಆಭರಣಗಳನ್ನು ಆಗಸ್ಟ್ 18 ರಿಂದ ಆಗಸ್ಟ್ 21, 2023ರವರೆಗೆ ನಡೆಯಲಿದೆ.

150 ವರ್ಷ ಇತಿಹಾಸವುಳ್ಳ ಸಿ.ಕೃಷ್ಣಯ್ಯ ಚೆಟ್ಟಿ ಗ್ರೂಪ್ ಆಫ್ ಜ್ಯುವೆಲರ್ಸ್ ವತಿಯಿಂದ ಇದೀಗ ದಾವಣಗೆರೆ ಜನತೆಗಾಗಿ ಅಸಾಧಾರಣ ಕರಕುಶಲತೆ ಮತ್ತು ವಿನ್ಯಾಸ ಹೊಂದಿರುವ ಸಾಂಪ್ರದಾಯಿಕ ಮತ್ತು ಸಮಕಾಲೀನ ಕಸೂತಿ ಸಂಗ್ರಹದ ವಿಶಿಷ್ಟ ಶ್ರೇಣಿಯೊಂದಿಗೆ ಅಸಾಧಾರಣ ಆಭರಣ ಪ್ರದರ್ಶನ ಮತ್ತು ಮಾರಾಟ ಮಾಡುತ್ತಿದೆ. ಆಭರಣ ಸಂಗ್ರಹಗಳು ವೈಡೂರ್ಯ, ಸಿಟ್ರಿನ್, ಮುತ್ತುಗಳು, ಹರಳು, ಮಾಣಿಕ್ಯಗಳಂತಹ ಅಪರೂಪದ ವಜ್ರಗಳೊಂದಿಗೆ ಸೂಕ್ಷ್ಮ ವಿನ್ಯಾಸಗಳೊಂದಿಗೆ ಸೊಬಗು ಮತ್ತು ಕ್ಲಾಸಿಕ್ ಶೈಲಿಯನ್ನು ಪ್ರದರ್ಶಿಸುತ್ತವೆ. ಸಂಗ್ರಹಣೆಯು ನಿಮ್ಮ ವ್ಯಕ್ತಿತ್ವದತ್ತ ಗಮನ ಸೆಳೆಯುತ್ತವೆ ಎಂದರು.
ಅತ್ಯುತ್ತಮವಾದ ಕರಕುಶಲತೆಯೊಂದಿಗೆ ಸಾಂಪ್ರದಾಯಿಕ ಮತ್ತು ಸಮಕಾಲೀನ ಸೃಷ್ಟಿಗಳ ಸಂಗ್ರಹದ ಶುದ್ಧ ಚಿನ್ನ ಮತ್ತು ರತ್ನಗಳು ವಿಶಿಷ್ಠ ಶ್ರೇಣಿಯಲ್ಲಿ ಲಭ್ಯವಿದೆ.

  • Related Posts

    ದಾವಣಗೆರೆಯ ಜಿಲ್ಲಾ ಪೊಲೀಸ್ ಚಿಣ್ಣರ ಅಂಗಳ ಶಾಲೆಗೆ ಭೇಟಿ ನೀಡಿದ ಡಾ. ಜಿ. ಪರಮೇಶ್ವರ್

    ಸನ್ಮಾನ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ದಾವಣಗೆರೆ ನಗರಕ್ಕೆ ವಿವಿಧ ಕಾರ್ಯಕ್ರಮಗಳ ಬೇಟಿ ನೀಡಿದ ಸಂದರ್ಭದಲ್ಲಿ ಪಿಜೆ ಬಡಾವಣೆಯ ಪೊಲೀಸ್ ವಸತಿ ಗೃಹ ಸಮುಚ್ಛಯದ ಆವರಣದಲ್ಲಿರುವ ದಾವಣಗೆರೆ ಜಿಲ್ಲಾ ಪೊಲೀಸ್ ಚಿಣ್ಣರ ಅಂಗಳ ಶಾಲೆಗೆ ಭೇಟಿ ನೀಡಿದರು. ನಂತರ…

    “ವಿಷ ಕೊಡಿ ಇಲ್ಲವೇ ಯೂರಿಯಾ ಕೊಡಿ” ದಾವಣಗೆರೆಯಲ್ಲಿ ಬಿಜೆಪಿ ಇಂದ ಪ್ರತಿಭಟನೆ

    ದಾವಣಗೆರೆ ಜಿಲ್ಲಾ ಭಾರತೀಯ ಜನತಾ ಪಕ್ಷದ ವತಿಯಿಂದ ದಾವಣಗೆರೆಯಲ್ಲಿ ಪ್ರತಿಭಟನೆ ಮಾಡಲಾಯಿತು. ರೈತರಿಗೆ ಸಮಯಕ್ಕೆ ಸರಿಯಾಗಿ ಯೂರಿಯಾ ಗೊಬ್ಬರ ಕೊಡದೇ, ರೈತರ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆ ಹಾಗೂ ತನ್ನ ತಪ್ಪನ್ನು ಕೇಂದ್ರ ಸರ್ಕಾರದ…

    Leave a Reply

    Your email address will not be published. Required fields are marked *

    error

    Enjoy this blog? Please spread the word :)

    error: Content is protected !!