ಶ್ರೀಸೋಮೇಶ್ವರ ವಾಸತಿಯುತ ವಿದ್ಯಾಲಯದಲ್ಲಿ ಸಂಭ್ರಮದ ಓಣಂ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ…

ದಾವಣಗೆರೆ : ಸೆ 09- ಗೋಣಿವಾಡ ಬಳಿಯ ಶ್ರೀ ಸೋಮೇಶ್ವರ ವಸತಿಯುತ ವಿದ್ಯಾಲಯದಲ್ಲಿ ಸಂಭ್ರಮ ಸಡಗರದಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಓಣಂ ಆಚರಣೆ ಮಾಡಲಾಯಿತು.

ಪೋಷಕರ ಸಹಕಾರದೊಂದಿಗೆ ನಡೆದ ಈ ಕಾರ್ಯಕ್ರಮದಲ್ಲಿ ಮುದ್ದಾದ ಮಕ್ಕಳು ರಾಧೆ ಕೃಷ್ಣನ ವೇಷ ಹಾಕಿಕೊಂಡು ಎಲ್ಲರ ಗಮನ ಸೆಳೆದರು.


ರಾಧೆಯಾದ ವಿದ್ಯಾರ್ಥಿನಿಯರಿಗೆ ಕೃಷ್ಣನ ಪಾತ್ರದಲ್ಲಿ ಬಂದ ವಿದ್ಯಾರ್ಥಿಗಳು ಸಾಥ್ ನೀಡಿದರು. ಶ್ರೀಕೃಷ್ಣ ಹಾಗೂ ಓಣಂ ಹಾಡುಗಳಿಗೆ  ಹೆಜ್ಜೆ ಹಾಕುವ ಮೂಲಕ ಶ್ರೀಕೃಷ್ಣನನ್ನ ಸ್ಮರಿಸಿದರು. ಪುಟ್ಟ ಪಟಾಣಿಗಳು ಶ್ರೀಕೃಷ್ಣನಂತೆ ಕಂಗೊಳಿಸುವ ಮೂಲಕ ಶಾಲಾ ವಾತಾವರಣವೇ ಹಬ್ಬದಂತೆ ಮಾರ್ಪಟ್ಟಿತ್ತು. ಈ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ರುದ್ರಯ್ಯಜಿ  ಆಗಮಿಸಿದ್ದರು. ಈ ವೇಳೆ ಸಂಸ್ಥೆಯ ಸಂಸ್ಥಾಪಕರು ಹಾಗೂ ಗೌರವ ಕಾರ್ಯದಶಿಗಳಾದ ಕೆ.ಎಂ ಸುರೇಶ್, ಪ್ರಾಂಶುಪಾಲರಾದ ಶ್ರೀಮತಿ ವೀಣಾ ಪಿ ಹೆಚ್ ಸೇರಿದಂತೆ ವಿದ್ಯಾರ್ಥಿಗಳು ಪೋಷಕರು ಉಪಸ್ಥಿತರಿದ್ದರು.

  • Related Posts

    ಜಿಲ್ಲಾ ಪೊಲೀಸ್ ವತಿಯಿಂದ ರಸ್ತೆ ಸುರಕ್ಷತಾ ಮಾಸಾಚರಣೆಯ ಸಮಾರೋಪ ಸಮಾರಂಭ…

    ದಿನಾಂಕ: 01-01-2025 ರಿಂದ 31-01-2025 ಒಂದು ತಿಂಗಳ ಕಾಲ ಪ್ರತಿ ವರ್ಷದಂತೆ ರಸ್ತೆ ಸುರಕ್ಷತಾ ಮಾಸಾಚರಣೆಯನ್ನು ಜಿಲ್ಲಾ ಪೊಲೀಸ್ ವತಿಯಿಂದ ಹಮ್ಮಿಕೊಂಡಿದ್ದು, ಇಂದು ದಾವಣಗೆರೆ ನಗರದ ರೇಣುಕಾ ಮಂದಿರದ ಕಲ್ಯಾಣ ಮಂಟಪದಲ್ಲಿ ರಸ್ತೆ ಸುರಕ್ಷತಾ ಮಾಸಾಚರಣೆಯ ಸಮಾರೋಪ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ…

    ಶಾಲಾ ಆವರಣ ಅನೈತಿಕ ತಾಣಗಳಾಗಬಾರದು, ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ಸಿಗಬೇಕು, ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್….

    ದಾವಣಗೆರೆ, ಜನವರಿ.28 : ಜಿಲ್ಲೆಯಲ್ಲಿನ ಎಲ್ಲಾ ಸರ್ಕಾರಿ ಶಾಲೆಗಳಿಗೆ ಕಾಂಪೌಂಡ್ ಸೇರಿದಂತೆ ಕೊಠಡಿ, ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಆಸನ ವ್ಯವಸ್ಥೆಯನ್ನು ಕಲ್ಪಿಸುವ ಮೂಲಕ ಗುಣಮಟ್ಟದ ಶಿಕ್ಷಣ ಭವಿಷ್ಯದ ನಾಗರಿಕರಾಗುವ ಪ್ರತಿ ಮಕ್ಕಳಿಗೆ ಸಿಗುವಂತೆ ಮಾಡಬೇಕು, ಆದರೆ ಸಂಜೆಯ ವೇಳೆ…

    Leave a Reply

    Your email address will not be published. Required fields are marked *

    error: Content is protected !!