ಅಡಿಕೆ ಕಳ್ಳತನ ಪ್ರಕರಣದಲ್ಲಿ ಓರ್ವ ಆರೋಪಿತನ ಬಂಧನ, ಸ್ವತ್ತು ವಶ,,

ಚನ್ನಗಿರಿ ಉಪವಿಭಾಗ ಸಂತೇಬೆನ್ನೂರು ಠಾಣಾ ಸರಹದ್ದಿನ ಹೊಸುರು ಗ್ರಾಮದಲ್ಲಿ ಗೋಡಾಮಿನಲ್ಲಿ ಇಟ್ಟಿದ್ದ ಸುಮಾರು 15 ಕ್ಷಿಂಟಾಲ್ ಅಡಿಕೆ ಕಳ್ಳತನ ವಾದ ಬಗ್ಗೆ ಸಂತೇಬೆನ್ನೂರು ಠಾಣಾ ಗುನ್ನೆ ನಂ-33/2023 ಕಲಂ-457,380 ಐಪಿಸಿ ರಿತ್ಯಾ ಪ್ರಕರಣ ದಾಖಲಾಗಿದ್ದು, ಈ ಪ್ರಕರಣ ಪತ್ತೆಗಾಗಿ ಮಾನ್ಯ ಪೊಲೀಸ್ ಅಧೀಕ್ಷಕರು, ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಹಾಗೂ ಪೊಲೀಸ್ ಉಪಾಧೀಕ್ಷರು ಚನ್ನಗಿರಿರವರಾದ ಡಾ. ಸಂತೋಷ ಕೆ.ಎಂ ರವರ ಮಾರ್ಗದರ್ಶನದಲ್ಲಿ ಸಿಪಿಐ ಸಂತೇಬೆನ್ನೂರು ವೃತ್ತ ಶ್ರೀ ಲಿಂಗನಗೌಡ ನೆಗಳೂರು ರವರ ನೇತೃತ್ವದಲ್ಲಿ ಸಂತೇಬೆನ್ನೂರು ಪಿಎಸ್.ಐ ಶ್ರೀಮತಿ ರೂಪಾ ತೆಂಬದ್ ಸಿಬ್ಬಂದಿಯವರಾದ- ಶ್ರೀ ಸತೀಶ, ಶ್ರೀ ರುದ್ರೇಶ ಎಂ., ಶ್ರೀ ಶಂಕರಗೌಡ, ಶ್ರೀ ಆಂಜನೇಯ, ಶ್ರೀ ರಾಘವೇಂದ್ರ, ಶ್ರೀ ಪರಶುರಾಮ, ಶ್ರೀ ಪ್ರವೀಣಗೌಡ, ಶ್ರೀ ರವಿಕುಮಾರ ರವರನ್ನು ಒಳಗೊಂಡ ಒಂದು ತಂಡವನ್ನು ರಚನೆ ಮಾಡಿದ್ದು ಈ ತಂಡವು ದಿನಾಂಕ:15-09-2023 ರಂದು ಮೇಲ್ಕಂಡ ಪ್ರಕರಣದ ಆರೋಪಿತನಾದ – 01)ಕಾರ್ತಿಕ್ ಎಸ್.ಹೆಚ್, 26 ವರ್ಷ, ಡ್ರೈವರ್ ವೃತ್ತಿ, ವಾಸ ಶೆಟ್ಟಿಹಳ್ಳಿ ಗ್ರಾಮ, ಶೀವಮೊಗ್ಗ ತಾ|| ಜಿಲ್ಲೆ|| ಈತನನ್ನು ದಸ್ತಗಿರಿ ಮಾಡಿ, ಆರೋಪಿತನಿಂದ ಸುಮಾರು 2 ಲಕ್ಷ ರೂ /- ರೂ ಬೆಳೆಬಾಳುವ 05 ಕ್ವಿಂಟಾಲ್ ಅಡಿಕೆ ಮತ್ತು ಅಡಿಕೆ ಸಾಗಾಣಿಕೆ ಮಾಡಲು ಬಳಸಿದ ಸುಮಾರು 02 ಲಕ್ಷ ರೂ ಬೆಲೆಬಾಳುವು ಕೆಎ-51 ಎ-8066 ಮಹೀಂದ್ರಾ ಮ್ಯಾಕ್ಷಿಮೋ ಸೇರಿ ಒಟ್ಟು 4 ಲಕ್ಷ ರೂ ಬೆಲೆವಾಳುವ ವಸ್ತುಗಳನ್ನು ಅಮಾನತ್ತು ಪಡಿಸಿಕೊಂಡಿರುತ್ತದೆ, ಇನ್ನೊಬ್ಬ ಆರೋಪಿತ ತಲೆಮರೆಸಿಕಂಡಿದ್ದು ಆತನ ಪತ್ತೆಕಾರ್ಯ ಮುಂದುವರೆದಿರುತ್ತದೆ.

ಅಡಕೆ ಕಳ್ಳತನ ಪ್ರಕರಣದಲ್ಲಿನ ಆರೋಪಿತನನ್ನು ದಸ್ತಗಿರಿ ಮಾಡಿ ಸ್ವತ್ತನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾದ ಸಂತೇಬೆನ್ನೂರು ಪೊಲೀಸ್ ಅಧಿಕಾರಿ ಸಿಬ್ಬಂದಿಗಳ ತಂಡವನ್ನು ಪೊಲೀಸ್ ಅಧೀಕ್ಷಕರಾದ ಶ್ರೀಮತಿ ಉಮಾ ಪ್ರಶಾಂತ್ ಐಪಿಎಸ್ ರವರು ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ಆರ್ ಬಿ ಬಸರಗಿ ರವರು ಪ್ರಶಂಸಿಸಿರುತ್ತಾರೆ.

  • Related Posts

    ಜಿಲ್ಲಾ ಪೊಲೀಸ್ ವತಿಯಿಂದ ರಸ್ತೆ ಸುರಕ್ಷತಾ ಮಾಸಾಚರಣೆಯ ಸಮಾರೋಪ ಸಮಾರಂಭ…

    ದಿನಾಂಕ: 01-01-2025 ರಿಂದ 31-01-2025 ಒಂದು ತಿಂಗಳ ಕಾಲ ಪ್ರತಿ ವರ್ಷದಂತೆ ರಸ್ತೆ ಸುರಕ್ಷತಾ ಮಾಸಾಚರಣೆಯನ್ನು ಜಿಲ್ಲಾ ಪೊಲೀಸ್ ವತಿಯಿಂದ ಹಮ್ಮಿಕೊಂಡಿದ್ದು, ಇಂದು ದಾವಣಗೆರೆ ನಗರದ ರೇಣುಕಾ ಮಂದಿರದ ಕಲ್ಯಾಣ ಮಂಟಪದಲ್ಲಿ ರಸ್ತೆ ಸುರಕ್ಷತಾ ಮಾಸಾಚರಣೆಯ ಸಮಾರೋಪ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ…

    ಶಾಲಾ ಆವರಣ ಅನೈತಿಕ ತಾಣಗಳಾಗಬಾರದು, ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ಸಿಗಬೇಕು, ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್….

    ದಾವಣಗೆರೆ, ಜನವರಿ.28 : ಜಿಲ್ಲೆಯಲ್ಲಿನ ಎಲ್ಲಾ ಸರ್ಕಾರಿ ಶಾಲೆಗಳಿಗೆ ಕಾಂಪೌಂಡ್ ಸೇರಿದಂತೆ ಕೊಠಡಿ, ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಆಸನ ವ್ಯವಸ್ಥೆಯನ್ನು ಕಲ್ಪಿಸುವ ಮೂಲಕ ಗುಣಮಟ್ಟದ ಶಿಕ್ಷಣ ಭವಿಷ್ಯದ ನಾಗರಿಕರಾಗುವ ಪ್ರತಿ ಮಕ್ಕಳಿಗೆ ಸಿಗುವಂತೆ ಮಾಡಬೇಕು, ಆದರೆ ಸಂಜೆಯ ವೇಳೆ…

    Leave a Reply

    Your email address will not be published. Required fields are marked *

    error: Content is protected !!