ಶ್ರೀ ತರಳಬಾಳು ರೆಸಿಡೆನ್ಸಿಯಲ್ ಶಾಲೆಯ ಆವರಣದಲ್ಲಿ ಪರಿಸರ ದಿನಾಚರಣೆ…

ದಿ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ , ಕರ್ನಾಟಕ… ಕೊಂಡಜ್ಜಿ ಬಸಪ್ಪ ಸ್ಥಳೀಯ ಸಂಸ್ಥೆ ದಾವಣಗೆರೆ.

ದಿನಾಂಕ 5/6 /2022 ರ ಭಾನುವಾರದಂದು ಪರಿಸರ ದಿನಾಚರಣೆಯ ಅಂಗವಾಗಿ ಶ್ರೀ ತರಳಬಾಳು ರೆಸಿಡೆನ್ಸಿಯಲ್ ಶಾಲೆಯ ಆವರಣದಲ್ಲಿ ಪರಿಸರ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು.

ಶ್ರೀ ತರಳಬಾಳು ರೆಸಿಡೆನ್ಸಿಯಲ್ ಶಾಲೆ ಸಿಬಿಎಸ್ಸಿ ಪ್ರಾಂಶುಪಾಲರಾದ ಶ್ರೀ ಕೆ ಸೋಮಶೇಖರಪ್ಪ ರವರು ಹಾಗೂ ಸ್ಟೇಟ್ ಎಕ್ಸಿಕ್ಯೂಟಿವ್ ಮೆಂಬರ್ ಆದ ಡಾII ಶಶಿಧರ್ ರವರಿಗೆ ಸ್ಕೌಟ್ ಮತ್ತು ಗೈಡ್ ಮಕ್ಕಳು ತಾವು ತಂದಂತಹ ಗಿಡಗಳನ್ನು ನೀಡಿ ಸ್ವಾಗತಿಸಿದರು ಹಾಗೂ ಶಾಲಾ ಪ್ರಾಂಶುಪಾಲರಾದ ಸೋಮಶೇಖರಪ್ಪ ರವರು ಶಾಲಾ ಆವರಣದಲ್ಲಿ ಗಿಡ ನೆಡುವುದರ ಮೂಲಕ ಮಕ್ಕಳನ್ನು ಪ್ರೇರೇಪಿಸಿದರು.ತರಳಬಾಳು ರೆಸಿಡೆನ್ಷಿಯಲ್ ಸ್ಕೂಲ್, ಮಾಗನೂರು ಬಸಪ್ಪ ಶಾಲೆ ಮತ್ತು ಬಾಪುಜಿ ಓಪನ್ ಸ್ಕೌಟ್ ಟ್ರೊಪ್ ಹಾಗೂ ಮದರ್ ತೆರೆಸ ಕಂಪನಿಯ ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳುತಾವು ತಂದಂತಹ ಸುಣ್ಣವನ್ನು ಗಿಡ-ಮರಗಳಿಗೆ ಹಚ್ಚುವುದರ ಮೂಲಕ ಸಂತೋಷವನ್ನು ವ್ಯಕ್ತಪಡಿಸಿದರು ಹಾಗೂ ಪರಿಸರ ದಿನಾಚರಣೆಯನ್ನು ಸಂಭ್ರಮದಲ್ಲಿ ಆಚರಿಸಿದರು.

ಈ ಸಂದರ್ಭದಲ್ಲಿ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿಯಾದ ರವೀಂದ್ರ ಸ್ವಾಮಿ ಟಿಎಂ ರವರು ಹಾಗೂ ಸ್ಕೌಟ್ ಮಾಸ್ಟರ್ ಆದ ಬಸವರಾಜ್, (ಮಾಗನೂರು ಬಸಪ್ಪ ಶಾಲೆಯ ) ಶಶಿ ಹಾಗೂ ಮಹೇಶ್ ಕುಮಾರ್ ಗೈಡ್ ಕ್ಯಾಪ್ಟನ್ ಅನಿತಾ ಹಾಗೂ ಸುಜಾತ ರವರು ಮಕ್ಕಳನ್ನು ಪ್ರೊತ್ಸಾಹಿಸಿದರು.

  • Related Posts

    ಜಿಲ್ಲಾ ಪೊಲೀಸ್ ವತಿಯಿಂದ ರಸ್ತೆ ಸುರಕ್ಷತಾ ಮಾಸಾಚರಣೆಯ ಸಮಾರೋಪ ಸಮಾರಂಭ…

    ದಿನಾಂಕ: 01-01-2025 ರಿಂದ 31-01-2025 ಒಂದು ತಿಂಗಳ ಕಾಲ ಪ್ರತಿ ವರ್ಷದಂತೆ ರಸ್ತೆ ಸುರಕ್ಷತಾ ಮಾಸಾಚರಣೆಯನ್ನು ಜಿಲ್ಲಾ ಪೊಲೀಸ್ ವತಿಯಿಂದ ಹಮ್ಮಿಕೊಂಡಿದ್ದು, ಇಂದು ದಾವಣಗೆರೆ ನಗರದ ರೇಣುಕಾ ಮಂದಿರದ ಕಲ್ಯಾಣ ಮಂಟಪದಲ್ಲಿ ರಸ್ತೆ ಸುರಕ್ಷತಾ ಮಾಸಾಚರಣೆಯ ಸಮಾರೋಪ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ…

    ಶಾಲಾ ಆವರಣ ಅನೈತಿಕ ತಾಣಗಳಾಗಬಾರದು, ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ಸಿಗಬೇಕು, ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್….

    ದಾವಣಗೆರೆ, ಜನವರಿ.28 : ಜಿಲ್ಲೆಯಲ್ಲಿನ ಎಲ್ಲಾ ಸರ್ಕಾರಿ ಶಾಲೆಗಳಿಗೆ ಕಾಂಪೌಂಡ್ ಸೇರಿದಂತೆ ಕೊಠಡಿ, ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಆಸನ ವ್ಯವಸ್ಥೆಯನ್ನು ಕಲ್ಪಿಸುವ ಮೂಲಕ ಗುಣಮಟ್ಟದ ಶಿಕ್ಷಣ ಭವಿಷ್ಯದ ನಾಗರಿಕರಾಗುವ ಪ್ರತಿ ಮಕ್ಕಳಿಗೆ ಸಿಗುವಂತೆ ಮಾಡಬೇಕು, ಆದರೆ ಸಂಜೆಯ ವೇಳೆ…

    Leave a Reply

    Your email address will not be published. Required fields are marked *

    error: Content is protected !!