

ದೆಹಲಿ: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ತಡವಾಗಿ ಟಿಕೆಟ್ ಘೋಷಣೆ ಮಾಡಿ ಪೆಟ್ಟು ತಿಂದಿದ್ದ ಬಿಜೆಪಿ ಇದೀಗ ಎಚ್ಚೆತ್ತುಕೊಂಡಿದು ಈ ವರ್ಷಾಂತ್ಯದಲ್ಲಿ ನಡೆಯಲಿರುವ ಪಂಚ ರಾಜ್ಯಗಳ ಚುನಾವಣೆ ಹಿನ್ನಲೆ ಚುನಾವಣೆ ಆಯೋಗ ಚುನಾವಣಾ ದಿನಾಂಕ ಘೋಷಣೆ ಮಾಡುವ ಮುನ್ನವೇ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದೆ..
ಛತ್ತಿಸ್ ಗಢ, ಮಧ್ಯ ಪ್ರದೇಶದಲ್ಲಿ ಅಭ್ಯರ್ಥಿಗಳ ಘೋಷಣೆ..!
ಈ ವರ್ಷದ ಅತ್ಯದಲ್ಲಿ ಛತ್ತೀಸ್ಗಢ, ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ ಹಾಗೂ ಮಿಜೋರಾಂ ರಾಜ್ಯಗಳಲ್ಲಿ ವಿಧಾನಸಭೆಗೆ ಚುನಾವಣೆ ನಡೆಯಲಿದೆ, ಬಳಿಕ ಲೋಕಸಭೆ ಚುನಾವಣೆ ಇರುವುದರಿಂದ ಪಂಚರಾಜ್ಯಗಳ ಚುನಾವಣೆ ಸೆಮಿ ಫೈನಲ್ ಎಂದೇ ರಾಜಕೀಯ ಪಂಡಿತರು ಲೆಕ್ಕಾಚಾರ ಹಾಕಿದ್ದಾರೆ,

ಕರ್ನಾಟಕದಲ್ಲಿ ಪೆಟ್ಟು ತಿಂದಿರುವ ಬಿಜೆಪಿ ತಂತ್ರಗಾರಿಕೆ ರೂಪಿಸಿದೆ ಎನ್ನಲಾಗಿದೆ, ಹೀಗಾಗಿ ಭಾರತೀಯ ಚುನಾವಣಾ ಆಯೋಗವು ಚುನಾವಣಾ ದಿನಾಂಕಗಳನ್ನು ಪ್ರಕಟಿಸುವ ಮೊದಲೇ ಬಿಜೆಪಿ ಅಭ್ಯರ್ಥಿಗಳ ಹೆಸರನ್ನು ಘೋಷಿಸಿರುವುದು ಇದೇ ಮೊದಲಾಗಿದೆ, 90 ಸದಸ್ಯ ಬಲದ ಛತ್ತೀಸ್ಗಢ ವಿಧಾನಸಭೆಗೆ 21 ಮತ್ತು 230 ಸದಸ್ಯ ಬಲದ ಮಧ್ಯಪ್ರದೇಶ ವಿಧಾನಸಭೆಗೆ 39 ಅಭ್ಯರ್ಥಿಗಳನ್ನು ಪಕ್ಷ ಘೋಷಣೆ ಮಾಡಿ ಎದುರಾಳಿ ಪಕ್ಷಗಳಿಗೆ ನಡುಕ ಉಂಟು ಮಾಡಿದೆ
ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಚುನಾವಣಾ ಸಮಿತಿ, ಅಭ್ಯರ್ಥಿಗಳ ಆಯ್ಕೆ ಮತ್ತು ಚುನಾವಣಾ ಕಾರ್ಯತಂತ್ರಗಳ ತಯಾರಿಗಾಗಿ ಪಕ್ಷದ ನಿರ್ಧಾರ ತೆಗೆದುಕೊಳ್ಳುವ ಮಂಡಳಿಯ ಸಭೆಯ ನಂತರ ಈ ಘೋಷಣೆ ಮಾಡಲಾಗಿದೆ ಎನ್ನಲಾಗಿದೆ ಇನ್ನೂ
ಬಂಡಾಯ ಅಭ್ಯರ್ಥಿಗಳ ಸಮಸ್ಯೆಗಳನ್ನು ಮುಂಚಿತವಾಗಿ ಪರಿಹರಿಸಬಹುದಾದ ಕಾರಣಕ್ಕೆ ಅಭ್ಯರ್ಥಿಗಳ ಹೆಸರನ್ನು ಮೊದಲೇ ಘೋಷಿಸುವ ನಿರ್ಧಾರಕ್ಕೆ ಬಿಜೆಪಿ ನಾಯಕತ್ವ ಮುಂದಾಗಿದೆ ಎಂದು ಹೇಳಲಾಗುತ್ತಿದೆ