ಸ್ಥಳೀಯ ದೇಶಿ ಮೂಲದ ಸಸಿಗಳ ಬೆಳೆಸಲು ಕ್ರಮ; ಮೇಯರ್

ದಾವಣಗೆರೆ: ಸ್ವಾತಂತ್ರ‍್ಯ ಭಾರತದ ಅಮೃತ ಮಹೋತ್ಸವದ ಅಂಗವಾಗಿ ‘ನನ್ನ ಮಣ್ಣು, ನನ್ನ ದೇಶ’ ಅಭಿಯಾನದ ಮೂಲಕ ಸ್ಥಳೀಯ ದೇಶಿಯ ಮೂಲದ ಸಸಿಗಳನ್ನು ನೆಡಲಾಯಿತು.

ನಗರದ ಎಂಸಿಸಿ ಬಿ ಬ್ಲಾಕ್ ನಲ್ಲಿನ ಗುಂಡಿ ಮಹದೇವಪ್ಪ ಪಾರ್ಕ್ನಲ್ಲಿ ‘ಅಮೃತ ವಾಟಿಕಾ’ ಸಸಿ ನೆಡುವ ಮೂಲಕ ದಾವಣಗೆರೆ ಮಹಾನಗರ ಪಾಲಿಕೆ ವತಿಯಿಂದ ಅಭಿವೃದ್ಧಿಪಡಿಸಲು ಕ್ರಮವಹಿಸಲಾಯಿತು.

ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ವಾರ್ಡ್ ನಂ.೩೮ ಎಂ.ಸಿ.ಸಿ ಬಿ ಬ್ಲಾಕ್ ನ ಗುಂಡಿ ಸರ್ಕಲ್ ಪಾರ್ಕ್ ನಲ್ಲಿ ನನ್ನ ಮಣ್ಣು ನನ್ನ ದೇಶ ಕಾರ್ಯಕ್ರಮದಡಿಯಲ್ಲಿ ಐದು ವಿಶೇಷ ಗಿಡಗಳನ್ನು ನೆಡಲಾಯಿತು. ಫಿಲಿಶಿಯಂ ಡೆಸಿಪೆನ್ಸಿ, ಬೆಂಜಮಿನ್ ಫೈಕಸ್, ಬಾಟಲ್ ಬ್ರಶ್, ಲೆಜೆಸ್ಟ್ರೋಮಿಯ ತಬುಬಿಯ ರೋಸಿಯ ಜಾತಿಯ ೧೦೦ ಸಸಿಗಳನ್ನು ನೆಡಲಾಯಿತು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಮೇಯರ್ ವಿನಾಯಕ ಪೈಲ್ವಾನ್, ಪಾಲಿಕೆಯ ಆಯುಕ್ತೆ ರೇಣುಕಾ, ಪಾಲಿಕೆ ಆಡಳಿತ ಪಕ್ಷದ ನಾಯಕ ಹಾಗೂ ಸದಸ್ಯ ಗಡಿಗುಡಾಳ್ ಮಂಜುನಾಥ್, ಪರಿಸರ ಜಗದೀಶ್, ಬಸವಣ್ಣ, ಅಜಯ್ ಪ್ರಕಾಶ್, ಪಾಲಿಕೆಯ ತೋಟಗಾರಿಕೆ ಸಿಬ್ಬಂದಿ ಹಾಜರಿದ್ದರು.

  • Related Posts

    ಜಿಲ್ಲಾ ಪೊಲೀಸ್ ವತಿಯಿಂದ ರಸ್ತೆ ಸುರಕ್ಷತಾ ಮಾಸಾಚರಣೆಯ ಸಮಾರೋಪ ಸಮಾರಂಭ…

    ದಿನಾಂಕ: 01-01-2025 ರಿಂದ 31-01-2025 ಒಂದು ತಿಂಗಳ ಕಾಲ ಪ್ರತಿ ವರ್ಷದಂತೆ ರಸ್ತೆ ಸುರಕ್ಷತಾ ಮಾಸಾಚರಣೆಯನ್ನು ಜಿಲ್ಲಾ ಪೊಲೀಸ್ ವತಿಯಿಂದ ಹಮ್ಮಿಕೊಂಡಿದ್ದು, ಇಂದು ದಾವಣಗೆರೆ ನಗರದ ರೇಣುಕಾ ಮಂದಿರದ ಕಲ್ಯಾಣ ಮಂಟಪದಲ್ಲಿ ರಸ್ತೆ ಸುರಕ್ಷತಾ ಮಾಸಾಚರಣೆಯ ಸಮಾರೋಪ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ…

    ಶಾಲಾ ಆವರಣ ಅನೈತಿಕ ತಾಣಗಳಾಗಬಾರದು, ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ಸಿಗಬೇಕು, ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್….

    ದಾವಣಗೆರೆ, ಜನವರಿ.28 : ಜಿಲ್ಲೆಯಲ್ಲಿನ ಎಲ್ಲಾ ಸರ್ಕಾರಿ ಶಾಲೆಗಳಿಗೆ ಕಾಂಪೌಂಡ್ ಸೇರಿದಂತೆ ಕೊಠಡಿ, ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಆಸನ ವ್ಯವಸ್ಥೆಯನ್ನು ಕಲ್ಪಿಸುವ ಮೂಲಕ ಗುಣಮಟ್ಟದ ಶಿಕ್ಷಣ ಭವಿಷ್ಯದ ನಾಗರಿಕರಾಗುವ ಪ್ರತಿ ಮಕ್ಕಳಿಗೆ ಸಿಗುವಂತೆ ಮಾಡಬೇಕು, ಆದರೆ ಸಂಜೆಯ ವೇಳೆ…

    Leave a Reply

    Your email address will not be published. Required fields are marked *

    error: Content is protected !!